ಅಬುಧಾಬಿಯಲ್ಲಿ ಮೊಟ್ಟ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ, ಇದರ ವಿಶೇಷತೆಗೇಳೇನು?
ಅಬುಧಾಬಿ, ಫೆಬ್ರವರಿ, 14: ಇತ್ತೀಚೆಗಷ್ಟೇ ಭಾರತದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಮಾಡಲಾಗಿತ್ತು. ಇದೀಗ ದೇಶ ಅಲ್ಲದೆ ವಿದೇಶಗಳಲ್ಲೂ ಕೂಡ ಹಿಂದೂ ದೇವಾಲಯಗಳು ತಲೆಎತ್ತುತ್ತಿವೆ. ಹಾಗೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 14) ಅಬುಧಾಬಿಯಲ್ಲಿ ಮೊಟ್ಟ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟನೆ ಮಾಡಿದ್ದು, ಇದು ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ.
ಇಂದು ಅಬುಧಾಬಿಯಲ್ಲಿ ಉದ್ಘಾನೆಯಾದ ಹಿಂದೂ ದೇವಾಲಯದ ವಿಶೇಷತೆ ಏನು? ಇದನ್ನು ಯಾವುದರಿಂದ ನಿರ್ಮಾರ್ಣ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಪ್ರಧಾನಿ ಮೋದಿ ಅವರು 2015ರಿಂದ ಯುಎಇಗೆ 7ನೇ ಬಾರಿ ಭೇಟಿ ನೀಡುತ್ತಿದ್ದು, ಅಬುಧಾಬಿಯ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ದೇವಸ್ಥಾನವನ್ನು ಇಂದು (ಫೆಬ್ರವರಿ 14) ಉದ್ಘಾಟನೆ ಮಾಡಿದ್ದಾರೆ. ಈ ದೇವಾಲಯ ಭಕ್ತರಿಗೆ ಮಾರ್ಚ್ 1ರಿಂದ ಬಾಗಿಲು ತೆರೆದುಯುತ್ತದೆ ಎಂದು ತಿಳಿದುಬಂದಿದೆ. ಈ ದೇವಾಲಯವು ಹಿಂದೂ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಅನ್ವೇಷಿಸಲು ಮತ್ತು ತಿಳಿದುಕೊಳ್ಳಲು ಎಲ್ಲಾ ಧರ್ಮಗಳ ಜನರಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
2018ರಲ್ಲಿ ಪ್ರಧಾನಿ ಮೋದಿಯವರು ಯುಎಇಗೆ ಭೇಟಿ ನೀಡಿದ ವೇಳೆ ಅಬುಧಾಬಿಯಲ್ಲಿ BAPS ಹಿಂದೂ ಮಂದಿರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಈ ದೇವಾಲಯವು ಏಳು ಶಿಖರಗಳನ್ನು ಒಳಗೊಂಡಿದೆ. ಈ ಹಿಂದೂ ಮಂದಿರವನ್ನು ಯುಎಇ ಸರ್ಕಾರವು ದಾನವಾಗಿ ನೀಡಿದ 27 ಎಕರೆ (11 ಹೆಕ್ಟೇರ್) ಜಾಗದಲ್ಲಿ ನಿರ್ಮಿಸಲಾಗಿದೆ.
ಅಬುಧಾಬಿಯಲ್ಲಿರುವ ದೇವಸ್ಥಾನವನ್ನು BAPS ಸ್ವಾಮಿನಾರಾಯಣ ಸಂಸ್ಥೆ ನಡೆಸುತ್ತಿದೆ. ಇದು ಆಧ್ಯಾತ್ಮಿಕ, ಸ್ವಯಂಸೇವಕ-ಚಾಲಿತ ಫೆಲೋಶಿಪ್ ಎಂದು ಕರೆದುಕೊಳ್ಳುತ್ತದೆ. 200 ವರ್ಷಗಳ ಇತಿಹಾಸವನ್ನು ಪ್ರತಿಪಾದಿಸುವ ಈ ಸಂಘಟನೆಯು ಮೋದಿಯವರ ತವರು ರಾಜ್ಯ ಗುಜರಾತ್ನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications