ಸೂರತ್ನಲ್ಲಿ 3,400 ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಸೂರತ್, ಸೆಪ್ಟೆಂಬರ್ 29: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗುಜರಾತ್ನ ಸೂರತ್ನಲ್ಲಿ 3,400 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿರುವ ಅವರು, ರಾಜ್ಯದಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಸೂರತ್ಗೆ ಆಗಮಿಸಿದ ಪ್ರಧಾನಿಯವರನ್ನು ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದರು. ನವರಾತ್ರಿಯ ಈ ಸಮಯದಲ್ಲಿ ಮೋದಿ ಆಗಮನ ಸೂರತ್ನಲ್ಲಿ ಮತ್ತಷ್ಟು ಹಬ್ಬದ ಕಳೆಯನ್ನು ಹೆಚ್ಚಿಸಿದೆ.
"ಗುಜರಾತ್ನಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಯಾದ ನಂತರ, ಮನೆಗಳ ನಿರ್ಮಾಣವೂ ವೇಗಗೊಂಡಿದೆ. ಸೂರತ್ನಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು 4 ಕೋಟಿ ಬಡ ರೋಗಿಗಳು ಉಚಿತ ಚಿಕಿತ್ಸೆ ಪಡೆದಿದ್ದಾರೆ" ಎಂದು ಪ್ರಧಾನಿ ಮೋದಿ ಹೇಳಿದರು.
|
4 ಕೋಟಿ ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ
ಭಾರತದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ 4 ಕೋಟಿಗೂ ಹೆಚ್ಚು ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ 32 ಲಕ್ಷ ಗುಜರಾತ್ನವರು ಮತ್ತು 1.25 ಲಕ್ಷ ಸೂರತ್ನವರು ಎಂದು ಪ್ರಧಾನಿ ಮೋದಿ ಹೇಳಿದರು. ಗುಜರಾತ್ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿ ಬುಧವಾರ ಅಹಮದಾಬಾದ್ನಲ್ಲಿ ಡ್ರೋನ್ ಪ್ರದರ್ಶನದ ಚಿತ್ರಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಇದು ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನೆಗೆ ಅಹಮದಾಬಾದ್ ಸಿದ್ಧವಾಗಿರುವುದನ್ನು ತೋರಿಸುತ್ತದೆ.
ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಗುಜರಾತ್ನಲ್ಲಿ ಮೂಲಸೌಕರ್ಯ, ಕ್ರೀಡೆ ಮತ್ತು ಆಧ್ಯಾತ್ಮಿಕ ತಾಣಗಳಿಗೆ ಅಡಿಪಾಯ ಹಾಕುವುದು ನನ್ನ ಗುರಿ. ಸೂರತ್ ಜನ ಏಕತೆಗೆ ಉತ್ತಮ ಉದಾಹರಣೆಯಾಗಿದ್ದಾರೆ. ಭಾರತದಾದ್ಯಂತ ಇಂತಹ ಜನರು ವಾಸಿಸುತ್ತಿದ್ದಾರೆ. ಸೂರತ್ ಈ ವಿಚಾರದಲ್ಲಿ ಮಿನಿ-ಇಂಡಿಯಾ ಆಗಿದೆ" ಎಂದರು.
|
ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ
ಸೂರತ್ನಲ್ಲಿ ಪ್ರಧಾನ ಮಂತ್ರಿ ಪ್ರಧಾನಮಂತ್ರಿ ಅವರು 3400 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಲೋಕಾರ್ಪಣೆಗೊಳಿಸಿದರು. ಇವುಗಳಲ್ಲಿ ನೀರು ಸರಬರಾಜು, ಒಳಚರಂಡಿ ಯೋಜನೆಗಳು, ಡ್ರೀಮ್ ಸಿಟಿ, ಜೀವವೈವಿಧ್ಯ ಉದ್ಯಾನವನ ಮತ್ತು ಸಾರ್ವಜನಿಕ ಮೂಲಸೌಕರ್ಯ, ಪಾರಂಪರಿಕ ಪುನರುಜ್ಜೀವನ, ಸಿಟಿ ಬಸ್/ ಬಿಆರ್ ಟಿಎಸ್ ಮೂಲಸೌಕರ್ಯ, ಎಲೆಕ್ಟ್ರಿಕ್ ವಾಹನ ಮೂಲಸೌಕರ್ಯ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಅಭಿವೃದ್ಧಿ ಕಾರ್ಯಗಳಂತಹ ಇತರ ಅಭಿವೃದ್ಧಿ ಕಾಮಗಾರಿಗಳು ಸೇರಿವೆ.
|
ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ
ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡುತ್ತಿರುವ ಡೈನಾಮಿಕ್ ಸಿಟಿ ಸೂರತ್ನಲ್ಲಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು. ಗುರುವಾರ ಮತ್ತು ಶುಕ್ರವಾರದಂದು ಅಹಮದಾಬಾದ್, ಗಾಂಧಿನಗರ, ಸೂರತ್, ಭಾವನಗರ ಮತ್ತು ಅಂಬಾಜಿಗೆ ಪ್ರಧಾನಿ ಭೇಟಿ ನೀಡಲಿದ್ದು, ಅಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಸೂರತ್ ನಗರವು ಜನರ ಒಗ್ಗಟ್ಟು ಮತ್ತು ಸಾರ್ವಜನಿಕ ಸಹಭಾಗಿತ್ವ ಎರಡಕ್ಕೂ ಅದ್ಭುತ ಉದಾಹರಣೆಯಾಗಿದೆ. ಸೂರತ್ನ ಅಭಿವೃದ್ಧಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, "ಸೂರತ್ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನಗರದ ಸಂಸ್ಕೃತಿ, ಸಮೃದ್ಧಿ ಮತ್ತು ಆಧುನಿಕತೆಯನ್ನು ಪ್ರತಿಬಿಂಬಿಸುತ್ತದೆ. ಸೂರತ್ಗೆ ವಿಮಾನ ನಿಲ್ದಾಣ ಏಕೆ ಬೇಕು ಮತ್ತು ಈ ನಗರದ ಶಕ್ತಿ ಏನು ಎಂದು ಅಂದಿನ ದೆಹಲಿ ಸರ್ಕಾರಕ್ಕೆ ಹೇಳಲು ನಾವು ಸುಸ್ತಾಗಿದ್ದೇವೆ. ಇಂದು, ಇಲ್ಲಿಂದ ಹಲವಾರು ವಿಮಾನಗಳು ಹೊರಡುತ್ತವೆ" ಎಂದು ಮೋದಿ ಹೇಳಿದರು.

ಸೂರತ್ ಎಲೆಕ್ಟ್ರಿಕಲ್ ವಾಹನಗಳಿಗೆ ಹೆಸರುವಾಸಿ
ಸೂರತ್ ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ ಎಂದು ಶ್ಲಾಘಿಸಿದ ಪ್ರಧಾನಿ ಮೋದಿ, "ಸೂರತ್ ಎಲೆಕ್ಟ್ರಿಕಲ್ ವಾಹನಗಳಿಗೆ ಹೆಸರುವಾಸಿಯಾಗಲಿದೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕೆಲಸ ಮಾಡುತ್ತಿದೆ. ಇಲ್ಲಿ 500 ಕ್ಕೂ ಹೆಚ್ಚು ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲಾಗುವುದು. ಇಲ್ಲಿ ನಾವು ಅಭಿವೃದ್ಧಿಯ ಈ ವೇಗವನ್ನು ಮುಂದುವರಿಸುತ್ತೇವೆ" ಎಂದು ಮೋದಿ ಹೇಳಿದ್ದಾರೆ.
ಡೈಮಂಡ್ ರಿಸರ್ಚ್ ಅಂಡ್ ಮರ್ಕೆಂಟೈಲ್ (ಡ್ರೀಮ್) ಸಿಟಿ ಯೋಜನೆಯು ಸೂರತ್ ಅನ್ನು ಜಗತ್ತಿನಾದ್ಯಂತ ಸುರಕ್ಷಿತ ಮತ್ತು ಅನುಕೂಲಕರ ವಜ್ರದ ವ್ಯಾಪಾರ ಕೇಂದ್ರವಾಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಡಿಸೆಂಬರ್ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನವೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು ಭಾರೀ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿ ಸುಮಾರು ಮೂರು ದಶಕಗಳ ಕಾಲ ಆಡಳಿತ ನಡೆಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications