660 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ-ಎಲ್ಲಿ?-ಇಲ್ಲಿದೆ ಮಾಹಿತಿ

ರಾಂಚಿ, ಸೆಪ್ಟೆಂಬರ್‌, 15: ದೇಶದಲ್ಲಿ ಈಗಾಗಲೇ ಲೋಕಸಭಾ ಚುನಾವಣೆ ಮುಗಿದಿದ್ದು, ಇನ್ನು ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿಯವರು ಜಾರ್ಖಂಡ್‌ಗೆ ಆಗಾಗ ಭೇಟಿ ನೀಡುತ್ತಲೇ ಇದ್ದಾರೆ. ಇದೀಗ ಇದರ ನಡುವೆಯೇ ಇಂದು (ಸೆಪ್ಟೆಂಬರ್‌ 15) ರಾಜ್ಯದಲ್ಲಿ 660 ಕೋಟಿ ಮೊತ್ತದ ಯೋಜನೆಗಳಿಗೆ ವರ್ಚುವಲ್‌ ಮೂಲಕ ಚಾಲನೆ ನೀಡಿದರು.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಬಹುತೇಕ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದರ ನಡುವೆಯೇ ಈ ಡರಡು ರಾಜ್ಯಗಳಿಗೆ ಪ್ರಧಾನಿ ಮೋದಿ ಆಗಾಗ ಭೇಟಿ ನೀಡುತ್ತಲೇ ಇದ್ದು, ಇದು ಮತದಾರರನ್ನು ಸೆಳೆಯುವ ಬಿಜೆಪಿ ಪ್ಲಾನ್‌ ಎನ್ನುವ ಮಾತುಗಳು ಕೇಳಿಬರುತ್ತಿವೆ.

PM Modi launched to projects worth 660 crores in Jharkhand know details

ಇನ್ನು ಪ್ರಧಾನಮಂತ್ರಿ ಗ್ರಾಮೀಣ ಅವಾಸ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್‌ 15) ಜಾರ್ಖಂಡ್‌ನ ರಾಂಚಿಯಲ್ಲಿ 32,000 ಫಲಾನುಭವಿಗಳಿಗೆ ವರ್ಚುವಲ್‌ ಮೂಲಕ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿದರು. ಇದೇ ವೇಳೆ ಮನೆಗಳ ನಿರ್ಮಾಣಕ್ಕೆ ನಿಡುವ ಮೊದಲ ಕಂತಿನ 32 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದರು.

ಆವಾಸ್ ಯೋಜನೆಯಡಿ ಜಾರ್ಖಂಡ್‌ನಲ್ಲಿ ಬಡವರಿಗೆ 1,13,400 ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಅನುಮೋದನೇ ನೀಡಿದೆ. ಇದೇ ಸಂದರ್ಭದಲ್ಲಿ ದೇಶಾದ್ಯಂತ ಯೋಜನೆಯ ಪ್ರಯೋಜನೆ ಪಡೆದ 46,000 ಫಲಾನುಭವಿಗಳಿಗೆ ಮನೆಗಳ ಕೀಗಳನ್ನು ವರ್ಚುವಲ್‌ ಮೂಲಕ ಹಸ್ತಾಂತರಿಸುವ ಪ್ರಕ್ರಿಯೆ ನಡೆಸಿದರು.

ಜಾರ್ಖಂಡ್‌ನಲ್ಲಿ ಒಟ್ಟು 660 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಮೋದಿ ವರ್ಚುವಲ್‌ ಮೂಲಕ ಚಾಲನೆ ನೀಡಿದರು. ದಿಯೋಘರ್‌ ಜಿಲ್ಲೆಯ ಮಧುಪುರ್‌ ಬೈಪಾಸ್ ಲೈನ್‌ ಮತ್ತು ಹಜಾರಿಬಾಗ್‌ ಟೌನ್‌ ಕೋಚಿಂಗ್ ಡಿಪೋದ ಶಂಕುಸ್ಥಾಪನೆ ಕೊ ಈ ಯೋಜನೆಯಲ್ಲಿ ಸೇರಿದೆ ಎಂದು ತಿಳಿದುಬಂದಿದೆ.

6 ವಂದೇ ಭಾರತ್ ರೈಲುಗಳಿಗೆ ಚಾಲನೆ: ಅಷ್ಟೇ ಅಲ್ಲದೆ, ನರೇಂದ್ರ ಮೋದಿ ಅವರು ಇಂದು ಜಾರ್ಖಂಟ್‌ನ ರಾಂಚಿಯಲ್ಲಿ 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಯಾವ್ಯಾವ ಮಾರ್ಗಗಳಿಗೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶದ ವಂದೇ ಭಾರತ್ ರೈಲುಗಳಿಗೆ ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು.

ಇದಕ್ಕೂ ಮುಂಚಿತವಾಗಿ ಟಾಟಾನಗರದಿಂದ ರೈಲುಗಳಿಗೆ ಚಾಲನೆ ನೀಡಲು ಪ್ರಧಾನಿ ನಿರ್ಧರಿಸಿದ್ದರು. ಆದರೆ ಅಸ್ಪಷ್ಟ ಗೋಚರ ಹಾಗೂ ಪ್ರತಿಕೂಲ ಹವಾಮಾನದ ಕಾರಣ ಅವರ ಹೆಲಿಕಾಪ್ಟರ್ ಅಲ್ಲಿ ಟೇಕ್ ಆಫ್ ಆಗಲಿಲ್ಲ. ಆದ್ದರಿಂದ ರಾಂಚಿಯಿಂದ ನೂತನ ರೈಲುಗಳ ಸಂಚಾರವನ್ನು ಉದ್ಘಾಟಿಸಿದರು.

ಈ ವೇಳೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಟಾಟಾನಗರ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಹೊಸ ರೈಲುಗಳು ಟಾಟಾನಗರ-ಪಾಟ್ನಾ, ಬ್ರಹ್ಮಪುರ-ಟಾಟಾನಗರ, ರೂರ್ಕೆಲಾ-ಹೌರಾ, ದಿಯೋಘರ್-ವಾರಣಾಸಿ, ಭಾಗಲ್ಪುರ್-ಹೌರಾ ಮತ್ತು ಗಯಾ-ಹೌರಾ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ತಿಳಿಸದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+