Indian Railways: 'ಮಲ್ಟಿ ಟ್ರ್ಯಾಕಿಂಗ್' ಯೋಜನೆಗಳಿಗೆ ಕೇಂದ್ರ ಅನುಮೋದನೆ: ಈ 6 ರಾಜ್ಯಗಳಿಗೆ ಏನೆಲ್ಲಾ ಲಾಭ ಗೊತ್ತೆ?
ಬೆಂಗಳೂರು, ಫೆಬ್ರವರಿ 09: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಗೆ ಕೋಟ್ಯಂತರ ರೂಪಾಯಿಯ 6 ಯೋಜನೆಗಳಿಗೆ ಗುರುವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಒಟ್ಟು ಅಂದಾಜು 12,343 ಕೋಟಿ ರೂಪಾಯಿ ವೆಚ್ಚದ ಪ್ರಮುಖ ಆರು ಯೋಜನೆಗಳ ಅನುಷ್ಠಾನಕ್ಕೆ ಒಪ್ಪಿಗೆ ನೀಡಿದೆ. ವಿಶೇಷವೆಂದರೆ ಈ ಯೋಜನೆಗಳಿಗೆ ಕೇಂದ್ರ ಸರ್ಕಾರವೇ ಸಂಪೂರ್ಣ ಅಂದರೆ ಶೇಕಡಾ 100 ರಷ್ಟು ಹಣ ಒದಗಿಸಲಿದೆ ಅಂತಲೂ ಮಾಹಿತಿ ಲಭ್ಯವಾಗಿದೆ.

ಈ ಯೋಜನೆಯಿಂದ ಏನೆಲ್ಲ ಅನುಕೂಲ?
ರೈಲ್ವೆ ಸಚಿವಾಲಯದ ಪ್ರಕಾರ, ಮಲ್ಟಿ ಟ್ರ್ಯಾಕಿಂಗ್ ಯೋಜನೆ ಪ್ರಸ್ತಾವನೆಗಳನ್ನು ರೈಲ್ವೆ ಇಲಾಖೆ ಪ್ರಸ್ತಾಪಿಸಿದ್ದು, ಅದರ ಕಾರ್ಯಾಚರಣೆಯನ್ನು ಸರಾಗಗೊಳಿಸುವ ಮೂಲಕ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ. ಭಾರತೀಯ ರೈಲ್ವೆ ಜಾಲ ವ್ಯಾಪ್ತಿಯಲ್ಲಿ ಅತ್ಯಧಿಕ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ಯೋಜಿಸಲಾಗಿದೆ.
ಭಾರತೀಯ ರೈಲ್ವೆಯ ಈ ಹೊಸ ಅರು ಯೋಜನೆಗಳು ಪ್ರಧಾನಮಂತ್ರಿ ಮೋದಿಯವರ ಹೊಸ ಭಾರತದ ಕಟ್ಟುವ ಕನಿಸಿನ ದೂರದೃಷ್ಟಿಗೆ ಅನುಗುಣವಾಗಿದೆ. ಯೋಜನೆ ಜಾರಿಯಾಗುವ ಆಯಾ ಪ್ರದೇಶದ ಜನರನ್ನು "ಆತ್ಮನಿರ್ಭರ್" ಮಾಡುವ ಮೂಲಕ ಆ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿ ಆಗಲಿದೆ. ಜೊತೆಗೆ ಉದ್ಯೋಗ/ಸ್ವಯಂ ಉದ್ಯೋಗ ಅವಕಾಶಗಳನ್ನು ಸೃಷ್ಟಿಯಾಗುತ್ತವೆ ಎಂದು ಕೇಂದ್ರ ತಿಳಿಸಿದೆ.

6 ರಾಜ್ಯಗಳ 18 ಜಿಲ್ಲೆಗಳಲ್ಲಿ ಅಭಿವೃದ್ಧಿ
ಸದರಿ ಈ 6 ಯೋಜನೆಗಳು 6 ರಾಜ್ಯಗಳ 18 ಜಿಲ್ಲೆಗಳನ್ನು ಒಳಗೊಂಡು ಜಾರಿಗೆ ಪ್ರಸ್ತಾಪಗೊಂಡಂತಹ ಯೋಜನೆಗಳಾಗಿವೆ. 'ತೆಲಂಗಾಣ, ಗುಜರಾತ್, ರಾಜಸ್ಥಾನ, ಅಸ್ಸಾಂ, ಆಂಧ್ರಪ್ರದೇಶ ಹಾಗೂ ನಾಗಾಲ್ಯಾಂಡ್' ರಾಜ್ಯಗಳಲ್ಲಿ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವೂ ಈ ಯೋಜನೆಯಿಂದ ಸುಮಾರು 1020 ಕಿಲೋ ಮೀಟರ್ನಷ್ಟು ಹೆಚ್ಚಿಸುತ್ತವೆ. ಸುಮಾರು ಮೂರು ಕೋಟಿ ಮಾನವ ದಿನಗಳ ಉದ್ಯೋಗವನ್ನು ಒದಗಿಸುತ್ತವೆ ಎಂದು ಮಾಹಿತಿ ನೀಡಿದೆ.
ಬಹು ಮಾದರಿ ಸಾರಿಗೆ ಸಂಪರ್ಕಕ್ಕಾಗಿ ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಚಿಂತನೆಯ ಮಾಸ್ಟರ್ ಪ್ಲಾನ್ ಫಲಿತಾಂಶದ ಭಾಗವಾಗಿ ಈ ರೈಲ್ವೆ ಯೋಜನೆಗಳು ಸಾಕಾರಗೊಳ್ಳಲಿವೆ. ಎಲ್ಲವು ಅಂದುಕೊಂಡಂತೆ ಆದರೆ ಉದ್ದೇಶಿತ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ತಡೆ ರಹಿತ ಸಾರ್ವಜನಿಕರ ಪ್ರಯಾಣ ಮತ್ತು ಸರಕು ಮತ್ತು ಸೇವೆಗಳ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ಸಚಿವಾಲಯ ವಿಶ್ವಾಸ ವ್ಯಕ್ತಪಡಿಸಿದೆ.
ಸರಕು ಸಾಗಾಣೆಗೆ ಈ ಯೋಜನೆಗಳು ಪೂರಕ
ಇನ್ನೂ ಈ 6 ಮಲ್ಟಿ ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನ ನೀಡಿದ್ದರ ಫಲವಾಗಿ ಭವಿಷ್ಯದಲ್ಲಿ ಕೃಷಿ ಉತ್ಪನ್ನಗಳು, ಆಹಾರ ಧಾನ್ಯಗಳು, ಆಹಾರ ಸರಕುಗಳು, ಸಿಮೆಂಟ್, ಕಬ್ಬಿಣ, ರಸಗೊಬ್ಬರಗಳು, ಸುಣ್ಣದಕಲ್ಲು, ಪಿಒಎಲ್, ಕಲ್ಲಿದ್ದಲು, ಉಕ್ಕು, ಹಾರುಬೂದಿ, ಕ್ಲಿಂಕರ್, ಕಂಟೈನರ್ ಮುಂತಾದ ಸರಕುಗಳ ಸಾಗಣೆಗೆ ಈ ಮಾರ್ಗಗಳು ಮತ್ತಷ್ಟು ಉಪಯೋಗ ಒದಗಿಸಲಿವೆ. ಜೊತೆಗೆ ಹೆಚ್ಚುವರಿ ಸಾಗಾಣೆಗೂ ಈ ಯೋಜನೆ ಪೂರಕವಾಗಿವೆ. ಯೋಜನೆಗಳ ಆರಂಭ, ಟೆಂಡರ್ ಮುಂತಾದ ಮಾಹಿತಿ ಶೀಘ್ರವೇ ಬಹಿರಂಗಗೊಳ್ಳಲಿವೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications