PMGKAY Extend: 'ಅಕ್ಕಿ ವಿತರಣೆ' ಯೋಜನೆ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ, ಎಷ್ಟು ವರ್ಷ? ಮಾಹಿತಿ
ನವದೆಹಲಿ, ನವೆಂಬರ್ 29: ಕೊರೊನಾ ಕಾಲದಲ್ಲಿ ಆರಂಭಿಸಿದ್ದ ಉಚಿತ ಆಹಾರ ಧಾನ್ಯಗಳನ್ನು ನೀಡುವ 'ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ (PMGKAY)' ಯೋಜನೆಯನ್ನು ಇನ್ನೂ ಐದು ವರ್ಷಗಳ ಅವಧಿಯವರೆಗೆ ಮುಂದುವರಿಸಲ
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
PMGKAY ಯೋಜನೆಯನ್ನು ಕೋವಿಡ್ ಸಾಂಕ್ರಾಮಿಕ ಆರಂಭದಲ್ಲಿ ಜನರಿಗೆ ಅನುಕೂಲವಾಗಲೆಂದು ಆರಂಭಿಸಲಾಯಿತು. ಅರ್ಹ ಪಡಿತರ ಚೀಟಿ ಹೊಂದಿರುವವರಿಗೆ (ಗೋಧಿ/ ಅಕ್ಕಿ)ಐದು ಕೇಜಿ ವಿತರಣೆ ಮಾಡಲಾಗುತ್ತಿತ್ತು. ಈ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಕೇಂದ್ರ ವಿಸ್ತರಿಸಲಿದೆ ಎಂದು ಸ್ವತಃ ಪ್ರಧಾನಿಯವರೇ ಕೆಲವು ಚುನಾವಣೆ ಭಾಷಣಗಳಲ್ಲಿ ತಿಳಿಸಿದ್ದರು.

ಏಪ್ರಿಲ್ 2020 ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ಪ್ರಾರಂಭಿಸಲಾಯಿತು. ಈ ಮೂಲಕ ಕೋವಿಡ್ನಿಂದ ತೊಂದರೆಗೀಡಾದ ಬಡವರಿಗೆ, ಆರ್ಥಿಕವಾಗಿ ಸಂಕಷ್ಟ ಎದುರಿಸಿದವರಿಗೆ ನೆರವಾಗುವಂತೆ ವಿತರಿಸಲಾಗುತ್ತಾ ಬರಲಾಗಿತ್ತು. ಅದು ಕೆಲವು ಬಾರಿ ವಿಸ್ತರಣೆ ಆಗಿತ್ತು. ಇದೀಗ ಮುಂದಿನ ಐದು ವರ್ಷಗಳವರೆಗೆ ವಿಸ್ತರನೇ ಆಗಿದೆ.
ಮೊದ ಮೊದಲು 2020-21ರಲ್ಲಿ ಏಪ್ರಿಲ್ ನಿಂದ ಜೂನ್ ವರೆಗೆ ಕೇವಲ ಮೂರು ತಿಂಗಳ ಅವಧಿಗೆ PMGKAY ಯೋಜನೆ ವಿಸ್ತರಣೆ ಮಾಡಲಾಯಿತು. ನಂತರ ಯೋಜನೆಯ ವಿತರಣೆ ಸತತ ಏಳು ಹಂತಗಳಲ್ಲಿ ಡಿಸೆಂಬರ್ 2022ರವರೆಗೆ ವಿಸ್ತರಣೆ ಆಯಿತು.

ಯೋಜನೆಯಿಂದ 80 ಕೋಟಿ ಫಲಾನುಭವಿಗಳಿಗೆ ಪ್ರಯೋಜನೆ
ನವೆಂಬರ್ 4 ರಂದು ಛತ್ತೀಸ್ಗಢ ಚುನಾವಣೆ ರ್ಯಾಲಿಯಲ್ಲಿ ಪ್ರಧಾನಿ ಮೋದಿಯವರು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರ ಪ್ರಕಟಿಸಿದ್ದರು. ಇದೀಗ ಆ ನಿರ್ಧಾರವನ್ನು ಸಂಪುಟದಲ್ಲಿ ಅಂಗೀಕರಿಸಲಾಗಿದೆ.
ಬಿಜೆಪಿ ಸರ್ಕಾರವು ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರ ನೀಡುವ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಿದ್ದೇವೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನನಗೆ ನೀಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications