51,000 ಕೋಟಿ ರೂಪಾಯಿ ಮಂಜೂರಿಗೆ ಕೇಂದ್ರ ಸಂಪುಟ ಅಸ್ತು: ಯೋಜನೆಗಳು ಯಾವುವು?..PM Dhan Dhanya Yojana
ಬೆಂಗಳೂರು, ಜುಲೈ 17: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ದೇಶದ ಕೃಷಿಕರಿಗೆ ಸಹಾಯವಾಗುವ ಮಹತ್ವ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಬಿಜೆಪಿ ಸರ್ಕಾರವು ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗೆ ಅನುಮೋದನೆ ನೀಡಿದೆ. ಅಲ್ಲದೇ ಪ್ರಮುಖ ಯೋಜನೆಗಳಿಗೆಬ 51,000 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಯಾವೆಲ್ಲ ರೈತ ಯೋಜನೆಗಳಿಗೆ ಅನುಕೂಲವಾಗಲಿವೆ, ಅನುಮೋದನೆ ಪಡೆದ ಕಾರ್ಯಕ್ರಮಗಳ ವಿವರ ಇಲ್ಲಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆತ್ಮನಿರ್ಭರ ಕೃಷಿಯತ್ತ ಬೃಹತ್ ಹೆಜ್ಜೆ ಇಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ 'ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ'ಗೆ ಅನುಮೋದನೆ ನೀಡಿದೆ. ಈ ಯೋಜನೆಯು ರೈತರ ಆದಾಯವನ್ನು ಹೆಚ್ಚಿಸುತ್ತದೆ. ಬೆಳೆ ವೈವಿಧ್ಯೀಕರಣವನ್ನು ಉತ್ತೇಜಿಸುತ್ತದೆ. ಸುಸ್ಥಿರ ಕೃಷಿ ಪದ್ಧತಿಯನ್ನು ಉತ್ತೇಜಿಸುವುದರೊಂದಿಗೆ ಸ್ಥಳೀಯವಾಗಿ ಉದ್ಯೋಗಗಳನ್ನೂ ಸೃಷ್ಟಿಸುತ್ತದೆ ಎಂದು ಅವರು ವಿವರಿಸಿದರು.

ದೇಶ ಕೃಷ್ಯ ವ್ಯವಸ್ಥೆಯಲ್ಲಿನ ಉತ್ಪಾದಕತೆ ಹೆಚ್ಚಿಸಲು ಹಾಗೂ ಸುಸ್ಥಿರ ಕೃಷಿ ಉತ್ತೇಜಿಸುತ್ತಿದೆ. 'ಪಿಎಂ ಧನ್-ಧಾನ್ಯ' ಕೃಷಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಂಪುಟ ಸಭೆಸಭೆಯಲ್ಲಿ 24 ಸಾವಿರ ಕೋಟಿ ಹೂಡಿಕೆಗೆ ಮಾಡಲು ನಿರ್ಧರಿಸಲಾಗಿದೆ.
2030ರ ವೇಳೆಗೆ ಮರುಬಳಕೆ ಇಂಧನ ಸಾಮರ್ಥ್ಯ 60 ಗಿಗಾವ್ಯಾಟ್ಗೆ ಹೆಚ್ಚಿಸಲು 20 ಸಾವಿರ ಕೋಟಿ ರೂ.ಹಾಗೂ ಪರಿಸರ ಇಂಧನ ಸಾಮರ್ಥ್ಯ ವಿಸ್ತರಿಸಲು ಇಂಧನ ಸಂಸ್ಥೆ ಎನ್ಐಆರ್ಎಲ್ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲು ತಿರ್ಮಾನಿಸಲಾಯಿತು. ಕೃಷಿ, ನವೀಕರಣ ಇಂಧನ ಸೇರಿ 3 ವಲಯಗಳಲ್ಲಿ 51 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು.
* ಪಿಎಂ ಧನಧಾನ್ಯ ಯೋಜನೆಗೆ 24,000 ಕೋಟಿ
* ನವೀಕರಿಸಬಲ್ಲ ಇಂಧನ ಯೋಜನೆ 20,000 ಕೋಟಿ
* ಎನ್ಐಆರ್ಎಲ್ ನಲ್ಲಿ 7000 ಕೋಟಿ ಹೂಡಿಕೆ
* ಒಟ್ಟು 51,000 ಕೋಟಿ ಮಂಜೂರು

ಪಿಎಂ ಧನ ಧಾನ್ಯ ಯೋಜನೆಗೆ ಮಂಜೂರಾತಿ ಸಿಕ್ಕಿದ್ದು, 2025 ರಿಂದ ಮುಂದಿನ ಆರು ವರ್ಷಗಳ ಜಾರಿಯಲ್ಲಿರಲಿದೆ. 100 ಜಿಲ್ಲೆಗಳಲ್ಲಿ ವ್ಯಾಪಿಸಿದೆ. ಈ ಯೋಜನೆಯಡಿ ಕೇಂದ್ರ ಸರ್ಕಾರದ 36 ಯೋಜನೆಗಳನ್ನು ಮತ್ತು 11 ಸಚಿವಾಲಯಗಳನ್ನು ಪರಸ್ಪರ ಸಂಪರ್ಕಿಸಲಾಗುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿವರಿಸಿದ್ದಾರೆ.
ರೈತರ ಬೆಳೆ ವಿಮೆ: ಏಜೆಂಟರ್ ಹಾವಳಿ ಹೆಚ್ಚಳ
ಸುದ್ದಿಗಾರರ ಜೊತೆಗೆ ಮಾತನಾಡುವಾಗ ಕರ್ನಾಟಕ ರಾಜ್ಯ ರೈತರ ಕುರಿತು ಪ್ರಸ್ತಾಪಿಸಿದ ಬೊಮ್ಮಾಯಿ ಅವರು, ರೈತರ ಬೆಳೆ ವಿಮೆ ಮಾಡಿಸುವ ಹೆಸರಿನಲ್ಲಿ ಏಜೆಂಟರ್ ಹಾವಳಿ ಹೆಚ್ಚಾಗಿದ್ದರ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದಾರೆ. ಬೆಳೆ ವಿಮೆ ಪಡೆಯಲು ಶೇಕಡಾ 20% ಬೋಗಸ್ ಫಲಾನುಭವಿಗಳು ಇರುತ್ತಿದ್ದರು ಅದನ್ನು ಈ ವರ್ಷ ತಡೆಯಲು ಸೂಚನೆ ನೀಡಿದ್ದೇನೆ ಎಂದರು.
ರೈತರಿಗೆ ಬೆಳೆ ಸಾಲ ಹೆಚ್ಚಿನ ಪ್ರಮಾಣದಲ್ಲಿ ನೀಡಬೇಕು. ಎಕರೆವಾರು ನೀಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಸಹಕಾರಿ ಬ್ಯಾಂಕ್ ಗಳ ಮೂಲಕ ಸಾಲ ಪಡೆಯದೇ ಹೊರಗುಳಿದವರನ್ನು ಸಹಕಾರಿ ವ್ಯವಸ್ಥೆಯ ವ್ಯಾಪ್ತಿಗೆ ತಂದು ಸಾಲ ನೀಡಬೇಕು. ರೈತರಿಗೆ ಸಾಲ ಕೊಡುವಾಗ ಸಿಬಿಲ್ ಮಾನದಂಡ ಅನ್ವಯಿಸಬಾರದು ಎನ್ನುವುದು ನಮ್ಮ ಚಿಂತನೆ ಇದೆ. ಇದನ್ನು ರಾಷ್ಟ್ರಮಟ್ಟದಲ್ಲಿಯೇ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications