ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮಿತಿ ಮೀರಿದೆ. ಪಾಕಿಸ್ತಾನ ಭಾರತದ ಮೇಲೆ ನಿರಂತರ ದಾಳಿ ಮಾಡಿದ ಬೆನ್ನಲ್ಲೇ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮೂರು ಸೇನಾ ಮುಖ್ಯಸ್ಥರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಕಳೆದ ಮೂರು ದಶಕಗಳಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ಎದುರಾಗಿದೆ.
ಎರಡು ವಾರಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ಬುಧವಾರ, ಭಾರತವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಅಡಗುತಾಣಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ವಾಯುದಾಳಿ ನಡೆಸುವ ಮೂಲಕ 100ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದೆ.

ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ಕೇಂದ್ರಗಳ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಕೆರಳಿರುವ ಪಾಕಿಸ್ತಾನ ಸಶಸ್ತ್ರ ಪಡೆಗಳೊಂದಿಗೆ ಮೇ 8-9ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸುವ ಪ್ರಯತ್ನ ಮಾಡಿದೆ. ಆದರೆ ಪಾಕಿಸ್ತಾನದ ದಾಳಿಯನ್ನು ಭಾರತದ ರಕ್ಷಣಾ ಪಡೆಗಳು ವಿಫಲಗೊಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ನಡೆಸಿವೆ ಎಂದು ಭಾರತೀಯ ಸೇನೆಯು ಶುಕ್ರವಾರ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.
ರಾಜನಾಥ್ ಸಿಂಗ್ ಸಭೆ
ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸುವ ಪಾಕಿಸ್ತಾನದ ಪ್ರಯತ್ನಗಳನ್ನು ವಿಫಲಗೊಳಿಸಿದ ಒಂದು ದಿನದ ನಂತರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಿಲಿಟರಿ ಅಧಿಕಾರಿಗಳ ಜೊತೆ ರಾಷ್ಟ್ರೀಯ ಭದ್ರತಾ ಸನ್ನಿವೇಶದ ಸಮಗ್ರ ಪರಿಶೀಲನೆ ನಡೆಸಿದ್ದಾರೆ.
ಕೇಂದ್ರ ಸರ್ಕಾರವು ಸೇನಾ ಮುಖ್ಯಸ್ಥರಿಗೆ ಅಗತ್ಯ ಕಾವಲುಗಾರರನ್ನು ಒದಗಿಸಲು ಅಥವಾ ನಿಯಮಿತ ಸೈನ್ಯವನ್ನು ಬೆಂಬಲಿಸಲು ಅಥವಾ ಪೂರಕವಾಗಿ ಸಜ್ಜುಗೊಳಿಸಲು ಪ್ರಾದೇಶಿಕ ಸೈನ್ಯದ (TA) ಪ್ರತಿಯೊಬ್ಬ ಅಧಿಕಾರಿ ಮತ್ತು ಪ್ರತಿಯೊಬ್ಬ ನೋಂದಾಯಿತ ವ್ಯಕ್ತಿಯನ್ನು ಕರೆಯಲು ಅಧಿಕಾರ ನೀಡಿದೆ.
ಪಾಕಿಸ್ತಾನ ಮತ್ತೆ ಮತ್ತೆ ಭಾರತವನ್ನು ಕೆಣಕುತ್ತಿದ್ದು ಪಹಲ್ಗಾಮ್ ದಾಳಿಯಲ್ಲಿ ತನ್ನ ಪಾತ್ರವಿಲ್ಲ ಎಂದು ನಾಟಕವಾಡುತ್ತಿದೆ. ಆದರೆ ಅವರಲ್ಲಿ ಇಬ್ಬರು ಪಾಕಿಸ್ತಾನದವರು ಎಂದು ಭಾರತ ಆರೋಪಿಸಿದೆ. ಗುರುವಾರ ರಾತ್ರಿ ಕೂಡ ಪಾಕಿಸ್ತಾನದ ಸೇನೆ 7 ಭಯೋತ್ಪಾದಕರಿಗೆ ಗಡಿ ದಾಟಿ ಜಮ್ಮುವಿಗೆ ನುಗ್ಗಲು ಸಹಾಯ ಮಾಡಿದ್ದು ಆದರೆ ಭಾರತದ ರಕ್ಷಣಾ ಪಡೆಗಳು 7 ಉಗ್ರರನ್ನು ಕೊಂದುಹಾಕಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications