Narendra Modi: ಅವಿಶ್ವಾಸ ನಿರ್ಣಯ ನಮಗೆ ಯಾವಾಗಲು ಅದೃಷ್ಟ: ವಿಪಕ್ಷಗಳಿಗೆ ಮೋದಿ ತಿರುಗೇಟು
ಮಣಿಪುರ ಹಿಂಸಾಚಾರ ಕುರಿತಂತೆ ವಿರೋಧ ಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ವಿಪಕ್ಷಗಳ ಆರೋಪಗಳಿಗೆ ಉತ್ತರ ನೀಡಿದ ಅವರು, ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕೆ ವಿಪಕ್ಷಗಳಿಗೆ ಧನ್ಯವಾದ ಎಂದು ಕೂಡ ಹೇಳಿದರು.
ಕೇಂದ್ರ ಸರ್ಕಾರದ ಮೇಲೆ ದೇಶದ ಜನತೆಗೆ ವಿಶ್ವಾಸವಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ, ಬಿಜೆಪಿ ಎಲ್ಲಾ ದಾಖಲೆ ಮುರಿದು ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ವ್ಯಂಗ್ಯವಾಡಿದ್ದು, 2028ರಲ್ಲೂ ಅವರು ಅವಿಶ್ವಾಸ ನಿರ್ಣಯ ಮಂಡಿಸಲಿ ಎಂದು ಹೇಳಿದರು.

ವಿರೋಧ ಪಕ್ಷಗಳ ನಾಯಕರೇ ಫೀಲ್ಡಿಂಗ್ ವ್ಯವಸ್ಥೆ ಮಾಡಿದ್ದು, ಆದರೆ ನಮ್ಮ ಕಡೆಯಿಂದ ಸಿಕ್ಸ್, ಫೋರ್ಗಳು ಹೋದವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಪಕ್ಷ ನಾಯಕರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ ಅವರು ಬರೀ ನೋಬಾಲ್ ಎಸೆಯುತ್ತಿದ್ದಾರೆ. ನಮ್ಮ ಸದಸ್ಯರು ಶತಕ ಬಾರಿಸುತ್ತಿದ್ದಾರೆ. ಎಲ್ಲರೂ ಶ್ರಮ ಪಡಿ, 2018ರಲ್ಲೂ ಇದನ್ನು ಹೇಳಿದ್ದೇ, ನಿಮಗೆ ತಯಾರಿ ಮಾಡಿಕೊಳ್ಳಲು 5 ವರ್ಷ ನೀಡಿದ್ದೇನೆ, ಏನು ದರಿದ್ರ ನೋಡಿ ಇನ್ನೂ ನೀವು ತಯಾರಿ ಮಾಡಿಕೊಂಡಿಲ್ಲ ಎಂದು ವಿಪಕ್ಷಗಳ ಬಗ್ಗೆ ವ್ಯಂಗ್ಯವಾಡಿದರು.
2024ರಲ್ಲೂ ಅಧಿಕಾರಕ್ಕೆ ಬರುತ್ತೇವೆ
ವಿಪಕ್ಷಗಳ ವಿರುದ್ಧ ಟೀಕೆಗಳನ್ನು ಮುಂದುವರೆಸಿದ ಅವರು 2024ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು. ವಿರೋಧ ಪಕ್ಷಗಳು ಮಾತನಾಡುತ್ತಿರುವುದನ್ನು ದೇಶದ ಜನತೆ ಗಮನಿಸುತ್ತಿದ್ದಾರೆ. ವಿಪಕ್ಷಗಳು ಯಾವಾಗಲೂ ನೆಗೆಟಿವ್ ಆಗಿಯೇ ಮಾತನಾಡುತ್ತಾರೆ. ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ ಎಂದರು.
1999ರಲ್ಲೂ ವಿಪಕ್ಷಗಳು ಅವಿಶ್ವಾಸ ನಿರ್ಣಯವನ್ನ ಮಂಡಿಸಿದ್ದರು. ಶರದ್ ಪವಾರ್ ಅವರು ನೇತೃತ್ವದಲ್ಲಿ ಅವಿಶ್ವಾಸ ಮಂಡನೆ ಮಾಡಲಾಗಿತ್ತು. 2003ರಲ್ಲಿ ವಾಜಪೇಯಿ ಸರ್ಕಾರ ಇದ್ದಾಗಲೂ ಮಂಡಿಸಲಾಗಿತ್ತು. ಆಗ ಸೋನಿಯಾ ಗಾಂಧಿ ವಿಪಕ್ಷ ನಾಯಕರಾಗಿದ್ದರು. 2018ರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷ ನಾಯಕಾರಿದ್ದರು. ಅಧೀರ್ ರಂಜನ್ ಅವರಿಗೆ ಮಾತನಾಡಲು ವಿಪಕ್ಷ ನಾಯಕರು ಬಿಡುತ್ತಿಲ್ಲ, ಕಾಂಗ್ರೆಸ್ ಅವರನ್ನು ಮೂಲೆಗುಂಪು ಮಾಡಿದೆ, ಬಹುಶಃ ಕೋಲ್ಕತ್ತದಿಂದ ಕರೆ ಬಂದಿರಬೇಕು ಎಂದರು.
ವಿಪಕ್ಷಗಳ ಬಗ್ಗೆ ಬಡವರ ಹಸಿವಿನ ಬಗ್ಗೆ ಚಿಂತೆಯಿಲ್ಲ, ನಿಮಗೆ ಅಧಿಕಾರದ ಬಗ್ಗೆ ಮಾತ್ರ ಚಿಂತೆ. ನೀವು ಯುವಕರ ಭವಿಷ್ಯದ ಬಗ್ಗೆ ಚಿಂತಿಸುತ್ತಿಲ್ಲ, ಆದರೆ ನಿಮ್ಮ ಭವಿಷ್ಯದ ಬಗ್ಗೆ ಮಾತ್ರ ಎಂದು ಮೋದಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
-
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಮುಂಬೈಗೆ ಪರಿಸರ ಸ್ನೇಹಿ ವಿದ್ಯುತ್ ಪೂರೈಕೆ: ಅದಾನಿ ಎನರ್ಜಿಯಿಂದ 1,000 ಮೆಗಾವ್ಯಾಟ್ ಸಾಮರ್ಥ್ಯದ ಪವರ್ ಲಿಂಕ್ ಚಾಲನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications