ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆ ತಲೆಕೆಡಿಸಿಕೊಂಡಿರುವ ಪ್ರಧಾನಿ ಮೋದಿ
ಐಜ್ವಾಲ್, ಅಕ್ಟೋಬರ್ 16: ಜನಾಂಗೀಯ ಸಂಘರ್ಷದಿಂದ ನಲುಗುತ್ತಿರುವ ಮಣಿಪುರಕ್ಕಿಂತ ಇಸ್ರೇಲ್ನಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಪ್ರಧಾನಿ ಮೋದಿ ತಲೆಕೆಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಮಿಜೋರಾಂನ ಐಜ್ವಾಲ್ ನಗರದ ರಸ್ತೆಗಳಲ್ಲಿ 2 ಕಿಮೀ ಉದ್ದದ ಪಾದಯಾತ್ರೆ ಕೈಗೊಂಡ ನಂತರ ರಾಜಭವನದ ಬಳಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನೆರೆಯ ಮಣಿಪುರ ಇನ್ನು ಮುಂದೆ ಏಕ ರಾಜ್ಯವಾಗಿ ಉಳಿದಿರುವುದಿಲ್ಲ. ಅದು ಜನಾಂಗೀಯ ಆಧಾರದ ಮೇಲೆ ಎರಡು ರಾಜ್ಯಗಳಾಗಿ ವಿಭಜನೆಯಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರಚಾರ ಕೈಗೊಂಡಿರುವ ಅವರು ಮಿಜೋರಾಂಗೆ ಎರಡು ದಿನಗಳ ಭೇಟಿಯನ್ನು ನೀಡಿದ್ದಾರೆ.
1986ರಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈಗ ದಂಗೆ ಪೀಡಿತ ಮಿಜೋರಾಂನಲ್ಲಿ ಶಾಂತಿ ನೆಲೆಸಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.
'ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್ನಲ್ಲಿ (ಇಸ್ರೇಲ್-ಹಮಾಸ್ ಸಂಘರ್ಷ) ಏನು ನಡೆಯುತ್ತಿದೆ ಎಂಬುದರ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅವರಿಗೆ ಆಸಕ್ತಿಯಿಲ್ಲ. ಅಲ್ಲಿ ಜನರು ಹತ್ಯೆಗೀಡಾದರು. ಮಹಿಳೆಯರಿಗೆ ಕಿರುಕುಳ ನೀಡಲಾಗಿದೆ ಮತ್ತು ಶಿಶುಗಳು ಕೊಲ್ಲಲ್ಪಟ್ಟವು' ಎಂದು ಅವರು ಆರೋಪಿಸಿದರು.

'ಕೆಲವು ತಿಂಗಳ ಹಿಂದೆ ನಾನು ಮಣಿಪುರಕ್ಕೆ ಹೋಗಿದ್ದೆ. ಮಣಿಪುರದ ಕಲ್ಪನೆಯನ್ನು ಬಿಜೆಪಿ ನಾಶ ಮಾಡಿದೆ. ಇದು ಇನ್ನು ಮುಂದೆ ಒಂದು ರಾಜ್ಯವಲ್ಲ. ಆದರೆ ಎರಡು ರಾಜ್ಯಗಳಾಗಿ ವಿಭಜನೆಯಾಗಿದೆ' ಎಂದು ಅವರು ಹೇಳಿದರು.
'ಪರಸ್ಪರ ಗೌರವಿಸುವ ಭಾರತದ ಕಲ್ಪನೆಯು ಸಹಿಷ್ಣುವಾಗಿದೆ. ಇತರ ವಿಚಾರಗಳು, ಧರ್ಮಗಳು ಮತ್ತು ಭಾಷೆಗಳಿಂದ ನಾವು ಕಲಿಯುತ್ತೇವೆ. ಒಟ್ಟಾರೆಯಾಗಿ ಭಾರತವು ತನ್ನನ್ನು ತಾನು ಪ್ರೀತಿಸುತ್ತದೆ. ಆದರೆ, ಈ ಪರಿಕಲ್ಪನೆ ಹೊಂದಿರುವ ಭಾರತವು ಬಿಜೆಪಿಯಿಂದ ತೀವ್ರ ಆಕ್ರಮಣಕ್ಕೆ ಒಳಗಾಗಿದೆ' ಎಂದು ಹೇಳಿದರು.
'ಅವರು (ಬಿಜೆಪಿ) ವಿವಿಧ ಸಮುದಾಯಗಳು, ಧರ್ಮಗಳು ಮತ್ತು ಭಾಷೆಗಳ ಮೇಲೆ ದಾಳಿ ಮಾಡುತ್ತಾರೆ. ಅವರು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಾರೆ. ಅವರು ದುರಹಂಕಾರವನ್ನು ಹರಡುತ್ತಾರೆ. ಅವರಿಗೆ ತಿಳುವಳಿಕೆಯ ಕೊರತೆ ಇದೆ. ಇದು ಭಾರತದ ಕಲ್ಪನೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ' ಎಂದು ಅವರು ತಿಳಿಸಿದರು.
40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಿಗದಿಯಾಗಿದೆ.
ಮೇ 3ರಂದು ಮಣಿಪುರದಲ್ಲಿ ಸಂಘರ್ಷ ಶುರುವಾಯಿತು. ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಗಲಭೆಯಲ್ಲಿ ಸುಮಾರು 185 ಜನರು ಹತ್ಯೆಗೀಡಾಗಿದ್ದಾರೆ. ಸಾವಿರಾರು ಜನರು ಮನೆಗಳನ್ನು ತೊರೆದಿದ್ದಾರೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವಾಗಿರುವ ಕುರಿತು ವರದಿಯಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications