Parakram Diwas 2023: ಅಂಡಮಾನ್ ನಿಕೋಬಾರ್ನ 21 ದ್ವೀಪಗಳಿಗೆ ಮೋದಿಯಿಂದ ನಾಮಕರಣ: ಸಂಪೂರ್ಣ ಪಟ್ಟಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಂಡಮಾನ್ ನಿಕೋಬಾರ್ ದ್ವೀಪಗಳಿಗೆ ಹೊಸ ಹೆಸರನ್ನು ನಾಮಕರಣ ಮಾಡಿದರು. ಕೇಂದ್ರ ಸರ್ಕಾರ ಪರಮವೀರ ಚಕ್ರ ಪುರಸ್ಕೃತರ ಹೆಸರನ್ನು ಅಂಡಮಾನ್ ನಿಕೋಬಾರ್ ದ್ವೀಪ ಸೇರಿದಂತೆ ಉಳಿದ ಐಲ್ಯಾಂಡ್ಗಳಿಗೂ ನಾಮಕರಣ ಮಾಡಿದೆ. 21 ದ್ವೀಪಗಳಿಗೆ 21 ಮಂದಿ ಪರಮವೀರ ಚಕ್ರ ಪದಕ ಪುರಸ್ಕೃತ ಹೆಸರು ನಾಮಕರಣ ಮಾಡಿದರು.
ಪರಮವೀರ ಚಕ್ರ ಪುರಸ್ಖೃತರ ಹೆಸರನ್ನು ಚಿರಸ್ಥಾಯಿಗೊಳಿಸುವುದು ಕೇಂದ್ರದ ಉದ್ದೇಶವಾಗಿದೆ. ಹೀಗಾಗಿ ಭಾರತದ ದ್ವೀಪಗಳಿಗೆ ಹೊಸ ಹೆಸರನ್ನು ನಾಮಕರಣ ಮಾಡಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯನ್ನು ಪ್ರತಿ ವರ್ಷ ಜನವರಿ 23 ರಂದು 'ಪರಾಕ್ರಮ್ ದಿವಸ್' ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ 21 ಹೆಸರಿಲ್ಲದ ದ್ವೀಪಗಳಿಗೆ ನಾಮಕರಣ ಮಾಡಿದರು.
ಮೇಜರ್ ಸೋಮನಾಥ ಶರ್ಮಾ, ಸುಬೇದಾರ್ ಮತ್ತು ಹೊನಿ ಕ್ಯಾಪ್ಟನ್ (ಆಗ ಲ್ಯಾನ್ಸ್ ನಾಯಕ್) ಕರಮ್ ಸಿಂಗ್, 2 ನೇ ಲೆಫ್ಟಿನೆಂಟ್ ರಾಮ ರಾಘೋಬಾ ರಾಣೆ ಮತ್ತು ನಾಯಕ್ ಜಾದುನಾಥ್ ಸಿಂಗ್ ಸೇರಿದಂತೆ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಈ ದ್ವೀಪಗಳಿಗೆ ಇಡಲಾಗಿದೆ.
Naming of 21 islands of Andaman & Nicobar Islands after Param Vir Chakra awardees fills heart of every Indian with pride. https://t.co/tKPawExxMT
— Narendra Modi (@narendramodi) January 23, 2023
ಈ ವೇಳೆ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಿರುವ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. "ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ಮರಣೆಯನ್ನು ಗೌರವಿಸಲು, ರಾಸ್ ದ್ವೀಪಗಳನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಿದರು. ಹ್ಯಾವ್ಲಾಕ್ ದ್ವೀಪವನ್ನು ಶಹೀದ್ ದ್ವೀಪ ಮತ್ತು ಸ್ವರಾಜ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿದೆ" ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿನ ದ್ವೀಪಗಳ ಸಂಪೂರ್ಣ ಪಟ್ಟಿ ಇಲ್ಲಿದೆ-
*ಮೇಜರ್ ಸೋಮನಾಥ ಶರ್ಮಾ
*ಸುಬೇದಾರ್ ಮತ್ತು ಹೊನಿ ಕ್ಯಾಪ್ಟನ್ (ಆಗ ಲ್ಯಾನ್ಸ್ ನಾಯಕ್) ಕರಮ್ ಸಿಂಗ್
*2ನೇ ಲೆಫ್ಟಿನೆಂಟ್ ರಾಮ ರಾಘೋಬ ರಾಣೆ
*ನಾಯಕ್ ಜಾದುನಾಥ್ ಸಿಂಗ್
*ಕಂಪನಿ ಹವಾಲ್ದಾರ್ ಮೇಜರ್ ಪಿರು ಸಿಂಗ್
*ಕ್ಯಾಪ್ಟನ್ ಜಿಎಸ್ ಸಲಾರಿಯಾ
*ಲೆಫ್ಟಿನೆಂಟ್ ಕರ್ನಲ್ (ಆಗಿನ ಮೇಜರ್) ಧನ್ ಸಿಂಗ್ ಥಾಪಾ
*ಸುಬೇದಾರ್ ಜೋಗಿಂದರ್ ಸಿಂಗ್
*ಮೇಜರ್ ಶೈತಾನ್ ಸಿಂಗ್
*ಅಬ್ದುಲ್ ಹಮೀದ್
*ಲೆಫ್ಟಿನೆಂಟ್ ಕರ್ನಲ್ ಅರ್ದೇಶಿರ್ ಬುರ್ಜೋರ್ಜಿ ತಾರಾಪೋರ್
*ಲ್ಯಾನ್ಸ್ ನಾಯಕ್ ಆಲ್ಬರ್ಟ್ ಎಕ್ಕಾ
*ಮೇಜರ್ ಹೋಶಿಯಾರ್ ಸಿಂಗ್
*2ನೇ ಲೆಫ್ಟಿನೆಂಟ್ ಅರುಣ್ ಖೇತ್ರಪಾಲ್
*ಫ್ಲೈಯಿಂಗ್ ಆಫೀಸರ್ ನಿರ್ಮಲಜಿತ್ ಸಿಂಗ್ ಸೆಖೋನ್
*ಮೇಜರ್ ರಾಮಸ್ವಾಮಿ ಪರಮೇಶ್ವರನ್
*ನಾಯಬ್ ಸುಬೇದಾರ್ ಬನಾ ಸಿಂಗ್
*ಕ್ಯಾಪ್ಟನ್ ವಿಕ್ರಮ್ ಬಾತ್ರಾ
*ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ
*ಸುಬೇದಾರ್ ಮೇಜರ್ (ಆಗಿನ ರೈಫಲ್ ಮ್ಯಾನ್) ಸಂಜಯ್ ಕುಮಾರ್
*ಸುಬೇದಾರ್ ಮೇಜರ್ ನಿವೃತ್ತ (ಹಾನಿ ಕ್ಯಾಪ್ಟನ್) ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications