ಎಎಪಿ ಸಂಸದನಿಗೆ ನೀರು ಕುಡಿಸಿದ ಮೋದಿ, ಕಿಲಕಿಲ ನಕ್ಕ ಸೋನಿಯಾ
ನವದೆಹಲಿ, ಡಿಸೆಂಬರ್, 16: ದೆಹಲಿ ಮುಖ್ಯಮಂತ್ರಿ ಕಚೇರಿಯ ಮೇಲೆ ಸಿಬಿಐ ವಿನಾ ಕಾರಣ ದಾಳಿ ನಡೆಸಿದೆ ಎಂದು ಆರೋಪಿಸಿ ಸಂಸತ್ ನ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಸಂಸದ ಭಾಗವಂತ್ ಮನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದು ನೀರು ಕುಡಿಸಿದ್ದಾರೆ.
ಹೌದು.. ಇದರಲ್ಲಿ ಅತಿಶಯೋಕ್ತಿ ಏನಿಲ್ಲ. ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದ ಭಾಗವಂತ್ ಮನ್ ಸುಸ್ತಾಗಿ ನೀರಿಗಾಗಿ ಹುಡುಕಾಡುತ್ತಿದ್ದರು. ತಕ್ಷಣ ಇದನ್ನು ಮನಗಂಡ ಪ್ರಧಾನಿ ಅವರಿದ್ದಲ್ಲಿಗೆ ತೆರಳಿ ಒಂದು ಲೋಟ ನೀರು ನೀಡಿದ್ದಾರೆ. ಪ್ರಧಾನಿ ನೀಡಿದ ನೀರನ್ನು ಮುಗುಳ್ನಗುತ್ತಲೇ ಸ್ವೀಕರಿಸಿದ ಮನ್ ನೀರು ಕುಡಿದು ಮುಂದಕ್ಕೆ ಹೆಜ್ಜೆ ಹಾಕಿದ್ದಾರೆ.['ಮೋದಿ ತಪ್ಪು ಒಪ್ಪಿಕೊಂಡ್ರೆ ನಾನು ಕ್ಷಮೆ ಕೇಳುತ್ತೇನೆ']

ಎಎಪಿ ಸದಸ್ಯರು ಮತ್ತು ಕಾಂಗ್ರೆಸ್ ನ ಹಲವು ಸದಸ್ಯರು ಪ್ರಶ್ನೋತ್ತರ ಕಲಾಪವನ್ನು ಮುಂದೂಡಬೇಕು ಎಂದು ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಭಗವಂತ್ ಮನ್ ಪಂಜಾಬ್ ನ ಸಂಗ್ರೂರ್ ಕ್ಷೇತ್ರದ ಎಎಪಿ ಸಂಸದ.[ಪ್ರಧಾನಿ ಹೇಡಿ ಎಂದ ಅರವಿಂದ]
ಪ್ರಧಾನಿಯವರೇ ಸ್ವತಃ ನೀರು ನೀಡಿದ ವಿಷಯವನ್ನು ತಿಳಿದ ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ ಕೂಡ ಜೋರಾಗಿ ನಕ್ಕರು. ಡಿಸೆಂಬರ್ 15 ರಂದು ಸಿಬಿಐ ಅಧಿಕಾರಿಗಳು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಕಚೇರಿ ಮೇಲೆ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ಸಿಬಿಐ ಬಳಸಿ ನನ್ನನ್ನು ಕಟ್ಟಿಹಾಕಲು ನೋಡುತ್ತಿದೆ ಎಂದು ಆರೋಪಿಸಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications