ಶಿವಕುಮಾರ ಸ್ವಾಮೀಜಿಗೆ ಟ್ವೀಟ್ ಮೂಲಕ ಮೋದಿ ಗೌರವ ನಮನ
ನವದೆಹಲಿ, ಏಪ್ರಿಲ್ 1: ಕರ್ನಾಟಕದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಅಪ್ರತಿಮ ಸಮಾಜ ಸೇವೆಯನ್ನು ನಾವು ಸದಾ ಸ್ಮರಿಸುತ್ತೇವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
"ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ," ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
"ಆರೋಗ್ಯ ಹಾಗು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ," ಎಂದು ಕೂಡಾ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಟ್ವೀಟ್ನಲ್ಲಿ ಸೇರಿಸಿದ್ದಾರೆ.
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022
ನಡೆದಾಡುವ ದೇವರ 115 ನೇ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಪಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಇಂದು ಮುಂಜಾನೆಯೇ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಮುಂಜಾನೆಯೇ ಶ್ರೀಗಳ ಗದ್ದುಗೆಗೆ ರುದ್ರಾಭಿಷೇಕ, ಪುಷ್ಪ ವೃಷ್ಟಿ ಮತ್ತು ಅರ್ಚಕರಿಂದ ಮಂತ್ರ ಪಠಣ ಕಾರ್ಯಗಳು ನಡೆದಿದೆ. ಇನ್ನು ಸಾವಿರಾರು ಮಂದಿಗೆ ಭೋಜನದ ವ್ಯವಸ್ಥೆಯನ್ನು ಕೂಡಾ ಮಠದಲ್ಲಿ ಮಾಡಲಾಗಿದೆ. ಇದಕ್ಕಾಗಿ ಮಠದಲ್ಲಿರುವ ವಿದ್ಯಾರ್ಥಿಗಳು ಕೂಡಾ ಕೈಜೋಡಿಸಿದ್ದಾರೆ.

ಸಿದ್ಧಗಂಗಾ ಮಠದಲ್ಲಿ ಅಮಿತ್ ಶಾ
ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಅಮಿತ್ ಶಾ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ನುಡಿನಮನ ಸಲ್ಲಿಸಿದ್ದಾರೆ. "ಜೀವನದಲ್ಲಿ ಮೂರನೇ ಬಾರಿ ಸಿದ್ದಗಂಗಾ ಮಠಕ್ಕೆ ಬಂದಿದ್ದೇನೆ. ಪ್ರತಿ ಬಾರಿಯು ಹೊಸ ಚೈತ್ಯನ ಬಂದಿದೆ," ಎಂದು ಅಮಿತ್ ಶಾ ಹೇಳಿದರು.
"ಉತ್ತರ ಗಂಗಾ, ದಕ್ಷಿಣದಲ್ಲಿ ಸಿದ್ದಗಂಗಾ ಎಂದು ಅಟಾಲ್ ಜಿ ಹೇಳಿದ್ದರು. ಆದರೆ ಅದರ ನಿಜವಾದ ಅರ್ಥವನ್ನು ನಾನು ನಿಮಗೆ ಹೇಳುತ್ತೇನೆ. ಗಂಗಾದಲ್ಲಿ ಸ್ನಾನ ಮಾಡಿದರೆ ಪವಿತ್ರ, ಸಿದ್ದಗಂಗಾಕ್ಕೆ ಬಂದರೆ ಪವಿತ್ರ," ಎಂದು ಕೂಡಾ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವರಿಸಿದರು.
"ಅನ್ನ, ಆಶ್ರಯ, ಅಕ್ಷರ ಸಿದ್ದಗಂಗಾ ಮಠದ ಮಂತ್ರ. ಇದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡಾ ಪಾಲನೆ ಮಾಡುತ್ತಿದ್ದಾರೆ," ಎಂದು ಹೇಳಿದ ಅಮಿತ್ ಶಾ, "ಸಂದೇಶ ಬೇರೆ ಬೇರೆ ರೀತಿಯಲ್ಲಿ ನೀಡಬಹುದು. ಶ್ರೀಗಳು ತನ್ನ ಕಾರ್ಯದ ಮೂಲಕ ಸಂದೇಶ ನೀಡಿದ್ದಾರೆ," ಎಂದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications