ಪಿ.ವಿ. ನರಸಿಂಹರಾವ್100ನೇ ಜನ್ಮದಿನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗೌರವ ನಮನ
ನವದೆಹಲಿ, ಜೂನ್ 28: ಮಾಜಿ ಪ್ರಧಾನ ಮಂತ್ರಿ ದಿವಂಗತ ನರಸಿಂಹರಾವ್ ಅವರ 100ನೇ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ''ಮಾಜಿ ಪ್ರಧಾನಿ ದಿವಂಗತ ಪಿ.ವಿ. ನರಸಿಂಹರಾವ್ ಜೀ ಅವರಿಗೆ 100ನೇ ಜನ್ಮದಿನದ ಶುಭಾಶಯಗಳು. ದೇಶದ ಅಭಿವೃದ್ಧಿ ಮತ್ತು ಏಳಿಗೆಗೆ ನರಸಿಂಹರಾವ್ ಅವರು ನೀಡಿರುವ ವಿಶಿಷ್ಟ ಮತ್ತು ವಿಸ್ತೃತ ಕೊಡುಗೆಗಳನ್ನು ಇಡೀ ದೇಶವೇ ಸ್ಮರಿಸುತ್ತಿದೆ ನೆನಪಿಸಿಕೊಳ್ಳುತ್ತಿದೆ. ಅವರು ಅಪಾರ ಜ್ಞಾನ ಮತ್ತು ಬುದ್ಧಿಶಕ್ತಿ ಹೊಂದಿದ್ದರು. ಅವರ ಬಗ್ಗೆ ಆಡಿರುವ ಮಾತುಗಳನ್ನು ನಾನು ಕಳೆದ ವರ್ಷ ಜೂನ್ನಲ್ಲಿ ನಡೆದ ರೇಡಿಯೊ ಮಾಸಿಕ ಕಾರ್ಯಕ್ರಮ ಮನ್ ಕಿ ಬಾತ್ (#MannKiBaat)ನಲ್ಲಿ ಹಂಚಿಕೊಂಡಿದ್ದೇನೆ.'' ಎಂದು ಮೋದಿ ಹೇಳಿದ್ದಾರೆ.

ಬಹುಮುಖ ವ್ಯಕ್ತಿತ್ವದ ಪಿವಿಎನ್: ನೆಹರು ಮನೆತನದ ಪ್ರಧಾನಿಗಳ ನಂತರ ಆಡಳಿತಾವಧಿಯ ಐದು ವರ್ಷಗಳನ್ನು ಪೂರೈಸಿದ ಮೊದಲ ಪ್ರಧಾನಿ ಪಾಮುಲಪರ್ತಿ ವೆಂಕಟ ನರಸಿಂಹರಾವ್ ದೇಶಕ್ಕೆ ಹೊಸ ಆರ್ಥಿಕ ನೀತಿ, ಶಿಕ್ಷಣ ನೀತಿ, ಉದ್ಯಮ ನೀತಿ ಪರಿಚಯಿಸಿದವರು. ನೆಹರು ಕುಟುಂಬಕ್ಕೆ ಮೊದಲಿನಿಂದಲೂ ನಿಷ್ಠರಾಗಿದ್ದ ಪಿವಿಎನ್, ಇಂದಿರಾಗಾಂಧಿ ಮತ್ತು ರಾಜೀವ್ಗಾಂಧಿ ಅಧಿಕಾರವಧಿಯಲ್ಲಿ ಸಚಿವರಾಗಿ ಗೃಹ, ರಕ್ಷಣೆ ಮತ್ತಿತರ ಖಾತೆಗಳನ್ನು ನಿರ್ವಹಿಸಿದ್ದರು. ಬಹುಭಾಷಾ ಪಂಡಿತರಾಗಿದ್ದ ಇವರ ಆತ್ಮಕಥನ ಸಂಗ್ರಹಯೋಗ್ಯ ಕೃತಿ. ಕರೀಂನಗರ ಜಿಲ್ಲೆಯ ವಂಗಾರ ಎನ್ನುವ ಪುಟ್ಟ ಹಳ್ಳಿಯವರಾದ ರಾವ್ ತಮ್ಮ 83ರ ವಯಸ್ಸಿನಲ್ಲಿ ಮೂವರು ಗಂಡುಮಕ್ಕಳು ಮತ್ತು ಐವರು ಪುತ್ರಿಯರನ್ನು ಅಗಲಿದರು.
Tributes to former PM Shri PV Narasimha Rao Ji on his 100th birth anniversary. India remembers his extensive contributions to national development. He was blessed with remarkable knowledge and intellect.
— Narendra Modi (@narendramodi) June 28, 2021
Sharing what I had spoken about him during #MannKiBaat in June last year. pic.twitter.com/tRRgXH74Se
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications