ಕೊರೊನಾ ವಿರುದ್ದದ ಹೋರಾಟ:ವಿಜ್ಞಾನಿಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ನವದೆಹಲಿ, ಜೂ. 04: ಕೋವಿಡ್ ವಿರುದ್ಧ ಭಾರತದಲ್ಲಿ ಲಸಿಕೆ ಅಭಿವೃದ್ದಿಪಡಿಸಿದ ಹಾಗೂ ಒಂದು ವರ್ಷದೊಳಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇತರ ಕ್ರಮಗಳನ್ನು ಹೆಚ್ಚಿಸುತ್ತಿರುವ ಭಾರತೀಯ ವಿಜ್ಞಾನಿಗಳನ್ನು ಪ್ರಧಾನಿ ಶುಕ್ರವಾರ ಶ್ಲಾಘಿಸಿದ್ದಾರೆ.
ಕೋವಿಡ್ ಲಸಿಕೆ ಅಭಿಯಾನ ದೇಶದಲ್ಲಿ ಜನವರಿಯಲ್ಲಿ ಆರಂಭವಾಗಿದ್ದು ಈಗಾಗಲೇ ಹಲವು ತಿಂಗಳುಗಳು ಕಳೆದಿವೆ. ಈಗ ಲಸಿಕೆ ಕೊರತೆ ಕಾಣಿಸಿಕೊಂಡಿರುವ ನಡುವೆ ದೇಶೀಯ ಲಸಿಕೆ ಉತ್ಪಾದನೆ ವೇಗ ಹಾಗೂ ಪ್ರಮಾಣ ಅಧಿಕಗೊಳಿಸಲಾಗುತ್ತಿದೆ. ಹಾಗೆಯೇ ವಿದೇಶಿ ಲಸಿಕೆಗಳ ಸರಬರಾಜಿಗೆ ಮಾತುಕತೆ ನಡೆಸಲಾಗುತ್ತಿದೆ.
ಶುಕ್ರವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಸೊಸೈಟಿಯ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ''ಹಿಂದಿನ ಶತಮಾನದಲ್ಲಿ ಭಾರತದ ವಿಜ್ಞಾನಿಗಳು ವಿದೇಶದಲ್ಲಿ ಕೈಗೊಂಡ ಸಂಶೋಧನೆಯನ್ನು ತಾವು ಕೈಗೆತ್ತಿಕೊಳ್ಳು ವರ್ಷಗಳ ಕಾಲ ಕಾಯಬೇಕಾಗಿತ್ತು. ಆದರೆ ಈಗ ಭಾರತದ ವಿಜ್ಞಾನಿಗಳೇ ಸಂಶೋದನೆಯಲ್ಲಿ ಮುಂದಿದ್ದಾರೆ. ವಿದೇಶಗಳ ವಿಜ್ಞಾನಿಗಳ ಸಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ'' ಎಂದು ಹೇಳಿದ್ದಾರೆ.

''ವಿದೇಶದ ವಿಜ್ಞಾನಿಗಳ ವೇಗದಲ್ಲೇ ನಮ್ಮ ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ ಮೋದಿ, ಒಂದು ಶತಮಾನದಲ್ಲಿ ಜಗತ್ತು ಅತಿದೊಡ್ಡ ಸವಾಲನ್ನು ಎದುರಿಸುತ್ತಿದೆ. ಆದರೆ ಇದನ್ನು ಸಮರ್ಥವಾಗಿ ವೈಜ್ಞಾನಿಕ ಸಮುದಾಯ ಎದುರಿಸಿದೆ. ಒಂದು ವರ್ಷದೊಳಗೆ ಲಸಿಕೆಗಳನ್ನು ತಯಾರಿಸುವುದು ಅಭೂತಪೂರ್ವ ಬೆಳವಣಿಗೆ'' ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇನ್ನು ''ಈ ಸಂದರ್ಭದಲ್ಲೇ ಆತ್ಮನಿರ್ಭರ ಭಾರತದ ಘೋಷವಾಕ್ಯವನ್ನು ಪುನರ್ ಉಚ್ಛರಿಸಿದ ಪ್ರಧಾನಿ ಮೋದಿ, ಭಾರತವು ಈಗ ಸುಸ್ಥಿರ ಅಭಿವೃದ್ಧಿ ಮತ್ತು ಶುದ್ಧ ಶಕ್ತಿಯ ಮೂಲಕ ಜಗತ್ತಿಗೆ ದಾರಿ ತೋರಿಸುತ್ತಿದೆ. ಸಾಫ್ಟ್ವೇರ್ ಮತ್ತು ಉಪಗ್ರಹ ಅಭಿವೃದ್ಧಿಯ ಮೂಲಕ ಇತರ ದೇಶಗಳಲ್ಲಿ ಪ್ರಗತಿಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ'' ಎಂದು ಹೇಳಿದರು.
''ಕೋವಿಡ್ -19 ಬಿಕ್ಕಟ್ಟು ಅದರ ವೇಗವನ್ನು ನಿಧಾನಗೊಳಿಸಬಹುದು ಆದರೆ ನಮ್ಮ ಸಂಕಲ್ಪ ಒಂದೇ ಆಗಿರುತ್ತದೆ. ಭಾರತವು ಕೃಷಿಯಿಂದ ಹಿಡಿದು ಖಗೋಳವಿಜ್ಞಾನ, ವಿಪತ್ತು ನಿರ್ವಹಣೆ, ರಕ್ಷಣಾ ತಂತ್ರಜ್ಞಾನ, ಲಸಿಕೆ ವರ್ಚುವಲ್ ರಿಯಾಲಿಟಿ, ಮತ್ತು ಜೈವಿಕ ತಂತ್ರಜ್ಞಾನದಿಂದ ಬ್ಯಾಟರಿ ತಂತ್ರಜ್ಞಾನದವರೆಗೆ ಹಲವಾರು ಕ್ಷೇತ್ರಗಳಲ್ಲಿ ಸ್ವಾವಲಂಬಿಗಳಾಗಿರಲು ಭಾರತ ಬಯಸಿದೆ'' ಎಂದು ಮೋದಿ ಪ್ರತಿಪಾದಿಸಿದರು.
(ಒನ್ಇಂಡಿಯಾ ಸುದ್ದಿ)
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications