ಕೊರೊನಾ ವಿರುದ್ದದ ಹೋರಾಟ:ವಿಜ್ಞಾನಿಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ನವದೆಹಲಿ, ಜೂ. 04: ಕೋವಿಡ್ ವಿರುದ್ಧ ಭಾರತದಲ್ಲಿ ಲಸಿಕೆ ಅಭಿವೃದ್ದಿಪಡಿಸಿದ ಹಾಗೂ ಒಂದು ವರ್ಷದೊಳಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇತರ ಕ್ರಮಗಳನ್ನು ಹೆಚ್ಚಿಸುತ್ತಿರುವ ಭಾರತೀಯ ವಿಜ್ಞಾನಿಗಳನ್ನು ಪ್ರಧಾನಿ ಶುಕ್ರವಾರ ಶ್ಲಾಘಿಸಿದ್ದಾರೆ.
ಕೋವಿಡ್ ಲಸಿಕೆ ಅಭಿಯಾನ ದೇಶದಲ್ಲಿ ಜನವರಿಯಲ್ಲಿ ಆರಂಭವಾಗಿದ್ದು ಈಗಾಗಲೇ ಹಲವು ತಿಂಗಳುಗಳು ಕಳೆದಿವೆ. ಈಗ ಲಸಿಕೆ ಕೊರತೆ ಕಾಣಿಸಿಕೊಂಡಿರುವ ನಡುವೆ ದೇಶೀಯ ಲಸಿಕೆ ಉತ್ಪಾದನೆ ವೇಗ ಹಾಗೂ ಪ್ರಮಾಣ ಅಧಿಕಗೊಳಿಸಲಾಗುತ್ತಿದೆ. ಹಾಗೆಯೇ ವಿದೇಶಿ ಲಸಿಕೆಗಳ ಸರಬರಾಜಿಗೆ ಮಾತುಕತೆ ನಡೆಸಲಾಗುತ್ತಿದೆ.
ಶುಕ್ರವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಸೊಸೈಟಿಯ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ''ಹಿಂದಿನ ಶತಮಾನದಲ್ಲಿ ಭಾರತದ ವಿಜ್ಞಾನಿಗಳು ವಿದೇಶದಲ್ಲಿ ಕೈಗೊಂಡ ಸಂಶೋಧನೆಯನ್ನು ತಾವು ಕೈಗೆತ್ತಿಕೊಳ್ಳು ವರ್ಷಗಳ ಕಾಲ ಕಾಯಬೇಕಾಗಿತ್ತು. ಆದರೆ ಈಗ ಭಾರತದ ವಿಜ್ಞಾನಿಗಳೇ ಸಂಶೋದನೆಯಲ್ಲಿ ಮುಂದಿದ್ದಾರೆ. ವಿದೇಶಗಳ ವಿಜ್ಞಾನಿಗಳ ಸಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ'' ಎಂದು ಹೇಳಿದ್ದಾರೆ.

''ವಿದೇಶದ ವಿಜ್ಞಾನಿಗಳ ವೇಗದಲ್ಲೇ ನಮ್ಮ ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ ಮೋದಿ, ಒಂದು ಶತಮಾನದಲ್ಲಿ ಜಗತ್ತು ಅತಿದೊಡ್ಡ ಸವಾಲನ್ನು ಎದುರಿಸುತ್ತಿದೆ. ಆದರೆ ಇದನ್ನು ಸಮರ್ಥವಾಗಿ ವೈಜ್ಞಾನಿಕ ಸಮುದಾಯ ಎದುರಿಸಿದೆ. ಒಂದು ವರ್ಷದೊಳಗೆ ಲಸಿಕೆಗಳನ್ನು ತಯಾರಿಸುವುದು ಅಭೂತಪೂರ್ವ ಬೆಳವಣಿಗೆ'' ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇನ್ನು ''ಈ ಸಂದರ್ಭದಲ್ಲೇ ಆತ್ಮನಿರ್ಭರ ಭಾರತದ ಘೋಷವಾಕ್ಯವನ್ನು ಪುನರ್ ಉಚ್ಛರಿಸಿದ ಪ್ರಧಾನಿ ಮೋದಿ, ಭಾರತವು ಈಗ ಸುಸ್ಥಿರ ಅಭಿವೃದ್ಧಿ ಮತ್ತು ಶುದ್ಧ ಶಕ್ತಿಯ ಮೂಲಕ ಜಗತ್ತಿಗೆ ದಾರಿ ತೋರಿಸುತ್ತಿದೆ. ಸಾಫ್ಟ್ವೇರ್ ಮತ್ತು ಉಪಗ್ರಹ ಅಭಿವೃದ್ಧಿಯ ಮೂಲಕ ಇತರ ದೇಶಗಳಲ್ಲಿ ಪ್ರಗತಿಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ'' ಎಂದು ಹೇಳಿದರು.
''ಕೋವಿಡ್ -19 ಬಿಕ್ಕಟ್ಟು ಅದರ ವೇಗವನ್ನು ನಿಧಾನಗೊಳಿಸಬಹುದು ಆದರೆ ನಮ್ಮ ಸಂಕಲ್ಪ ಒಂದೇ ಆಗಿರುತ್ತದೆ. ಭಾರತವು ಕೃಷಿಯಿಂದ ಹಿಡಿದು ಖಗೋಳವಿಜ್ಞಾನ, ವಿಪತ್ತು ನಿರ್ವಹಣೆ, ರಕ್ಷಣಾ ತಂತ್ರಜ್ಞಾನ, ಲಸಿಕೆ ವರ್ಚುವಲ್ ರಿಯಾಲಿಟಿ, ಮತ್ತು ಜೈವಿಕ ತಂತ್ರಜ್ಞಾನದಿಂದ ಬ್ಯಾಟರಿ ತಂತ್ರಜ್ಞಾನದವರೆಗೆ ಹಲವಾರು ಕ್ಷೇತ್ರಗಳಲ್ಲಿ ಸ್ವಾವಲಂಬಿಗಳಾಗಿರಲು ಭಾರತ ಬಯಸಿದೆ'' ಎಂದು ಮೋದಿ ಪ್ರತಿಪಾದಿಸಿದರು.
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications