Putin India Visit: ರಷ್ಯಾ ಅಧ್ಯಕ್ಷರಿಗೆ ಭಗವದ್ಗೀತೆ ಉಡುಗೊರೆಯಾಗಿ ನೀಡಿದ ಪಿಎಂ ಮೋದಿ
ರಾಷ್ಟ್ರ ರಾಜಧಾನಿ ನವದೆಹಲಿ ಇದೀಗ ಸಂಭ್ರಮದಲ್ಲಿ ಮಿಂದು ಎದ್ದಿದೆ, ಭಾರತದ ಆಪ್ತ ರಾಷ್ಟ್ರ ರಷ್ಯಾ ಅಧ್ಯಕ್ಷರ ಆಗಮನ ಹಿನ್ನೆಲೆ ಪ್ರಪಂಚದ ಕೇಂದ್ರ ಬಿಂದುವಾಗಿದೆ ದೆಹಲಿ. ಹೀಗಿದ್ದಾಗ ಹಲವು ಪ್ರಮುಖ ಒಪ್ಪಂದಗಳಿಗೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ಇಂದು ಪಿಎಂ ಮೋದಿ ಅವರ ಜೊತೆ ಚರ್ಚಸಿ, ಸಹಿ ಹಾಕಲು ಸಜ್ಜಾಗಿದ್ದಾರೆ. ಇಷ್ಟೆಲ್ಲಾ ಪ್ರಮುಖ ವಿಚಾರಗಳ ಜೊತೆಗೆ ಮತ್ತಷ್ಟು ವಿಶೇಷ ಸಂಗತಿಗಳು ರಷ್ಯಾ ಅಧ್ಯಕ್ಷ ಪುಟಿನ್ ಅವರ ಭೇಟಿ ಸಮಯದಲ್ಲಿ ಗಮನ ಸೆಳೆಯುತ್ತಿದೆ. ಅದರಲ್ಲೂ ರಷ್ಯಾ ಅಧ್ಯಕ್ಷರಿಗೆ ಭಗವದ್ಗೀತೆ ಉಡುಗೊರೆಯಾಗಿ ನೀಡಿದ ಪಿಎಂ ಮೋದಿ, ಈ ನೆಲದ ಸಂಸ್ಕೃತಿ ಎತ್ತಿ ಹಿಡಿದಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.
ರಷ್ಯಾ ಅಧ್ಯಕ್ಷರ ಭಾರತ ಭೇಟಿ ಇಡೀ ಪ್ರಪಂಚದ ಗಮನ ಸೆಳೆಯುತ್ತಿದ್ದು, ರಷ್ಯಾ & ಭಾರತ ನಡುವೆ ಪ್ರಮುಖ ಸಭೆಗಳು ಇಂದು ನಡೆಯಲಿವೆ. ಚೀನಾ ಹಾಗೂ ಪಾಕಿಸ್ತಾನ ಈ ಭೇಟಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ಅಲ್ಲದೇ ಅಮೆರಿಕ ಸೇರಿ ಪಾಶ್ಚಿಮಾತ್ಯ ದೇಶಗಳ ನಾಯಕರಿಗೆ ಪುಟಿನ್ ಭಾರತ ಭೇಟಿ ಪ್ರಮುಖ ವಿಷಯವಾಗಿದೆ. ಉಕ್ರೇನ್ ಕೂಡ ಯುದ್ಧ ನಡೆಯುತ್ತಿರುವ ಸಮಯದಲ್ಲಿ ಪುಟಿನ್ ಅವರ ಭಾರತ ಭೇಟಿ ಬಗ್ಗೆ ಕುತೂಹಲ ಹೊಂದಿದ್ದು, ಈಗ ಎರಡು ದೇಶಗಳ ಮಧ್ಯೆ ನಡೆಯುವ ಒಪ್ಪಂದದ ಬಗ್ಗೆ ತಿಳಿಯಲು ಕಾಯುತ್ತಿದೆ. ಈ ಸಮಯದಲ್ಲೇ ರಷ್ಯಾ ಅಧ್ಯಕ್ಷರಿಗೆ ಭಗವದ್ಗೀತೆ ಉಡುಗೊರೆಯಾಗಿ ನೀಡಿದ ಪಿಎಂ ಮೋದಿ ಅವರ ನಿರ್ಧಾರ ಪ್ರಶಂಸೆಗೆ ಪಾತ್ರವಾಗಿದೆ.

ರಾಜಧಾನಿ ದೆಹಲಿಯಲ್ಲಿ ಭಾರಿ ಭದ್ರತೆ
ಭಾರತದ ರಾಜಧಾನಿ ದೆಹಲಿ ಪ್ರತಿಷ್ಠಿತ ಹೋಟೆಲ್ನಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಅವರು ರಾತ್ರಿಯನ್ನ ಕಳೆದಿದ್ದಾರೆ. ಈ ಕಾರಣಕ್ಕೆ ಹೋಟೆಲ್ನಲ್ಲಿ ಭಾರಿ ಭದ್ರತೆ ಏರ್ಪಡಿಸಿ, ದೆಹಲಿ ಸುತ್ತ ಹದ್ದಿನ ಕಣ್ಣು ಇಡಲಾಗಿತ್ತು. ವಿಶೇಷವಾದ ಕೋಣೆ ಕೂಡ ಪುಟಿನ್ ಅವರಿಗೆ ಸಿಕ್ಕಿತ್ತು, ಐಷಾರಾಮಿ ಹೋಟೆಲ್ನಲ್ಲಿ ಪುಟಿನ್ ಅವರ ಜೊತೆ ಬರುವ ರಷ್ಯಾ ಅಧಿಕಾರಿಗಳಿಗೆ ತಂಗುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಇಂದು ವಿಶೇಷ ಔತಣ ಕೂಡ ಏರ್ಪಡಿಸಲಾಗಿದೆ, ಇದರ ಜೊತೆಗೆ ವಿಶೇಷ ಚರ್ಚೆಗಳು ಕೂಡ ಈ ದಿನ ನಡೆಯಲಿವೆ. ರಕ್ಷಣಾತ್ಮಕ ಒಪ್ಪಂದಗಳಿಗೆ ರಷ್ಯಾ ಮತ್ತು ಭಾರತ ಇಂದು ಸಹಿ ಹಾಕಲಿವೆ. ಈ ಕಾರಣಕ್ಕೆ ಹಲವು ಪ್ರಮುಖ ಒಪ್ಪಂದಗಳಿಗೆ ಇಂದು ಅಂತಿಮ ರೂಪುರೇಷೆ ಸಿಗುವ ಸಾಧ್ಯತೆ ದಟ್ಟವಾಗಿದೆ.
ಪಾಶ್ಚಿಮಾತ್ಯ ದೇಶಗಳಿಗೆ ಖಡಕ್ ಸಂದೇಶ?
ಒಟ್ನಲ್ಲಿ ಭಾರತ ಮತ್ತು ರಷ್ಯಾ ನಡುವಿನ ಇಂದಿನ ಚರ್ಚೆ ಪಾಶ್ಚಿಮಾತ್ಯ ದೇಶಗಳಿಗೆ ಖಡಕ್ ಆಗಿ ಒಂದು ಮೆಸೇಜ್ ಕೊಡುವುದು ಗ್ಯಾರಂಟಿ. ಯಾಕಂದ್ರೆ ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ಹಾಳು ಮಾಡಲು ಪ್ರಯತ್ನಿಸುತ್ತಿರುವ ಪಾಶ್ಚಿಮಾತ್ಯ ದೇಶಗಳಿಗೆ, ಎರಡೂ ದೇಶಗಳ ಸಂಬಂಧವನ್ನ ಯಾರೂ ಮುರಿಯಲು ಆಗಲ್ಲ ಎಂಬ ಸಂದೇಶ ಇಲ್ಲಿಂದಲೇ ರವಾನೆ ಆಗುವುದು ಗ್ಯಾರಂಟಿ ಆಗಿದೆ ಎನ್ನಬಹುದು. ಹೀಗಾಗಿ ಪುಟಿನ್ ಮತ್ತು ಪಿಎಂ ಮೋದಿ ಅವರ ನಡುವಿನ ಚರ್ಚೆ ಭಾರಿ ಭರ್ಜರಿ ಕುತೂಹಲ ಕೆರಳಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications