Jammu & Kashmir: ಕಾಶ್ಮೀರದಲ್ಲಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ
ಜಮ್ಮು ಮತ್ತು ಕಾಶ್ಮೀರ ಚುನಾವಣಾ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಧುಮುಕಿದ್ದು, ಶನಿವಾರ ಅಬ್ಬರದ ಪ್ರಚಾರ ನಡೆಸಿದರು. ಉಧಂಪುರದ ದೋಡಾದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯಿಂದ ಮಾತ್ರ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ಸ್ಥಾನಮಾನ ನೀಡಲು ಸಾಧ್ಯ ಎಂದು ಹೇಳಿದರು.
ಕುಟುಂಬ ರಾಜಕೀಯದ ವಿರುದ್ಧ ಟೀಕಿಸಿದ ಅವರು, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಮೂರು ರಾಜಕೀಯ ಕುಟುಂಬಗಳ ಪಕ್ಷ ಎಂದರು. ತಮ್ಮ ಹಿತಾಸಕ್ತಿಯನ್ನು ಕಾಪಾಡಲು ಭ್ರಷ್ಟಾಚಾರ, ಪ್ರತ್ಯೇಕತಾವಾದ ಮತ್ತು ಭಯೋತ್ಪಾದನೆಗೆ ಉತ್ತೇಜನ ನೀಡುವ ಮೂಲಕ ಮೂರು ಪಕ್ಷಗಳು ಜಮ್ಮು ಮತ್ತು ಕಾಶ್ಮೀರವನ್ನು ನಾಶಪಡಿಸಿವೆ ಎಂದು ಆರೋಪಿಸಿದ ಅವರು, ಕೇಂದ್ರಾಡಳಿತ ಪ್ರದೇಶಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನವನ್ನು ಬಿಜೆಪಿ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಈ ಮೂರು ಪಕ್ಷಗಳು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ಮರುಸ್ಥಾಪಿಸುವುದಾಗಿ ಬಯಸುತ್ತಿವೆ. ಇದು ಸಮಾಜದ ಹಲವಾರು ವರ್ಗಗಳನ್ನು ಮೀಸಲಾತಿ ಮತ್ತು ಕೇಂದ್ರದ ಕಲ್ಯಾಣ ಯೋಜನೆಗಳಂತಹ ಪ್ರಯೋಜನಗಳಿಂದ ವಂಚಿತಗೊಳಿಸಿದೆ ಎಂದು ಹೇಳಿದ ಅವರು, ವಿಪಕ್ಷಗಳ ಕನಸು ನನಸಾಗಲು ಬಿಡಲ್ಲ ಎಂದರು.
ಈ ವಿಧಾನಸಭಾ ಚುನಾವಣೆ ಮೂರು ರಾಜಕೀಯ ಕುಟುಂಬಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಯುವಕರ ನಡುವೆ ಎಂದ ಪ್ರಧಾನಿ ಮೋದಿ, ಒಂದೆಡೆ ಮೂರು ಕುಟುಂಬಗಳು ಮತ್ತೊಂದೆಡೆ ದೊಡ್ಡ ದೊಡ್ಡ ಕನಸುಗಳೊಂದಿಗೆ ಹೊರಡುವ ಯುವ ಜನತೆ ಇದೆ. ಮೂರು ಕುಟುಂಬಗಳು ದಶಕಗಳಿಂದ ರಾಜ್ಯವನ್ನು ನಾಶಮಾಡಿವೆ ಎಂದರು.
2019 ರ ಆಗಸ್ಟ್ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಜಮ್ಮು ಮತ್ತು ಕಾಶ್ಮೀರ ಎದುರಿಸಿದ ಸಮಸ್ಯೆಗಳಿಗೆ ಈ ರಾಜವಂಶಗಳು ಮಾಡಿದ ತಪ್ಪುಗಳೇ ಕಾರಣ ಎಂದು ಆರೋಪಿಸಿದರು.
ಮೂರು ಕುಟುಂಬದ ಪಕ್ಷಗಳು ಭ್ರಷ್ಟಾಚಾರ ಮತ್ತು ಭೂಗಳ್ಳರಿಗೆ ಬೆಂಬಲ ನೀಡಿದ್ದವು, ಮತದಾರರ ಸಣ್ಣ ಅಗತ್ಯಗಳನ್ನು ಸಹ ಪೂರೈಸಲು ಕೂಡ ಕಾಯುವಂತೆ ಮಾಡಲಾಗಿದೆ. ಮೂರು ಕುಟುಂಬಗಳ ಆಪ್ತರಿಗೆ, ಬೆಂಬಲಿಗರಿಗೆ ಮಾತ್ರ ಸರ್ಕಾರಿ ಕೆಲಸ ನೀಡಲಾಗಿದೆ. ಪ್ರತ್ಯೇಕತಾವಾದ ಮತ್ತು ಭಯೋತ್ಪಾದನೆಗೆ ವೇದಿಕೆಯನ್ನು ಸಿದ್ದಮಾಡಿದ್ದೇ ಆ ಪಕ್ಷಗಳು, ಅವರು ಮಾಡಿದ ತಪ್ಪಿನಿಂದ ಸಾವಿರಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ ಎಂದರು.
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಬಿಜೆಪಿ ಕೆಲಸ ಮಾಡುತ್ತದೆ. ತಮ್ಮ ಸ್ವಾರ್ಥಕ್ಕಾಗಿ ನಿಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವವರ ಬಗ್ಗೆ ನೀವು ಎಚ್ಚರಿಕೆಯಿಂದ ಇರಬೇಕು ಎಂದು ಜನರಿಗೆ ಕರೆ ನೀಡಿದರು.
ಆರ್ಟಿಕಲ್ 370 ರ ರದ್ದಾದ ಬಳಿಕ ಕಣಿವೆ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಲಕ್ಷಗಟ್ಟಲೆ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ, ಹೊಸ ಹೋಟೆಲ್ಗಳು ನಿರ್ಮಾಣವಾಗುತ್ತಿರುವುದೇ ಇದಕ್ಕೆ ಸಾಕ್ಷಿ. ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುತ್ತಿದೆ, ಮಹಿಳೆಯರು ಸರ್ಕಾರಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂದರು. ಶೀಘ್ರದಲ್ಲೇ ಶ್ರೀನಗರದವರೆಗೆ ರೈಲು ಮಾರ್ಗವನ್ನು ವಿಸ್ತರಿಸಲಾಗುವುದು ಎಂದು ಭರವಸೆ ನೀಡಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications