50 ಸಂಚಿಕೆ ಪೂರೈಸಿದ 'ಮನ್ ಕೀ ಬಾತ್'; ರೇಡಿಯೋ ಕಾರ್ಯಕ್ರಮದ ಗುಟ್ಟು ತೆರೆದಿಟ್ಟ ಮೋದಿ
ನವದೆಹಲಿ, ನವೆಂಬರ್ 25: ಪ್ರಧಾನಿ ನರೇಂದ್ರ ಮೋದಿ ಅವರ ತಿಂಗಳ ರೇಡಿಯೋ ಕಾರ್ಯಕ್ರಮ ಭಾನುವಾರ (ನವೆಂಬರ್ 25) ಐವತ್ತು ಸಂಚಿಕೆಗಳನ್ನು ಪೂರೈಸಿತು. ಇದೇ ಸಂದರ್ಭದಲ್ಲಿ ರೇಡಿಯೋ ಕಾರ್ಯಕ್ರಮದ ಆಲೋಚನೆ ಬಂದಿದ್ದು ಹೇಗೆ ಹಾಗೂ ಈ ವರೆಗಿನ ಪಯಣವನ್ನು ನೆನಪಿಸಿಕೊಂಡರು.
ಆಲ್ ಇಂಡಿಯಾ ರೇಡಿಯೋದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮೋದಿ ಬರಬಹುದು, ಹೋಗಬಹುದು. ಆದರೆ ಈ ದೇಶ ಶಾಶ್ವತವಾಗಿರುತ್ತದೆ. ನಮ್ಮ ಸಂಸ್ಕೃತಿಯು ಅಮರವಾಗಿರುತ್ತದೆ ಎಂದು ಹೇಳಿದ್ದಾರೆ.
ಡೇರಾ ಬಾಬಾ ನಾನಕ್- ಕರ್ತರ್ ಪುರ್ ಸಾಹಿಬ್ ರಸ್ತೆ ಕಾರಿಡಾರ್ ಯೋಜನೆಯನ್ನು ಪಾಕಿಸ್ತಾನದ ಅಂತರರಾಷ್ಟ್ರೀಯ ಗಡಿಯ ತನಕ ನಿರ್ಮಾಣದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಸರಕಾರವು ಬಹಳ ಮುಖ್ಯವಾದ ತೀರ್ಮಾನ ಮಾಡಿದೆ. ಅದು ಕರ್ತರ್ ಪುರ್ ಕಾರಿಡಾರ್ ನ ಆರಂಭ. ಈ ಮೂಲಕ ನಮ್ಮ ದೇಶದ ಜನ ಸುಲಭವಾಗಿ ಪಾಕಿಸ್ತಾನದಲ್ಲಿನ ಕರ್ತರ್ ಪುರ್ ಗೆ ತೆರಳಬಹುದು ಹಾಗೂ ಗುರು ನಾನಕ್ ದೇವ್ ರ ಪವಿತ್ರ ಸ್ಥಳಕ್ಕೆ ಭೇಟಿ ನೀಡಬಹುದು ಎಂದಿದ್ದಾರೆ.

ಮನ್ ಕೀ ಬಾತ್ ಆರಂಭಿಸಿದಾಗ ನಾನು ನಿರ್ಧರಿಸಿದ್ದೆ: ಇದರಲ್ಲಿ ರಾಜಕೀಯ ಸೇರಬಾರದು. ಸರಕಾರದ ಬಗ್ಗೆ ಹೊಗಳಿಕೆ ಇರಬಾರದು ಅಥವಾ ನನ್ನ ಹೆಸರು ಹೇಳಬಾರದು. ನನ್ನ ನಿರ್ಧಾರಕ್ಕೆ ಸ್ಫೂರ್ತಿ ಹಾಗೂ ಶಕ್ತಿ ತುಂಬಿದವರು ನೀವು. ಮನ್ ಕೀ ಬಾತ್ ಅಂದರೆ ಜನರ ಬಗ್ಗೆಯೇ ಹೊರತು ರಾಜಕಾರಣ ಅಲ್ಲ ಎಂದಿದ್ದಾರೆ.
ಮನ್ ಕೀ ಬಾತ್ ಪ್ರಸಾರ ಮಾಡಿದ್ದಕ್ಕೆ ಮಾಧ್ಯಮಗಳಿಗೆ ಧನ್ಯವಾದ ಹೇಳಿದ್ದಾರೆ. ಯಾವುದೇ ರಾಜಕಾರಣಿ ಮಾಧ್ಯಮಗಳ ಬಗ್ಗೆ ಸಂತೋಷ ವ್ಯಕ್ತಪಡಿಸಲ್ಲ. ತಮಗೆ ಸರಿಯಾದ ಕವರೇಜ್ ಸಿಗ್ತಿಲ್ಲ ಅಥವಾ ನಕಾರಾತ್ಮಕ ಕವರೇಜ್ ಸಿಗ್ತಿದೆ ಅಂದುಕೊಳ್ತಾರೆ. ಆದರೆ ಈ ಕಾರ್ಯಕ್ರಮದಲ್ಲಿ ಎತ್ತಿದ ವಿಚಾರಗಳಿಗೆ ಮಾಧ್ಯಮಗಳು ಪ್ರಚಾರ ನೀಡಿದವು ಎಂದಿದ್ದಾರೆ.
1998ರಲ್ಲಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ವೇಳೆ ತೀರಾ ತಲುಪಲು ಸಾಧ್ಯವಾಗದ ಜಾಗದಲ್ಲೂ ಡಾಬಾವೊಂದರ ಮಾಲೀಕ ರೇಡಿಯೋ ಮೂಲಕ ಮಾಹಿತಿ- ಸುದ್ದಿ ಕೇಳುತ್ತಿದ್ದುದನ್ನು ನೋಡಿದೆ. ಆಗಲೇ ಈ ರೀತಿ ಕಾರ್ಯಕ್ರಮ ಮಾಡಲು ನಿರ್ಧರಿಸಿದೆ ಎಂದಿದ್ದಾರೆ.
ಆಗ ರೇಡಿಯೋ ಚಾಲೂ ಮಾಡಿದ ಆ ವ್ಯಕ್ತಿ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಘೋಷಣೆ ಮಾಡಿದ, ಇಂದು ಭಾರತ ಅಣ್ವಸ್ತ್ರ ಪರೀಕ್ಷೆ ಮಾಡಿದ ಮಹತ್ವದ ದಿನ ಎಂದಾಗ ಬಹಳ ಸಂತಸ ಪಟ್ಟಿದ್ದನ್ನು ನೋಡಿದ್ದೆ ಎಂದಿದ್ದಾರೆ.
ಆಗಿನಿಂದ ನನ್ನ ಮನಸಿನಲ್ಲಿ ಉಳಿದುಹೋಗಿತ್ತು: ಜನರ ಜತೆ ಬೆಸೆದುಕೊಂಡಿದೆ ಹಾಗೂ ಅದರ ಶಕ್ತಿ ಅಪಾರವಾದುದು ಎಂದು ಮೋದಿ ಹೇಳಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications