ಮೋದಿ 'ಮನ್ ಕಿ ಬಾತ್' ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ ಕೋಟಿ ಹಣ
ನವದೆಹಲಿ, ನವೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ ಬಂದು ಸೇರುತ್ತಿದೆ.
ಮೋದಿ ಜನರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು 'ಮನ್ ಕಿ ಬಾತ್' ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ಭಾರತಕ್ಕೆ ಬಂದಾಗ ದೇಶದಲ್ಲಿ ಬಹಳ ಜನಪ್ರಿಯವಾಗಿದ್ದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದರ ಹೊರತಾಗಿಯೂ ಈ ಕಾರ್ಯಕ್ರಮದ ಬಗ್ಗೆ ಹಲವು ರೀತಿಯ ಆರೋಪಗಳು ಕೇಳಿಬರುತ್ತಿದ್ದು ಸರ್ಕಾರದ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿಬಂದಿದ್ದವು.
ತಿಂಗಳಿಗೊಮ್ಮೆ ಪಿಎಂ ಮೋದಿ ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' (Mann Ki Baat) ಮೂಲಕ ಜನರೊಂದಿಗೆ ಮಾತನಾಡುತ್ತಾರೆ. ಈ ಕಾರ್ಯಕ್ರಮವು ನಿರಂತರವಾಗಿ ನಡೆಯುತ್ತಿದೆ.

ಆದರೆ ಈಗ ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಹೆಚ್ಚಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಮೂರು ಪಟ್ಟು ಆದಾಯ :ಆರ್ಟಿಐ ಮೂಲಕ ಹೊರಬಂದ ಮಾಹಿತಿಯ ಪ್ರಕಾರ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲು ಜಾಹೀರಾತಿಗಾಗಿ ಖರ್ಚು ಮಾಡುತ್ತಿರುವ ಹಣಕ್ಕಿಂತ ಮೂರು ಪಟ್ಟು ಹೆಚ್ಚು ಆದಾಯ ಬರುತ್ತಿದೆ ಎಂದು ತಿಳಿದುಬಂದಿದೆ. ಬಹಿರಂಗವಾಗಿರುವ ಆದಾಯದ ಅಂಕಿ ಅಂಶಗಳ ಪ್ರಕಾರ
2014-15ರಲ್ಲಿ 1.16 ಕೋಟಿ ರೂ.
2015-16ರಲ್ಲಿ 2.81 ಕೋಟಿ ರೂ.
2016-17ರಲ್ಲಿ 5.12 ಕೋಟಿ ರೂ.
2017-18ರಲ್ಲಿ 10.58 ಕೋಟಿ ರೂ.
2018-19ರಲ್ಲಿ 7.47 ಕೋಟಿ ರೂ.
2019-20ರಲ್ಲಿ 2.56 ಕೋಟಿ ರೂ.
ಮತ್ತು 2020 ರವರೆಗೆ 58 ಲಕ್ಷ ರೂಪಾಯಿಗಳು ಆದಾಯ ರೂಪದಲ್ಲಿ ಬಂದಿವೆ. ಒಟ್ಟಾರೆ ಈ ಅಂಕಿ ಅಂಶವು 30 ಕೋಟಿ ರೂಪಾಯಿಗಳಿಗಿಂತ ಹೆಚ್ಚು.
ಅನಿಕೇತ್ ಗೌರವ್ ಎಂಬ ವ್ಯಕ್ತಿ ಆರ್ಟಿಐ (RTI) ಮೂಲಕ ಕೇಳಲಾದ ಪ್ರಶ್ನೆಗೆ ಸೂಚನಾ ಮತ್ತು ಮಾಹಿತಿ ಸಚಿವಾಲಯದ ಅಧೀನದಲ್ಲಿರುವ ಬ್ಯೂರೋ ಆಫ್ ಔಟ್ರೀಚ್ ಮತ್ತು ಸಂವಹನ ವಿಭಾಗವು ಉತ್ತರಿಸಿದ್ದು ರೇಡಿಯೋ, ಟೆಲಿವಿಷನ್, ಆನ್ಲೈನ್ ಮತ್ತು 'ಮನ್ ಕಿ ಬಾತ್' ಕಾರ್ಯಕ್ರಮದ ಇತರ ವಿಧಾನಗಳ ಮೂಲಕ ಜಾಹೀರಾತಿಗಾಗಿ ಎಷ್ಟು ಖರ್ಚು ಮಾಡಲಾಗಿದೆ ಎಂಬುದನ್ನು ಆರ್ಟಿಐ ಮೂಲಕ ಬಹಿರಂಗಪಡಿಸಲಾಗಿದೆ.
ಆರ್ಟಿಐಗೆ ಪ್ರತಿಕ್ರಿಯೆಯಾಗಿ 2014 ರಿಂದ 2020 ರವರೆಗೆ ಮುದ್ರಣ ಮಾಧ್ಯಮದಲ್ಲಿ 7,29,88,765 ರೂ.ಗಳ ಖರ್ಚು ಮಾಡಲಾಗಿದೆ ಎಂದು ತಿಳಿಸಲಾಯಿತು. ಟಿವಿ ಅಥವಾ ಇತರ ವಿಧಾನಗಳ ಮೂಲಕ ಜಾಹೀರಾತುಗಾಗಿ ಒಂದು ಪೈಸೆಯನ್ನೂ ಖರ್ಚು ಮಾಡಿಲ್ಲ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ಕೋಟ್ಯಂತರ ಮಂದಿ ಪ್ರೇಕ್ಷಕರಿದ್ದಾರೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಜನರ ಸಮಸ್ಯೆಗಳನ್ನು ಆಲಿಸುತ್ತಾರೆ.
ಹಲವು ವಿಷಯಗಳ ಬಗ್ಗೆ ಅವರು ದೇಶದ ಜನರಿಂದ ಸಲಹೆಗಳನ್ನು ಕೇಳುತ್ತಾರೆ. ಈಗ ಈ ಕಾರ್ಯಕ್ರಮವು ಸರ್ಕಾರದ ಖಜಾನೆಯನ್ನೂ ತುಂಬುತ್ತಿದೆ ಎಂಬುದು ಉತ್ತಮ ವಿಷಯವಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications