PM Modi: ಪ್ರಧಾನಿ ಮೋದಿ ವಿರುದ್ಧ ಜನ ರೊಚ್ಚಿಗೆದ್ದರಾ?
ಪ್ರಧಾನಿ ನರೇಂದ್ರ ಮೋದಿ ತುಂಬಾ ಸಿಂಪಲ್, ಅವರ ರಾಜಕೀಯ ಕೂಡ ಸಿಂಪಲ್ ಅಂತಾ ಅವರ ಅಭಿಮಾನಿಗಳು & ಬೆಂಬಲಿಗರು ಹೇಳುತ್ತಾರೆ. ಆದರೆ ಇಂದು ಮುಂಬೈ ನಗರದಲ್ಲಿ, ವ್ಯತಿರಿಕ್ತ ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರ ಭರ್ಜರಿ ಚುನಾವಣಾ ರೋಡ್ ಶೋ ಕಾರಣಕ್ಕೆ ಲಕ್ಷಾಂತರ ಜನ ಮುಂಬೈ ನಗರದಲ್ಲಿ ನರಳಾಡಿಬಿಟ್ಟರು. ಅಲ್ಲದೆ ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅವರ ರೋಡ್ ಶೋ ಬಗ್ಗೆಯೂ ಆಕ್ರೋಶ ಹೊರಹಾಕಿದರು. ವಿಡಿಯೋ ನೋಡಲು ಮುಂದೆ ಓದಿ.
ಅಂದಹಾಗೆ ಇಲ್ಲಿ ಆಗಿದ್ದು ಏನು ಅಂದ್ರೆ, 2024ರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಬಿಜೆಪಿ & ಎನ್ಡಿಎ ಮೈತ್ರಿ ಅಭ್ಯರ್ಥಿಗಳ ಪರವಾಗಿ ನೆರೆ ರಾಜ್ಯ ಮಹಾರಾಷ್ಟ್ರದ ರಾಜಧಾನಿ ಮುಂಬೈ ನಗರದಲ್ಲಿ ರೋಡ್ ಶೋ ನಡೆಸಿದರು. ಹೀಗೆ ಪ್ರಚಾರ ಕಾರ್ಯ ನಡೆಸಲು ಶಿವಸೇನೆ ಸೇರಿದಂತೆ ಬಿಜೆಪಿ ಮಿತ್ರ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದವು.

ಆದರೆ ಮುಂಬೈ ನಗರದಲ್ಲಿ ಆಗಿದ್ದೇ ಬೇರೆ, ಪ್ರಧಾನಿ ಮೋದಿ ಅವರ ರೋಡ್ ಶೋ ಹಿನ್ನೆಲೆ ಮುಂಬೈ ನಗರದಲ್ಲಿ ಹಲವು ರಸ್ತೆಗಳು ಬಂದ್ ಆಗಿದ್ದವು, ಹಾಗೇ ಮೆಟ್ರೋ ಸೇವೆಗೆ ಕೂಡ ಕಂಟಕ ಎದುರಾಗಿತ್ತು. ಆಗ ಜನರು ರೊಚ್ಚಿಗೆದ್ದರು ಎಂಬ ಆರೋಪ ಕೇಳಿಬಂದಿದ್ದು, ಜನ ಆಕ್ರೋಶ ಹೊರಹಾಕುತ್ತಾ ಮೆಟ್ರೋ ನಿಲ್ದಾಣದಲ್ಲಿ ಪರದಾಡಿದ ವಿಡಿಯೋಗಳನ್ನ ನೋಡಲು ಮುಂದೆ ಓದಿ.
Effect of PM’s @narendramodi visit to #Ghatkopar. Does PM knows about inconvenience costs to common people ? Shouldn’t the @MumbaiMetro01 service shut have been declared before for better situation? @Dev_Fadnavis @BJP4India @ECISVEEP #GeneralElection2024 #LoksabhaElection2024 pic.twitter.com/abhLx7lpag
— Akash Rohit Kothari (@awesome_ark) May 15, 2024
ಪ್ರಧಾನಿ ರೋಡ್ ಶೋ ಸಮಸ್ಯೆ?
ಹೀಗೆ ಪ್ರಧಾನಿ ಮೋದಿ ಅವರ ರೋಡ್ ಶೋ ಕಾರಣಕ್ಕೆ ವೆರ್ಸೋವಾ ಟು ಘಾಟ್ಕೋಪರ್ ಮಾರ್ಗ 1ರ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಇದರಿಂದ ಸಾವಿರಾರು ಜನ ನರಳಾಡಿದರು ಅಲ್ಲದೆ, ವೆರ್ಸೋವಾ, ಅಂಧೇರಿ, ಘಾಟ್ಕೋಪರ್ ಪ್ರದೇಶಗಳಿಗೆ ತೆರಳಬೇಕಿದ್ದ ಜನ ಒದ್ದಾಡಿ ಪರದಾಡಿದರು. ಈ ಸಮಯದಲ್ಲಿ ಅಲ್ಲೇ ಇದ್ದ ಸ್ಥಳೀಯರು ಮೆಟ್ರೋ ಪ್ರಯಾಣಿಕರ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾಗೆ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿವೆ, ಇದೇ ರೀತಿ ರಸ್ತೆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಮುಂಬೈ ನಿವಾಸಿಗಳಿಗೆ ಕೂಡ ಒದ್ದಾಟವು ಎದುರಾಗಿತ್ತು ಎಂಬ ಆರೋಪ ಕೇಳಿಬಂದಿದೆ.
PM Modi in Mumbai for campaigning, public services go for a toss for security reasons and has led to creating massive chaos. pic.twitter.com/RRN4TkkGrf
— Priyanka Chaturvedi🇮🇳 (@priyankac19) May 15, 2024
ರೋಡ್ ಶೋ ಬಗ್ಗೆ ಪ್ರಶ್ನೆ
ಒಟ್ನಲ್ಲಿ ಚುನಾವಣೆ ಪ್ರಚಾರದ ಕಾರಣಕ್ಕೆ ಮುಂಬೈ ನಗರದ ಜನರು ಇಂದು ಒದ್ದಾಡಿಬಿಟ್ಟರು. ಮತ್ತೊಂದು ಕಡೆ ನಿನ್ನೆಯಷ್ಟೇ ಮುಂಬೈ ಮಹಾನಗರ ಭೀಕರ ಗಾಳಿ & ಮಳೆಗೆ ನಲುಗಿತ್ತು. ಅದ್ರಲ್ಲೂ ಘಾಟ್ಕೋಪರ್ ಪ್ರದೇಶದಲ್ಲಿ ದೊಡ್ಡ ಜಾಹೀರಾತು ಹೋರ್ಡಿಂಗ್ ಬಿದ್ದಿದ್ದರಿಂದ ಸುಮಾರು 16 ಜನ ಮೃತಪಟ್ಟಿದ್ದಾರೆ. ಇಷ್ಟೆಲ್ಲಾ ಸಮಸ್ಯೆ ನಡುವೆ ರಾಜಕೀಯ ಕಾರ್ಯಕ್ರಮ ಬೇಕಿತ್ತಾ? ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಧಾನಿ ಮೋದಿ ಅವರ ರೋಡ್ ಶೋ ಆಯೋಜನೆ ಮಾಡಬೇಕಿತ್ತಾ? ಎಂದು ಸ್ಥಳೀಯರು ಪ್ರಶ್ನೆ ಮಾಡುತ್ತಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications