PM Modi in Chhattisgarh: ಹಿಂದೂಗಳನ್ನು ವಿಭಜಿಸುತ್ತಿರುವ ಕಾಂಗ್ರೆಸ್- ಜಾತಿ ಗಣತಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಜಗದಲ್ಪುರ, ಅಕ್ಟೋಬರ್ 03: ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು. ಛತ್ತೀಸ್ಗಢದ ಜಗದಲ್ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಭಾರತದ ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕನ್ನು ಈ ದೇಶದ ಬಡವರು ಹೊಂದಿದ್ದಾರೆ ಎಂದು ಮೋದಿ ಪ್ರತಿಪಾದಿಸಿದರು.

ಎನ್ಡಿಎಂಸಿಯ ಸ್ಟೀಲ್ ಪ್ಲಾಂಟ್ ಸೇರಿದಂತೆ ರಾಜ್ಯದಲ್ಲಿ 26,000 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಪ್ರಧಾನಿ ಮೋದಿ ಮಾತನಾಡಿದರು.
'ಕಾಂಗ್ರೆಸ್ ನಾಯಕರು ಜಿತ್ನಿ ಆಬಾದಿ, ಉತ್ನಾ ಹಕ್ ( ಒಂದು ಸಮುದಾಯದ ಜನಸಂಖ್ಯೆಯ ಆಧಾರದ ಮೇಲೆ ಹಕ್ಕುಗಳ ಪ್ರಮಾಣ ) ಎಂದು ಹೇಳುತ್ತಿದ್ದಾರೆ. ನನಗೆ ಮಾತ್ರ ದೇಶದ ಅತಿದೊಡ್ಡ ಜನಸಂಖ್ಯೆ ಎಂದರೆ ಬಡವರು. ಅವರ ಕಲ್ಯಾಣವೇ ನನ್ನ ಉದ್ದೇಶವಾಗಿದೆ' ಎಂದು ತಿಳಿಸಿದರು.

'ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳಲ್ಲಿ ಅಲ್ಪಸಂಖ್ಯಾತರಿಗೆ ಮೊದಲ ಹಕ್ಕು ಎಂದು ಹೇಳುತ್ತಿದ್ದರು. ಆದರೆ, ಈಗ ಅಧಿಕ ಜನಸಂಖ್ಯೆಯನ್ನು ಹೊಂದಿರುವವರಿಗೆ ಮೊದಲ ಹಕ್ಕು ಎಂಬುದನ್ನು ಕಾಂಗ್ರೆಸ್ ಹೇಳುತ್ತಿದೆ. ಜನಸಂಖ್ಯೆಯು ಯಾರಿಗೆ ಮೊದಲ ಹಕ್ಕು ಎಂಬುದನ್ನು ನಿರ್ಧರಿಸುತ್ತದೆ. ಈಗ ಕಾಂಗ್ರೆಸ್ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತದೆಯೇ?' ಎಂದು ಪ್ರಶ್ನಿಸಿದರು.
ಹಾಗಾದರೆ, ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆಯೇ? ಬಹುಸಂಖ್ಯಾತ ಹಿಂದೂಗಳು ಕಾಂಗ್ರೆಸ್ ಬಳಿಗೆ ಹೋಗಿ ಅವರ ಹಕ್ಕುಗಳನ್ನು ಕೇಳಬೇಕೇ? ಎಂದು ಪ್ರಧಾನಿ ಮೋದಿ ಕೇಳಿದರು.
ಹಿಂದೂಗಳನ್ನು ವಿಭಜಿಸಿ ಸಮಾಜದಲ್ಲಿ ತಾರತಮ್ಯವನ್ನು ಹೆಚ್ಚಿಸುವ ಮೂಲಕ ದೇಶವನ್ನು ನಾಶಮಾಡಲು ಕಾಂಗ್ರೆಸ್ ಬಯಸುತ್ತಿದೆ. ಅವರು ದೇಶಕ್ಕೆ ಬಡತನ ಬಿಟ್ಟು ಬೇರೇನನ್ನೂ ಕೊಟ್ಟಿಲ್ಲ ಎಂಬ ಗಂಭೀರ ಆರೋಪವನ್ನು ಪ್ರಧಾನಿ ಮಾಡಿದರು.
ಕಾಂಗ್ರೆಸ್ ಅನ್ನು ಈಗ ಪಕ್ಷದ ಮೂಲ ಜನರು ನಡೆಸುತ್ತಿಲ್ಲ. ಆ ಪಕ್ಷದ ದೊಡ್ಡ ನಾಯಕರ ಬಾಯಿ ಮುಚ್ಚಿಸಲಾಗಿದೆ. ಅವರು ಏನನ್ನೂ ಮಾತನಾಡಲು ಧೈರ್ಯ ಮಾಡುತ್ತಿಲ್ಲ. ಕಾಂಗ್ರೆಸ್ ನಾಯಕತ್ವವನ್ನು ಹೊರಗುತ್ತಿಗೆ ನೀಡಲಾಗಿದೆ. ಕೆಲವರು ತೆರೆಮರೆಯಲ್ಲಿ ನಿಂತು ಪಕ್ಷವನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.
ಈ ಜನರು ಭಾರತ ವಿರೋಧಿ ಶಕ್ತಿಗಳೊಂದಿಗೆ ಶಾಮೀಲಾಗಿದ್ದಾರೆ. ಯಾವುದೇ ಬೆಲೆ ತೆತ್ತಾದರೂ ಹಿಂದೂಗಳನ್ನು ವಿಭಜಿಸುವ ಮೂಲಕ ದೇಶವನ್ನು ನಾಶ ಮಾಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಬಡವರನ್ನು ಒಡೆಯಲು ಬಯಸುತ್ತಿದೆ. ಅವರು ( ಕಾಂಗ್ರೆಸ್ ) ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅವರಿಗೆ ಇಲ್ಲಿಗೆ ಬಂದು ನಿಮ್ಮ ಜೊತೆಗೆ ಮಾತನಾಡಲು ಸಮಯವಿಲ್ಲ. ಆದರೆ, ತಮ್ಮ ಸರ್ಕಾರವನ್ನು ಉಳಿಕೊಳ್ಳಲು ಮಾತ್ರ ತಮ್ಮನ್ನು ತಾವು ಮುಡಿಪಾಗಿಟ್ಟುಕೊಂಡಿದ್ದಾರೆ ಎಂದು ಪ್ರಧಾನಿ ಹೇಳಿದರು.
ಯಾವುದೇ ಭ್ರಷ್ಟರು ಮೋದಿಯವರ ಕಣ್ಣಿಗೆ ಬೀಳಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅವರು ಇಲ್ಲಿಗೆ ಬರಲು ಹೆದರುತ್ತಾರೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications