PM Modi Special Interview: ಮೋದಿ ಏಕೆ ಪತ್ರಿಕಾಗೋಷ್ಠಿ ನಡೆಸುವುದಿಲ್ಲ? ಪ್ರಧಾನಿ ಉತ್ತರಿಸಿದ್ದು ಹೀಗೆ...
ಲೋಕಸಭಾ ಚುನಾವಣಾ ಪ್ರಚಾರದ ಗದ್ದಲದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಟುಡೇ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಿದರು.
ವಿಶೇಷ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರಿಕಾಗೋಷ್ಠಿ ನಡೆಸದಿರುವ ಬಗ್ಗೆ ಮತ್ತು ಸಂದರ್ಶನಗಳನ್ನು ನೀಡದಿರುವ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತುಂಬಾ ಆಸಕ್ತಿದಾಯಕ ಉತ್ತರಗಳನ್ನು ನೀಡಿದ್ದಾರೆ.

ಈ ಬಗ್ಗೆ ಉತ್ತರಿಸಿದ ಪ್ರಧಾನಿ ಮೋದಿ, 'ಮೊದಲ ವಿಷಯವೆಂದರೆ ನಾನು ಎಂದಿಗೂ ಅದನ್ನು ನಿರಾಕರಿಸಿಲ್ಲ. ಮಾಧ್ಯಮಗಳನ್ನು ಒಂದು ನಿರ್ಧಿಷ್ಟ ರೀತಿಯಲ್ಲಿ ಬಳಸಲಾಗಿದೆ. ನಾನು ಆ ದಾರಿಯಲ್ಲಿ ಹೋಗಲು ಬಯಸುವುದಿಲ್ಲ. ನಾನು ಕಷ್ಟಪಟ್ಟು ಕೆಲಸ ಮಾಡಲು ಬಯಸುತ್ತೇನೆ. ನಾನು ಬಡವರ ಮನೆ ಬಾಗಿಲನ್ನು ತಲುಪಲು ಬಯಸುತ್ತೇನೆ' ಎಂದು ಅವರು ಹೇಳಿದರು.
'ನಾನು ವಿಜ್ಞಾನ ಭವನದಲ್ಲಿ ರಿಬ್ಬನ್ಗಳನ್ನು ಕತ್ತರಿಸಬಲ್ಲೆ ಮತ್ತು ಫೋಟೋಗಳನ್ನು ತೆಗೆಯಬಲ್ಲೆ. ಆದರೆ ನಾನು ಹಾಗೆ ಮಾಡುವುದಿಲ್ಲ. ನಾನು ಜಾರ್ಖಂಡ್ನಂತ ಸಣ್ಣ ಜಿಲ್ಲೆಗೆ ಹೋಗಿ ಕೆಲಸ ಮಾಡಲು ಬಯಸುತ್ತೇನೆ' ಎಂದರು. 'ನಾನು ಹೊಸ ಸಂಸ್ಕೃತಿಯನ್ನು ತಂದಿದ್ದೇನೆ. ಆ ಸಂಸ್ಕೃತಿ ಸರಿಯಾಗಿದ್ದರೆ, ಮಾಧ್ಯಮಗಳು ಅದನ್ನು ಸರಿಯಾದ ರೀತಿಯಲ್ಲಿ ಪ್ರಸ್ತುತಪಡಿಸುತ್ತವೆ ಇಲ್ಲವಾದಲ್ಲಿ ಬಿಡುತ್ತವೆ'' ಎಂದರು.
'ಎರಡನೆಯದಾಗಿ, ನಾನು ಸಂಸತ್ತಿಗೆ ಜವಾಬ್ದಾರನಾಗಿದ್ದೇನೆ. ಸಂಸತ್ತಿನಲ್ಲಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ' ಎಂದು ಮೋದಿ ಹೇಳಿದರು. 'ಮೂರನೆಯದಾಗಿ, ಮಾಧ್ಯಮಗಳು ಹಿಂದೆ ಇದ್ದಂತೆ ಇಲ್ಲ. ಏಕೆಂದರೆ ನಾನು ಆಜ್ ತಕ್ ಜೊತೆ ಮಾತನಾಡುತ್ತಿದ್ದೆ. ಆದರೆ ಈಗ ನಾನು ಯಾರೊಂದಿಗೆ ಮಾತನಾಡುತ್ತಿದ್ದೇನೆ ಎಂದು ವೀಕ್ಷಕರಿಗೆ ತಿಳಿದಿದೆ' ಎಂದರು.
'ಇಂದು, ಮಾಧ್ಯಮ ಪ್ರತ್ಯೇಕ ಘಟಕವಲ್ಲ. ಮೊದಲು ಸಂವಹನಕ್ಕೆ ಒಂದೇ ಒಂದು ಮೂಲವಿತ್ತು ಮತ್ತು ಮಾಧ್ಯಮವೇ ಸರ್ವಸ್ವವಾಗಿತ್ತು. ಇಂದು ದ್ವಿಮುಖ ಸಂವಹನವಿದೆ. ಮಾಧ್ಯಮಗಳಿಲ್ಲದೆ ಸಾರ್ವಜನಿಕರೂ ಮಾತನಾಡಬಹುದು' ಎಂದು ಅವರು ಹೇಳಿದರು. ತಮ್ಮ ಬಗ್ಗೆ ಚಾನೆಲ್ಗಳು ಏನು ಹೇಳುತ್ತವೆ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಮತ್ತು ವಿವಿಧ ಭಾಷೆಗಳಲ್ಲಿ 900 ಭಾರತೀಯ ಚಾನೆಲ್ಗಳಿವೆ ಎಂದು ಹೆಮ್ಮೆಪಡುತ್ತೇನೆ ಎಂದು ಪ್ರಧಾನಿ ಹೇಳಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications