ಅಸಹಿಷ್ಣುತೆ ವಿವಾದ: ಅನ್ಸಾರಿಗೆ ಮಾತಿನಲ್ಲೇ ಚಾಟಿ ಬೀಸಿದ ಪ್ರಧಾನಿ ಮೋದಿ
ಭಾರತದಲ್ಲಿ ಅಲ್ಪಸಂಖ್ಯಾತರು ಅಸುರಕ್ಷಿತರೆಂದಿದ್ದ ಹಮೀದ್. ಇದಕ್ಕೆ ಪರೋಕ್ಷ ಉತ್ತರ ನೀಡಿರುವ ಮೋದಿ, ಉಪರಾಷ್ಟ್ರಪತಿ ಹುದ್ದೆಯಿಂದ ಕೆಳಗಿಳಿದ ನಂತರ ನಿಮ್ಮ ಮೂಲ ಸ್ವಭಾವದಂತೆ ನಡೆಯಬಹುದು ಎಂದಿದ್ದಾರೆ.
ನವದೆಹಲಿ, ಆಗಸ್ಟ್ 11: ತಮ್ಮ ಸ್ಥಾನದಿಂದ ನಿರ್ಗಮಿಸುವ ಹೊತ್ತಿನಲ್ಲಿ ಅಸಹಿಷ್ಟುತೆಯ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿಕೊಂಡಿರುವ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಾತಿನಲ್ಲೇ ಚಾಟಿ ಬೀಸಿದ್ದಾರೆ.
ಇತ್ತೀಚೆಗೆ, ಹೇಳಿಕೆಯೊಂದನ್ನು ನೀಡಿದ್ದ ಹಮೀದ್ ಅನ್ಸಾರಿ, ''ಭಾರತದಲ್ಲಿ ಅಸಹಿಷ್ಣುತೆ (ಧಾರ್ಮಿಕ ವಿಚಾರದಲ್ಲಿ) ಹೆಚ್ಚಾಗಿದೆ. ಅಲ್ಪ ಸಂಖ್ಯಾತರು ಅಭದ್ರತೆಯ ಪರಿಸ್ಥಿತಿ ಎದುರಿಸುತ್ತಿದ್ದಾರೆ'' ಎಂದು ಹೇಳುವ ಮೂಲಕ ವಿವಾದ ಮೈಮೇಲೆಳೆದುಕೊಂಡಿದ್ದರು. ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಈ ಬಗ್ಗೆ ಪ್ರಧಾನಿ ಮೋದಿ ಕೂಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ''ನೀವಿನ್ನು ನಿಮ್ಮ ಮೂಲ ಸ್ವಭಾವ, ಮೂಲ ಸಿದ್ಧಾಂತದಂತೆಯೇ ನಡೆದುಕೊಳ್ಳಬಹುದು'' ಎಂದು ಹೇಳಿ ಅನ್ಸಾರಿಯವರಿಗೆ ಮಾತಿನಲ್ಲೇ ಹೊಡೆತ ಕೊಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಗುರುವಾರ ನಡೆದ ಹಮೀದ್ ಅನ್ಸಾರಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಅನ್ಸಾರಿಯವರ ರಾಜಕೀಯ ಜೀವನ ಹಾಗೂ ಅವರ ಸಾಧನೆಗಳನ್ನು ಕೊಂಡಾಡಿದ ಅವರು, ಹೀಗೆ ಪರೋಕ್ಷವಾಗಿ ಅನ್ಸಾರಿಯವರನ್ನು ಚುಚ್ಚಿದರು.
ಹಮೀದ್ ಅವರ ಈ ಹೇಳಿಕೆಗೆ ಈಗಾಗಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನಿಯೋಜಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ''ಇದೊಂದು ರಾಜಕೀಯ ಪ್ರೇರಿತ ಹೇಳಿಕೆ. ಭಾರತದಲ್ಲಿ ಅಲ್ಪಸಂಖ್ಯಾತರು ಸುಭದ್ರವಾಗಿದ್ದಾರೆ, ಅವರಿಗೆ ಸಿಗಬೇಕಾದ ಎಲ್ಲಾ ಸವಲತ್ತುಗಳೂ ಸಿಗುತ್ತಿವೆ'' ಎಂದಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications