Ayodhya: ಅಯೋಧ್ಯೆ ಶ್ರೀರಾಮ ಮಂದಿರದ ಶಿಖರ ಮೇಲೆ ಧ್ವಜಾರೋಹಣಕ್ಕೆ ಕ್ಷಣಗಣನೆ: ಪ್ರಧಾನಿ ಮೋದಿ ಆಗಮನ
PM Modi in Ayodhya: ಉತ್ತರ ಪ್ರದೇಶದ ಶ್ರೀ ಅಯೋಧ್ಯೆ ಶ್ರೀರಾಮ ಮಂದಿರದ ಕಾಮಗಾರಿ ಸಂಪೂರ್ಣಗೊಂಡಿದೆ. ಇದರ ಪ್ರಯುಕ್ತ ಇಂದು ಮಹತ್ವದ ಸಮಾರಂಭ ಜರುಗಲಿದೆ. ರಾಮ ಮಂದಿರದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಶೇಷ ಧ್ವಜಾರೋಹಣ ನವೆರವೇರಿಸಲಿದ್ದಾರೆ. ಅಪಾರ ಭಕ್ತಗಣ ಈ ಅದ್ಧೂರಿ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಈ ಸಂಬಂಧ ಮಂಗಳವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆ ತಲುಪಿದರು.
ಅಯೋಧ್ಯೆಯ ರಾಮ ಮಂದಿರದ ಶಿಖರದ ಮೇಲೆ ಇಂದು ಮಧ್ಯಾಹ್ನ ವಿಶೇಷ ಧ್ವಜಾರೋಹಣ ನೆರವೇರಲಿದೆ. ಈ ಸಮಾರಂಭವು ಮಂದಿರ ನಿರ್ಮಾಣ ಪೂರ್ಣಗೊಳ್ಳುವಿಕೆಯನ್ನು ಸಂಕೇತಿಸುತ್ತದೆ. ಪುರೋಹಿತರು ಮತ್ತು ಪ್ರಧಾನಮಂತ್ರಿ ಅವರ ಕಚೇರಿ ತಿಳಿಸಿರುವಂತೆ, ಮಧ್ಯಾಹ್ನ ಅತ್ಯಂತ ಶುಭ ಸಮಯವೆಂದು ಪರಿಗಣಿಸಲಾದ ಅಭಿಜಿತ್ ಮುಹೂರ್ತದಲ್ಲಿ ಪ್ರಧಾನಿ ಮೋದಿಯವರು ವಿಶೇಷ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಪ್ರಧಾನಿ ಮೋದಿಯವರು ಈಗಾಗಲೇ ಮಹರ್ಷಿ ವಾಲ್ಮಿಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ನಂತರ ಅವರು ಅಲ್ಲಿಂದ M-17 ಹೆಲಿಕಾಪ್ಟರ್ ನಲ್ಲಿ ಬರಲಿದ್ದಾರೆ. ಬಳಿಕ ಅವರು ಶ್ರೀ ರಾಮ ಜನ್ಮಭೂಮಿ ಅಯೋಧ್ಯ ದೇವಾಲಯ ಪ್ರವೇಶಿಸಿದರು. ಪುರೋಹಿತರು, ಪ್ರಮುಖ ರಾಜಕೀಯ ಗಣ್ಯರು ಸೇರಿದಂತೆ ಸುಮಾರು 8000 ಮಂದಿ ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
श्री राम जन्मभूमि मंदिर पर धर्म ध्वजारोहण के मंगल उत्सव का सीधा प्रसारण
— Shri Ram Janmbhoomi Teerth Kshetra (@ShriRamTeerth) November 25, 2025
Live from the Dharma Dhwajarohan utsav at Shri Ram Janmabhoomi Mandir https://t.co/Qy6aEBK2gb
ಧ್ವಜದ ವಿಶೇಷತೆ & ಏನನ್ನು ಸಂಕೇತಿಸುತ್ತದೆ?
ಅಯೋಧ್ಯೆ ಶ್ರೀರಾಮ ಮಂದಿರ ದೇಗುಲ 161 ಅಡಿ ಎತ್ತರದ ಗೋಪುರ ಮೇಲೆ ಈ ವಿಶೇಷ ಧ್ವಜ (ಭಗವಾಧ್ವಜ) ಹಾರಾಡಲಿದೆ. 22 ಅಡಿ ಉದ್ದ, 11 ಅಡಿ ಅಗಲ ಇರುವ ಭಾವುಟ ಇದಾಗಿದೆ. ದೇವಾಲಯದ ಮೇಲಿನ 42 ಅಡಿ ಎತ್ತರದ ಕಂಬದ ಮೇಲೆ ಹಾರಿಸಲಾಗುತ್ತದೆ ಎಂದು ಶ್ರೀರಾಮ ಜನ್ಮಭೂಮಿ ದೇವಾಲಯ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಎಎನ್ಐಗೆ ತಿಳಿಸಿದ್ದಾರೆ.
ಧ್ವಜವು ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ ವಿಕಿರಣ ಸೂರ್ಯನ ಚಿತ್ರ ಸಂಕೇತಿಸುತ್ತದೆ. ಅದರ ಮೇಲೆ ಕೋವಿದರ ಮರದ ಚಿತ್ರದೊಂದಿಗೆ 'ಓಂ' ಎಂದು ಬರೆಯಲಾಗಿದೆ. ಪವಿತ್ರ ಕೇಸರಿ ಧ್ವಜವು ರಾಮ ರಾಜ್ಯದ ಆದರ್ಶಗಳನ್ನು ಸಾಕಾರಗೊಳಿಸುವ ಘನತೆ, ಏಕತೆ ಮತ್ತು ಸಾಂಸ್ಕೃತಿಕ ನಿರಂತರತೆಯ ಸಂದೇಶವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯವು ಮಾಹಿತಿ ನೀಡಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications