ಮಾರ್ಚ್ 12ರಂದು ಮೊದಲ 'ಕ್ವಾಡ್' ಸಮ್ಮೇಳನ: ಮೋದಿ-ಬೈಡನ್ ಭೇಟಿ
ನವದೆಹಲಿ, ಮಾರ್ಚ್ 10: ನಾಲ್ಕು ದೇಶಗಳ ಕಾರ್ಯಯೋಜನೆ ಚೌಕಟ್ಟಿನ ಕುರಿತಾದ ನಾಯಕರ ಮೊದಲ ಸಭೆ (ಕ್ವಾಡ್) ಮಾರ್ಚ್ 12ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಈ ಅನ್ಲೈನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಈ ನಾಲ್ಕು ದೇಶಗಳ ನಾಯಕರು ಹಂಚಿಕೆಯಾದ ಹಿತಾಸಕ್ತಿಗಳ ಜಾಗತಿಕ ಹಾಗೂ ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಜತೆಗೆ ಮುಕ್ತ, ತೆರೆದ ಹಾಗೂ ಒಳಗೊಳ್ಳುವಿಕೆಯ ಇಂಡೋ-ಪೆಸಿಫಿಕ್ ಪ್ರದೇಶವನ್ನು ನಿಭಾಯಿಸುವತ್ತ ಸಹಕಾರದ ಕುರಿತಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಪೂರೈಕೆ ಸರಪಳಿಯ ಚೇತರಿಕೆ, ಹೊಸ ಸೃಷ್ಟಿ ಹಾಗೂ ಮಹತ್ವದ ತಂತ್ರಜ್ಞಾನಗಳು, ಸಮುದ್ರತೀರ ಭದ್ರತೆ ಮತ್ತು ಹವಾಮಾನ ವೈಪರೀತ್ಯ ಸೇರಿದಂತೆ ಸಮಕಾಲೀನ ಸವಾಲುಗಳ ಕುರಿತು ಸಹ ಅಭಿಪ್ರಾಯಗಳ ವಿನಿಮಯಕ್ಕೆ ಸಮಾವೇಶದಲ್ಲಿ ಅವಕಾಶ ಸಿಗಲಿದೆ.

ಇದಲ್ಲದೆ ಮುಖ್ಯವಾಗಿ ಕೋವಿಡ್-19 ಸಾಂಕ್ರಾಮಿಕವನ್ನು ಎದುರಿಸುವ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸುರಕ್ಷಿತ, ಪರಿಣಾಮಕಾರಿ ಹಾಗೂ ಕಡಿಮೆ ದರದಲ್ಲಿ ಲಸಿಕೆಗಳನ್ನು ಉತ್ಪಾದಿಸುವ ನಿಟ್ಟಿನಲ್ಲಿ ಪಾಲುದಾರಿಕೆ ಹೊಂದುವುದರ ಕುರಿತು ಚರ್ಚೆ ನಡೆಯಲಿದೆ.
ಇದಕ್ಕೂ ಮುನ್ನ ಜಪಾನ್ ಪ್ರಧಾನಿ ಯೊಶಿಹಿಡೆ ಅವರ ಜತೆಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ ನಡೆಸಿದರು. ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಸಂಬಂಧ ಕ್ವಾಡ್ ಚೌಕಟ್ಟಿನಲ್ಲಿ ಹಾಗೂ ದ್ವಿಪಕ್ಷೀಯವಾಗಿ ಸಹಭಾಗಿತ್ವವನ್ನು ತೀವ್ರಗೊಳಿಸುವುದರ ಬಗ್ಗೆ ಸಮಾಲೋಚನೆ ನಡೆಸಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications