ಬಸವಣ್ಣ ಪ್ರತಿಮೆ ಅನಾವರಣ ಆಹ್ವಾನ ಸ್ವೀಕರಿಸಿದ ಮೋದಿ
ನವದೆಹಲಿ, ಅ.26: ಲಂಡನ್ನಿನ ಥೇಮ್ಸ್ ನದಿ ತಟದಲ್ಲಿ 'ಜಗಜ್ಯೋತಿ ಬಸವೇಶ್ವರ' ಪ್ರತಿಮೆ ಅನಾವರಣಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಮಾರ್ಚ್ ತಿಂಗಳಿನಲ್ಲಿ ಲ್ಯಾಂಬೆತ್ ನ ಮಾಜಿ ಮೇಯರ್ ಕನ್ನಡಿಗ ನೀರಜ್ ಪಾಟೀಲ್ನೀಡಿದ ಆಹ್ವಾನವನ್ನು ಸ್ವೀಕರಿಸುವುದಾಗಿ ಪ್ರಧಾನಿ ಮೋದಿ ಅವರು ಘೋಷಿಸಿದ್ದಾರೆ.
12ನೇ ಶತಮಾನದ ಮಾನವತಾವಾದಿ, ಕ್ರಾಂತಿಯೋಗ ಬಸವಣ್ಣ ಅವರ ಪ್ರತಿಮೆಯನ್ನು ಲಂಡನ್ನಿನಲ್ಲಿ ಸ್ಥಾಪಿಸಲು ಪ್ರಮುಖ ಕಾರಣಕರ್ತರಾದವರು ಲ್ಯಾಂಬೆತ್ನ ಮಾಜಿ ಮೇಯರ್ ನೀರಜ್ ಪಾಟೀಲ್.
ಮಾ.24ರಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ನೀರಜ್ ಅವರು ಬಸವಣ್ಣ ಪ್ರತಿಮೆ ಅನಾವರಣಕ್ಕೆ ಆಹ್ವಾನ ನೀಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೂನ್ ಜುಲೈ ತಿಂಗಳಿನಲ್ಲೇ ಕಾರ್ಯಕ್ರಮ ನಡೆಯಬೇಕಿತ್ತು. ಅದರೆ, ಮೋದಿ ಅವರು ವಿದೇಶಿ ಪ್ರವಾಸ ನಿರತರಾಗಿದ್ದರಿಂದ ಸಾಧ್ಯವಾಗಲಿಲ್ಲ.

ಈಗ ನವೆಂಬರ್ ಎರಡನೇ ವಾರದಲ್ಲಿ ಮೋದಿ ಅವರು ಬ್ರಿಟನ್ ಪ್ರವಾಸ ಕೈಗೊಳ್ಳಲಿದ್ದಾರೆ ಈ ಸಂದರ್ಭದಲ್ಲಿ ನ .14ರಂದು ಬಸವೇಶ್ವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಥೇಮ್ಸ್ ನದಿ ತೀರದಲ್ಲಿ ಜಗಜ್ಯೋತಿ ಬಸವೇಶ್ವರರ 3.5 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವ ಸಲುವಾಗಿ 2010ರ ಜನವರಿ 19ರಂದು ಬಸವೇಶ್ವರ ಫೌಂಡೇಶನ್ ಸ್ಥಾಪಿಸಲಾಗಿತ್ತು.
ಪ್ರತಿಮೆ ನಿರ್ಮಾಣ ಸಂಬಂಧಿಸಿ 2.50 ಲಕ್ಷ ಪೌಂಡ್ಗಳನ್ನು ಬ್ರಿಟನ್ ಮತ್ತು ಸಾಗರೋತ್ತರ ರಾಷ್ಟ್ರಗಳಲ್ಲಿರುವ ಭಾರತೀಯ ಸಮುದಾಯದವರು ನೀಡಿದ್ದರು. ಅಂದಿನ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2010-11ರ ಬಜೆಟ್ನಲ್ಲಿ 3 ಕೋಟಿ ರು. ಅನುದಾನ ನೀಡಿತ್ತು.[ಲಂಡನ್ನಲ್ಲಿ ಬಸವಣ್ಣ ಪುತ್ಥಳಿ ಸ್ಥಾಪನೆಗೆ ಕೌನ್ಸಿಲ್ ಒಪ್ಪಿಗೆ]
ಮೂರ್ತಿ ಸ್ಥಾಪನೆ ಸಂಬಂಧ ಲ್ಯಾಂಬೆತ್ ಯೋಜನಾ ಸಮಿತಿಗೆ ಪ್ರಸ್ತಾವನೆಗೆ ಅನುಮತಿ ಸಿಕ್ಕ ಬಳಿಕ ವಾಕ್ಸ್ಹಾಲ್ ಸ್ಟ್ರಿಂಗ್ ಉದ್ಯಾನವನದ ಅಭಿವೃದ್ಧಿಗೆ ಈ ಮೊತ್ತವನ್ನು ಬಳಸಲಾಗಿತ್ತು. ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ಭಾರತದ ಸಂಸತ್ತಿನಲ್ಲಿಯೂ ಬಸವಣ್ಣನವರ ಪ್ರತಿಮೆ ಅನಾವರಣಗೊಳಿಸಲಾಗಿದ್ದು ಇಲ್ಲಿ ಸ್ಮರಿಸಬಹುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications