ಇಂದು ಜಪಾನ್ ಪ್ರಧಾನಿ ಭಾರತ ಭೇಟಿ, ಅಹಮದಾಬಾದ್ ನಲ್ಲಿ ಭವ್ಯ ಸ್ವಾಗತ
ಅಹಮದಾಬಾದ್, ಸೆಪ್ಟೆಂಬರ್ 13: ಜಪಾನ್-ಭಾರತ 12ನೇ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ಪ್ರಧಾನಿ ಶಿಂಜೋ ಅಬೆ ಇಂದು ಅಹಮದಾಬಾದ್ ಗೆ ಆಗಮಿಸಲಿದ್ದಾರೆ. ಅವರಿಗೆ ಭವ್ಯ ಸ್ವಾಗತ ಕೋರಲು ಅಹಮದಾಬಾದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಕಾತರದಿಂದ ಕಾಯುತ್ತಿದ್ದಾರೆ.
ಸರಿಯಾಗಿ ಮೂರು ವರ್ಷಗಳ ಕೆಳಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೊದಲ ವಿದೇಶಿ ಪ್ರವಾಸವನ್ನು ಜಪಾನಿನಿಂದ ಆರಂಭಿಸಿದಾಗ ಇದೇ ರೀತಿ ಶಿಂಜೋ ಅಬೆ ಮೋದಿಯವರಿಗೆ ಭವ್ಯ ಸ್ವಾಗತ ಕೋರಿದ್ದರು. ಇದೀಗ ಪ್ರಧಾನಿ ಮೋದಿಯವರ ಸರದಿ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಅಬೆಯವರನ್ನು ಸ್ವತಃ ಮೋದಿ ತೆರೆದ ಜೀಪಿನಲ್ಲಿ ಸಾಬರಮತಿ ಆಶ್ರಮಕ್ಕೆ ರೋಡ್ ಶೋ ಮೂಲಕ ಕರೆದೊಯ್ಯಲಿದ್ದಾರೆ. ಈ ವೇಳೆ 28 ರಾಜ್ಯಗಳ ಟ್ಯಾಬ್ಲೋಗಳು, ಶಾಲಾ ಮಕ್ಕಳು ರೋಡ್ ಶೋಗೆ ಕಳೆ ತುಂಬಲಿದ್ದಾರೆ.
ರೋಡ್ ಶೋ ಹಿನ್ನಲೆಯಲ್ಲಿ ನರೇಂದ್ರ ಮೋದಿ ಮತ್ತು ಶಿಂಜೋ ಅಬೆಯವರ ಹೋರ್ಡಿಂಗ್ ಮತ್ತು ಫ್ಲೆಕ್ಸ್ ಗಳನ್ನು ದಾರಿ ತುಂಬಾ ಹಾಕಲಾಗಿದೆ.
ಮಹಾತ್ಮ ಗಾಂಧಿಯವರ ಸಾಬರಮತಿ ಆಶ್ರಮದಿಂದ ಉಭಯ ನಾಯಕರು 16ನೇ ಶತಮಾನದ ಸಿದಿ ಸಯ್ಯದ್ ಕಿ ಜಾಲಿ ಮಸೀದಿಗೆ ಭೇಟಿ ನೀಡಲಿದ್ದಾರೆ. ನಂತರ ಉಭಯ ನಾಯಕರು ಅಹಮದಾಬಾದ್ ನ ಖ್ಯಾತ ರೆಸ್ಟೋರೆಂಟ್ ನಲ್ಲಿ ರಾತ್ರಿಯ ಊಟ ಮಾಡಲಿದ್ದಾರೆ.
ನಂತರ 100 ವರ್ಷ ಹಳೆಯ ಸಾಬರಮತಿಯ ಎಲ್ಲಿಸ್ ಸೇತುವೆಯ ಮೇಲೆ ಉಭಯ ನಾಯಕರು ರಾತ್ರಿಯ ವಾಕ್ ಮಾಡಲಿದ್ದಾರೆ. ಭೇಟಿ ಹಿನ್ನಲೆಯಲ್ಲಿ ಸೇತುವೆಯನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ.
ಈ ಭೇಟಿಯ ಕವರೇಜ್ ಗೆ ದೂರದರ್ಶನ ವಾಹಿನಿ 100 ಕ್ಯಾಮೆರಾಗಳನ್ನು ಮತ್ತು 300 ಸಿಬ್ಬಂದಿಗಳನ್ನು ನೇಮಿಸಿದೆ. ಇದರಲ್ಲಿ 40 ಕ್ಯಾಮೆರಾಗಳು ಮೋದಿಯವರ ರೋಡ್ ಶೋ ಕವರ್ ಮಾಡಲಿವೆ.
ಗುರುವಾರ ಉಭಯ ನಾಯಕರು ಗಾಂಧಿನಗರ ಮಹಾತ್ಮಾ ಮಂದಿರದಲ್ಲಿ ನಡೆಯಲಿರುವ ಭಾರತ-ಜಪಾನ್ ನ 12 ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿ, ವಾಣಿಜ್ಯ ವ್ಯವಹಾರಗಳಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಇಲ್ಲಿ ತೆಗೆದುಕೊಳ್ಳಲಾಗುತ್ತದೆ.
ಇನ್ನು ಮಹತ್ವಾಕಾಂಕ್ಷಿ ಬುಲೆಟ್ ರೈಲು ಯೋಜನೆಗೆ ಚಾಲನೆ, ಬಹಿರಂಗ ಸಭೆಗಳೂ ಗುರುವಾರ ಆಯೋಜನೆಯಾಗಿವೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications