4 ನೇ ವಾರ್ಷಿಕೋತ್ಸವಕ್ಕೆ ಪ್ರಜೆಗಳಿಗೆ ತಲೆಬಾಗಿದ ಮೋದಿ
ನವದೆಹಲಿ, ಮೇ 26: "2014 ರ ಈ ದಿನ ಭಾರತದ ಪರಿವರ್ತನೆಯ ನಮ್ಮ ಪಯಣ ಆರಂಭವಾದ ದಿನ" ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
ಕೇಂದ್ರದಲ್ಲಿ ಎನ್ ಡಿಎ ನೇತೃತ್ವದ ಮೈತ್ರಿ ಸರ್ಕಾರ ಬಹುಮತ ಪಡೆದು ಅಧಿಕಾರಕ್ಕೆ ಬಂದು ಇಂದಿಗೆ ಬರೋಬ್ಬರಿ ನಾಲ್ಕು ವರ್ಷಗಳಾಗಿವೆ. 2014 ರ ಮೇ 27 ರಂದು ನರೇಂದ್ರ ಮೋದಿಯವರು ಪ್ರಧಾನಿ ಪಟ್ಟ ಅಲಂಕರಿಸಿದ್ದರು. ಅದರ ಸವಿನೆನಪಿಗಾಗಿ ದೇಶದಾದ್ಯಂತ ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ. ಈ ಸಂದರ್ಭದಲ್ಲಿ ತಮ್ಮ ಸರ್ಕಾರಕ್ಕೆ ಬಹುಮತ ನೀಡಿ, ನಾಲ್ಕು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಲು ಸಹಕರಿಸಿದ ದೇಶಬಾಂಧವರಿಗೆ ಮೋದಿ ಟ್ವೀಟ್ ಮೂಲಕ ತಲೆಬಾಗಿದ್ದಾರೆ.

"2014 ರ ಈ ದಿನ ಭಾರತದ ಪರಿವರ್ತನೆಯ ನಮ್ಮ ಪಯಣ ಆರಂಭವಾದ ದಿನ. ಕಳೆದ ನಾಲ್ಕು ವರ್ಷಗಳಲ್ಲಿ ಅಭಿವೃದ್ಧಿಯೆಂಬುದು ಒಂದು ಕ್ರಾಂತಿಯೇ ಆಗಿದೆ. ಪ್ರತಿಯೊಬ್ಬ ಭಾರತೀಯನೂ ಈ ಕ್ರಾಂತಿಯಲ್ಲಿ ಸಮರ್ಥ ಪಾತ್ರವಹಿಸಿದ್ದಾನೆ. 125 ಕೋಟಿ ಭಾರತೀಯರು ಭಾರತವನ್ನು ಹೊಸ ಔನ್ನತ್ಯಕ್ಕೆ ಒಯ್ದಿದ್ದಾರೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
On this day in 2014, we began our journey of working towards India’s transformation.
— Narendra Modi (@narendramodi) May 26, 2018
Over the last four years, development has become a vibrant mass movement, with every citizen feeling involved in India's growth trajectory. 125 crore Indians are taking India to great heights!
"ನಮ್ಮ ಸರ್ಕಾರದ ಬಗ್ಗೆ ಅಚಲ ನಂಬಿಕೆ ಹೊಂದಿರುವ ನನ್ನೆಲ್ಲ ಭಾರತೀಯ ನಾಗರಿಕರಿಗೆ ನಾನು ತಲೆಬಾಗುತ್ತೇನೆ. ನಿಮ್ಮ ಈ ಪ್ರೀತಿ ಮತ್ತು ಬೆಂಬಲವೇ ನಮ್ಮ ಇಡೀ ಸರ್ಕಾರಕ್ಕೆ ದೊಡ್ಡ ಸ್ಪೂರ್ತಿ. ನಾವು ಇದೇ ರೀತಿಯ ಸಮರ್ಪಣಾ ಭಾವ ಮತ್ತು ಹುರುಪಿನಿಂದ ಈ ದೇಶದ ಜನರ ಸೇವೆ ಮಾಡುತ್ತೇವೆ" ಎಂದು ಸಹ ಮೋದಿ ಟ್ವೀಟ್ ಮಾಡಿದ್ದಾರೆ.
I bow to my fellow citizens for their unwavering faith in our Government. This support and affection is the biggest source of motivation and strength for the entire Government. We will continue to serve the people of India with the same vigour and dedication.
— Narendra Modi (@narendramodi) May 26, 2018
ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯನ್ನು ಜನಸಾಮಾನ್ಯರಿಗೆ ತಿಳಿಸುವ ಸಲುವಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಇಂದಿನಿಂದ 15 ದಿನಗಳ ಕಾಲ ರಾಷ್ಟ್ರದಾದ್ಯಂತ ಓಡಾಡಿ ಸಾಧನೆಯ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications