ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಭಾಷಣ; ಎಲ್ಲಿಯ ಇಮ್ರಾನ್, ಎಲ್ಲಿಯ ಮೋದಿ ಎಂದ ಕಾಂಗ್ರೆಸ್ ಮುಖಂಡ
ನವದೆಹಲಿ, ಸೆ 28: ವಿಶ್ವಸಂಸ್ಥೆಯಲ್ಲಿ ಶುಕ್ರವಾರ (ಸೆ 27) ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ವ್ಯಾಪಕ ಪ್ರಶಂಸೆಗೊಳಗಾಗಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮೋದಿಯ ಭಾಷಣವನ್ನು ಒಂದಕ್ಕೊಂದು ತುಲನೆ ಮಾಡಲಾಗುತ್ತಿದೆ.
ಮೋದಿ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ, ' ಪ್ರಧಾನಿ ಮೋದಿವರದ್ದು ತೂಕವಾದ ಭಾಷಣ" ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಘ್ವಿ, " ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಹಾಗೆಯೇ, ಮೋದಿ ಮತ್ತು ಇಮ್ರಾನ್ ಖಾನ್ ನಡುವೆ ಹೋಲಿಕೆಯೇ ಇಲ್ಲ" ಎಂದು ಬಣ್ಣಿಸಿದ್ದಾರೆ.

ಮುಂದುವರಿಯುತ್ತಾ, " ಇಮ್ರಾನ್ ಭಾಷಣದದ್ದಕ್ಕೂ ಹೆದರಿಕೆ, ಬೆದರಿಕೆಯೇ ರಾರಾಜಿಸುತ್ತಿತ್ತು. ಆದರೆ, ನಮ್ಮ ಪ್ರಧಾನಿ ಇಮ್ರಾನ್ ರೀತಿಯಲ್ಲಿ ಭಾಷಣ ಮಾಡದದ್ದೇ ಇದ್ದದ್ದು ಸಂತೋಷ".
" ಭಾರತದ ಗಾತ್ರ, ಸಾಧನೆ, ಸಂಸ್ಕೃತಿ, ಪರಂಪರೆ, ಸಾಮರ್ಥ್ಯದ ಬಗ್ಗೆ ಮೋದಿ ಮಾತನಾಡಿದರು. ಭಾರತ, ಪ್ರಧಾನಿ ಮೋದಿ ನೇತೃತ್ವದಲ್ಲಿ ಗೆದ್ದಿದೆ" ಇದು ಕಾಂಗ್ರೆಸ್ ಮುಖಂಡ ಸಿಂಘ್ವಿ ಮಾಡಿರುವ ಟ್ವೀಟಿನ ಭಾಷಾಂತರ.
ಇಮ್ರಾನ್ ಖಾನ್ ತಮ್ಮ ಐವತ್ತು ನಿಮಿಷಗಳ ತಮ್ಮ ಭಾಷಣದಲ್ಲಿ 70 ಬಾರಿ ಇಸ್ಲಾಂ, 21 ಬಾರಿ ಕಾಶ್ಮೀರ, 16 ಬಾರಿ ಭಾರತ, 12 ಬಾರಿ ಮೋದಿ, 10 ಬಾರಿ ಆರ್ಎಸ್ಎಸ್, 5 ಬಾರಿ ಹಿಂದೂ ವಿಚಾರಗಳನ್ನು ಪ್ರಸ್ತಾಪಿಸಿ ನೈಜ ಜಾಗಗತಿಕ ವಿಚಾರಗಳಿಂದಲೇ ದೂರ ಸರಿದಿದ್ದರು.
ಇದಕ್ಕೆ ತದ್ವಿರುದ್ಧ ಎನ್ನುವಂತೆ ನರೇಂದ್ರ ಮೋದಿಯು ಹವಾಮಾನ ವೈಪರೀತ್ಯ, ವಿಶ್ವ ಆರೋಗ್ಯ ಸಂಸ್ಥೆ, ಶೌಚಾಲಯ, ಸ್ವಚ್ಛತೆ ಹೀಗೆ ಜಾಗತಿಕ ವಿಚಾರಗಳ ಬಗ್ಗೆ ಮಾತನಾಡುವ ಮೂಲಕ ಪ್ರಬುದ್ಧತೆಯನ್ನು ಮೆರೆದಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications