ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಯಾಕೆ ಆಕ್ಟೀವ್ ಆಗಿರ್ತಾರೆ ಗೊತ್ತಾ?
ನವದೆಹಲಿ, ಡಿ 20: ಪ್ರಧಾನಮಂತ್ರಿ ಮತ್ತು ಪ್ರಧಾನಮಂತ್ರಿ ಕಾರ್ಯಾಲಯ ಸಾಮಾಜಿಕ ತಾಣದ ಮೂಲಕ ಸಾರ್ವಜನಿಕ ಸಂಪರ್ಕದಲ್ಲಿದ್ದ ಉದಾಹರಣೆಗಳು ಕಮ್ಮಿ ಜೊತೆಗೆ ಜನರು ಕೂಡಾ ಸಾಮಾಜಿಕ ತಾಣಗಳಲ್ಲಿ ಈಗಿನಂತೆ ಸಕ್ರಿಯವಾಗಿರಲಿಲ್ಲ.
ಕಾಲ ಬದಲಾದಂತೆ ನಾವೂ ಬದಲಾಗಬೇಕೆಂದು ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಜನರನ್ನು ತಲುಪಲು ಸಾಮಾಜಿಕ ತಾಣವನ್ನೇ ಹೆಚ್ಚಾಗಿ ನೆಚ್ಚಿಕೊಂಡಿರುವುದಂತೂ ಹೌದು.

ಅದರಲ್ಲೂ ಟ್ವಿಟರ್ ಮೂಲಕ ದಿನವೂ ತಮ್ಮ ದಿನಚರಿ ಮತ್ತು ಪ್ರಧಾನಿ ಕಾರ್ಯಾಲಯದ ಮಾಹಿತಿಗಳನ್ನು ಜನರಿಗೆ ನೀಡುತ್ತಿದ್ದಾರೆ. ಜೊತೆಗೆ, ಬಾನುಲಿ ಮೂಲಕ ದೇಶದ ಗ್ರಾಮೀಣ ಪ್ರದೇಶದ ನಾಗರೀಕರಿಗೂ ಭರವಸೆಯ ಸಂದೇಶವನ್ನು ಮುಟ್ಟಿಸುತ್ತಿದ್ದಾರೆ.
ಇದಕ್ಕೆ ಪೂರಕ ಎನ್ನುವಂತೆ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಟಿಕೆಟ್ ಸಿಗಬೇಕಿದ್ದರೆ ಅಭ್ಯರ್ಥಿಗೆ ಟ್ವಿಟರ್ ನಲ್ಲಿ ಕನಿಷ್ಠ ಐವತ್ತು ಸಾವಿರ ಹಿಂಬಾಲಕರು ಇರಬೇಕೆನ್ನುವ ಸುದ್ದಿಯನ್ನೂ ಓದಿರುತ್ತೇವೆ.
ವಿಚಾರಕ್ಕೆ ಬರುವುದಾದರೆ, ವಿರೋಧ ಪಕ್ಷದವರು ಟ್ವಿಟರ್ ನಲ್ಲಿ ಮೋದಿ ಸಕ್ರಿಯವಾಗಿರುವುದಕ್ಕೆ ಕುಹುಕವಾಡಿರುವ ಉದಾಹರಣೆಗಳು ಸಾಕಷ್ಟಿವೆ. ಇದಕ್ಕೆ ರಾಹುಲ್ ಗಾಂಧಿ ಮುಂತಾದವರೂ ಹೊರತಾಗಿರಲಿಲ್ಲ.
ಆದೇ ರೀತಿ, ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಸಕ್ರಿಯವಾಗಿರುವುದಕ್ಕೆ ಇದೊಂದು 'ಪಲಾಯನವಾದ' ಮಾಡಲು ಇರುವ ದಾರಿ ಎಂದು ಲೇವಡಿ ಮಾಡಿದ್ದಾರೆ.
ಮೋದಿ ಅಧಿಕಾರಕ್ಕೆ ಬಂದ ದಿನದಿಂದ ಟ್ವಿಟರ್ ನಲ್ಲಿ ತುಂಬಾ ಸಕ್ರಿಯವಾಗಿದ್ದಾರೆ. ಇದೊಂದು ಒನ್ ವೇ ಟ್ರಾಫಿಕ್ ಇದ್ದಂತೆ. ಇಲ್ಲಿ ಅವರನ್ನು ಪ್ರಶ್ನಿಸುವವರು ಯಾರೂ ಇಲ್ಲ, ಅವರು ನಡೆದಿದ್ದೇ ದಾರಿ ಎಂದು ಯಚೂರಿ ರಾಜ್ಯಸಭೆಯಲ್ಲಿ ಮೋದಿ ವಿರುದ್ದ ಕಿಡಿಕಾರಿದ್ದಾರೆ.

ರಾಜ್ಯಸಭೆಯಲ್ಲಿ ಮತಾಂತರದ ಕುರಿತು ನಡೆಯುತ್ತಿದ್ದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಕಮ್ಯೂನಿಸ್ಟ್ ಮುಖಂಡ ಯಚೂರಿ, ನಮ್ಮ ಪ್ರಶ್ನೆಗೆ ಉತ್ತರಿಸಲಾಗದೇ ಮೋದಿ ಅವರ ಈ ಕಾರ್ಯವೈಖರಿ 'ಪಲಾಯುನವಾದ' ಅನ್ನದೇ ಮತ್ತಿನ್ನೇನು ಅನ್ನಬೇಕೆಂದು ಟೀಕಿಸಿದ್ದಾರೆ.
ಕೆಲವು ದಿನಗಳ ನಂತರ ಪ್ರಧಾನಿಗಳು ವಾಪಸ್ ಮನೆಗೆ ಬಂದಿದ್ದಾರೆ. ಆದರೆ, ಪ್ರಧಾನಿ ಫೇಸ್ ಬುಕ್, ಟ್ವಿಟರ್, ಬ್ಲಾಗುಗಳಲ್ಲಿ ಸಕ್ರಿಯವಾಗಿರುವುದು ಮಾತ್ರ ದುರಂತ.
ಇದರಲ್ಲಿ ಅವರನ್ನು ಪ್ರಶ್ನಿಸುವವರು ಯಾರೂ ಇಲ್ಲ. ತಮ್ಮ ಅಭಿಪ್ರಾಯವನ್ನು ಇಲ್ಲಿ ಪ್ರಕಟಿಸಿ ಸುಮ್ಮನಾದರೆ ಸಾಕಾಗುವುದಿಲ್ಲ, ನಮ್ಮ ಪ್ರಶ್ನೆಗೆ ಅವರು ಉತ್ತರಿಸಬೇಕಾಗುತ್ತದೆ ಎಂದು ಸೀತಾರಾಂ ಯಚೂರಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications