Independence Day 2025: ಯುಎಸ್ ವ್ಯಾಪಾರ ಬಿಕ್ಕಟ್ಟಿನ ಮಧ್ಯೆ ಸ್ವಾವಲಂಬನೆ ಪ್ರತಿಪಾದಿಸಿದ ಪ್ರಧಾನಿ ಮೋದಿ
ನವದೆಹಲಿ, ಆಗಸ್ಟ್ 15: ಭಾರತ ಸರ್ಕಾರವು ದೇಶದ ರೈತರ ಹಿತಾಸಕ್ತಿಗಳ ಬಗ್ಗೆ ಎಂದಿಗೂ ರಾಜಿ ಮಾಡಿಕೊಳ್ಳಲ್ಲ. ರೈತರು ದೇಶವನ್ನು "ಸ್ವಾವಲಂಬಿ"ಯನ್ನಾಗಿ ಮಾಡಿದ್ದಾರೆ ಎಂದು ಹೇಳುವ ಮೂಲಕ ವ್ಯಾಪಾರ ಒಪ್ಪಂದದ ಕುರಿತಾದ ಬಿಕ್ಕಟ್ಟಿನ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿರಿಸಿಕೊಂಡು ಪ್ರಧಾನಿ ಮೋದಿಯವರು ಸೂಕ್ಷ್ಮ ಸಂದೇಶ ರವಾನಿಸಿದರು. ಅಮೆರಿಕದ ವ್ಯಾಪಾರ ಬಿಕ್ಕಟ್ಟಿನ ನಡುವೆ ದೇಶದ ಸ್ವಾವಲಂಬನೆಯನ್ನು ಎತ್ತಿ ಹಿಡಿದಿದ್ದಾರೆ.
ಇಂದು ಆಗಸ್ಟ್ 15ರಂದು ದೆಹಲಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಇಂದು ಅವರು ಸತತ 12 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯದ ನಂತರ ಎಲ್ಲರಿಗೂ ಆಹಾರ ಭದ್ರತೆ ಖಚಿತಪಡಿಸುವುದು ಒಂದು ಸವಾಲಾಗಿತ್ತು. ಈ ಸವಾಲಿರಗೆ ನಮ್ಮ ರೈತರು ಹಗೆಲು ಕೊಟ್ಟು ನಮ್ಮನ್ನು ಸ್ವಾವಲಂಬಿಗಳನ್ನಾಗಿ ಮಾಡಿದ್ದಾರೆ.

'ಆತ್ಮನಿರ್ಭರ ಭಾರತ' ಕುರಿತು ಮಾನತಾಡಿದ ಪ್ರಧಾನಿಯವರು, ಇದು ಇತರ ದೇಶಗಳ ಮೇಲೆ ಅವಲಂಬಿತರಾಗುವುದನ್ನು ತಪ್ಪಿಸುವ ಮಾರ್ಗವಾಗಿದೆ. ಭಾರತದ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ನಾವು ಸ್ವಾವಲಂಬಿಗಳಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ಭಾರತದ ನೀರಿನ ಹಕ್ಕು ಭಾರತೀಯರಿಗೆ: ಮೋದಿ
ಭಾರತದಲ್ಲಿ ಹುಟ್ಟುವ ನದಿ ನೀರಿನ ಹಕ್ಕು ಭಾರತೀರಿಗೆ ಇದೆ. ದೇಶದ ರೈತರಿಗೆ ಇದೆ. ಕಳೆದ ಏಳು ದಶಕಗಳಿಂದ ಒಪ್ಪಂದದ ಮೇರೆಗೆ ಬೇರೆ ದೇಶಗಳಿಗೆ ಭಾರತ ನೀರುಣಿಸುತ್ತಿತ್ತು. ನಮ್ಮ ಭೂಮಿ ಬರಿದಾಗುತ್ತಿತ್ತು. ಅಂದ ಮೇಲೆ ಅಂತಹ ಒಪ್ಪಂದ ಏಕೆ ಬೇಕು ಎಂದು ಅವರು ಪ್ರಶ್ನೆ ಮಾಡಿದರು. ಭಾರತದ ಹಾಗೂ ನಮ್ಮ ರೈತರ ಹಿತದೃಷ್ಠಿಯಿಂದ ಪಾಕ್ ಜತೆಗಿನ ಸಿಂಧು ನದಿ ಒಪ್ಪಂದಕ್ಕೆ ಮುಂದೆಂದೂ ಒಪ್ಪಿಗೆ ನೀಡುವುದಿಲ್ಲ ಎಂದು ತಿಳಿಸಿದರು.
ಪಾಕಿಸ್ತಾನದ ಜೊತೆಗಿನ ಜಲ ಒಪ್ಪಂದ ರದ್ದು ಕುರಿತು ಮಾತನಾಡಿದ ಪ್ರಧಾನಿ, ಭಯೋತ್ಪಾದಕತೆ ಪೋಷಿಸುವವರನ್ನು ನಾವು ಇನ್ನು ಮುಂದೆ ಬೇರೆ ಬೇರೆ ಎಂದು ಪರಿಗಣಿಸದೇ ಅವರೆಲ್ಲರನ್ನು ಒಂದೇ ಎಂದು ಕರೆಯುತ್ತೆವೆ. ಉಗ್ರರಿಗೆ ಸಹಾಯ ಮಾಡುವವರೆಲ್ಲರನ್ನು ಭಯೋತ್ಪಾದಕರಂತೆ ಕಾಣುತ್ತೇವೆ ಎಂದು ಪಾಕ್ ಹಾಗೂ ಉಗ್ರರ ಪರ ದೇಶಗಳಿಗೆ ಎಚ್ಚರಿಕೆ ನೀಡಿದರು.
ಅಮೆರಿಕದ ಕೃಷಿ ಹಾಗೂ ಡೈರಿ ಉತ್ಪನ್ನಗಳಿಗೆ ತನ್ನ ದೇಶೀಯ ಮಾರುಕಟ್ಟೆ ತೆರೆಯಲು ಟ್ರಂಪ್ ಒತ್ತಡಕ್ಕೆ ಭಾರತ ಮಣಿದಿಲ್ಲ. ಇದರಿಂದ ವ್ಯಾಪಾರ ಒಪ್ಪಂದ ನಿಂತಿದೆ. ಇದೆಲ್ಲ ಬಿಕ್ಕಟ್ಟಿನ ಮಧ್ಯೆ ಅಮೆರಿಕಾ ಅಧ್ಯಕ್ಷರು ಭಾರತದ ಮೇಲೆ ಶೇಕಡಾ 25ರಷ್ಟು ಸುಂಕ ವಿಧಿಸಿದ್ದಾರೆ. ಭಾರತವು ರಷ್ಯಾದ ತೈಲವನ್ನು ನಿರಂತರ ಖರೀದಿಸುವುದರ ಮೇಲೂ ಶೆಕಡಾ 25ರಷ್ಟು ಹೆಚ್ಚುವರಿ ಸುಂಕ ಘೋಷಿಸಿದ್ದಾರೆ.
ದೆಹಲಿಯಾದ್ಯಂತ ಹೈ ಅಲರ್ಟ್, ಬಿಗಿ ಭದ್ರತೆ
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು. .ವಿವಿಧ ಹಂತಗಳಲ್ಲಿ ಭದ್ರತೆ ಒದಗಿಸಲಾಗಿತ್ತು. 14,000 ಸಿಬ್ಬಂದಿ, ಡ್ರೋನ್ ವಿರೋಧಿ ವ್ಯವಸ್ಥೆ ನಿಯೋಜಿಸಲಾಗಿತ್ತು. ಶುಕ್ರವಾರದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕಾಗಿ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಎತ್ತರದ ಕಟ್ಟಡಗಳಲ್ಲಿ ಸ್ನೈಪರ್ಗಳು, ಹೆಚ್ಚಿನ ಕ್ಯಾಮೆರಾ ಕಣ್ಗಾವಲು ವ್ಯವಸ್ಥೇ ಇತ್ತು. ಅಗತ್ಯ ಸಂಚಾರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಲೈಟಿಂಗ್ಸ್ಗಳಿಂದ ದೆಹಲಿ ಕೆಂಪು ಕೋಟೆ ಸಿಂಗಾರಗೊಂಡಿತ್ತು. ಇಲ್ಲಿ ಐದು ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನಗಳ ಕೆಳಭಾಗವನ್ನು ಸ್ಫೋಟಕಗಳು, ಶಸ್ತ್ರಾಸ್ತ್ರಗಳು ಅಥವಾ ನಿಷಿದ್ಧ ವಸ್ತುಗಳಿಗಾಗಿ ಸ್ಕ್ಯಾನ್ ಮಾಡಲು ಅಂಡರ್-ವೆಹಿಕಲ್ ಕಣ್ಗಾವಲು ವ್ಯವಸ್ಥೆಗಳನ್ನು (UVSS) ಸಹ ನಿಯೋಜನೆಗೊಂಡಿತ್ತು. ಪೊಲೀಸ್, ಸಂಚಾರಿ ಪೊಲೀಸ್ ಸೇರಿದಂತೆ ಅಗತ್ಯ ಎಲ್ಲ ವಿಧದ ಗಸ್ತು ವಹಿಸಲಾಗಿತ್ತು. ಇದರ ನಡುವೆ ಪ್ರಧಾನಿ ಮೋದಿಯವರು ಧ್ವಜಾರೋಹಣ ನೆರವೇರಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications