ಗಂಗಾ ತಟದಲ್ಲಿ ಪೌರ ಕಾರ್ಮಿಕರ ಪಾದ ತೊಳೆದ ಪ್ರಧಾನಿ ಮೋದಿ
ಗಂಗಾ ತಟದಲ್ಲಿ ಪೌರ ಕಾರ್ಮಿಕರ ಪಾದ ತೊಳೆದ ಪ್ರಧಾನಿ ಮೋದಿ
Recommended Video

ಪ್ರಯಾಗರಾಜ್, ಫೆ 24: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಂಭಮೇಳದಲ್ಲಿ ಭಾಗವಹಿಸಿ ಗಂಗಾನದಿಗೆ ಗಂಗಾರತಿ ಮಾಡಿದ ಪ್ರಧಾನಿ ಮೋದಿ, ಪೌರ ಕಾರ್ಮಿಕರ ಪಾದತೊಳೆದದ್ದು ವಿಶೇಷವಾಗಿತ್ತು.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗೆ ಆಗಮಿಸಿದ ಮೋದಿ, ಗಂಗಾ ನದಿಯಲ್ಲಿ ಪುಣ್ಯಸ್ನಾನವನ್ನೂ ಮಾಡಿದರು. ಇದಾದ ನಂತರ ಸಂಗಂ ಘಾಟ್ ನಲ್ಲಿ ಗಂಗಾನದಿಗೆ ಪೂಜೆ ಸಲ್ಲಿಸಿದರು.
ಇದಾದ ನಂತರ ಓರ್ವ ಮಹಿಳೆಯೂ ಸೇರಿದಂತೆ ಪೌರ ಕಾರ್ಮಿಕರ ಪಾದವನ್ನು ಪ್ರಧಾನಿ ತೊಳೆದರು. ತನ್ನ ಪಾದವನ್ನು ತೊಳೆದ ಬಗ್ಗೆ ಮಹಿಳೆ ಪ್ರತಿಕ್ರಿಯಿಸಿ, ಇದು ಕನಸೋ ನನಸೋ ಎಂದು ಗೊತ್ತಾಗುತ್ತಿಲ್ಲ. ಮೋದಿ ಇನ್ನೊಂದು ಅವಧಿಗೂ ಪ್ರಧಾನಿಯಾಗಬೇಕೆಂದು ಆಶಿಸಿದರು.
ಕುಂಭಮೇಳದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿದ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ಈ ಮಹಾನ್ ಮೇಳವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರಿಗೂ ನನ್ನ ಹೃದಯದ ನಮಸ್ಕಾರಗಳು ಎಂದರು.

ಇಷ್ಟೊಂದು ಸ್ವಚ್ಚ ಗಂಗೆಯನ್ನು ನಾನು ನೋಡುತ್ತಿರುವುದು ಇದೇ ಮೊದಲು, ಇದೆಲ್ಲಾ ಸಾಧ್ಯವಾಗಿದ್ದು ಪೌರಕಾರ್ಮಿಕರಿಂದ. ನಿಮ್ಮ ಈ ಒಳ್ಲೆ ಕೆಲಸವನ್ನು ದೇಶದೆಲ್ಲಡೆ ಜನತೆಗೆ ವಿವರಿಸುತ್ತೇನೆ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಇದಕ್ಕೂ ಮೊದಲು 75 ಸಾವಿರ ಕೋಟಿಯ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಮೊದಲ ಹಂತದಲ್ಲಿ ಎರಡು ಸಾವಿರ ಕೋಟಿ ರೂಪಾಯಿಯನ್ನು ಗೋರಖಪುರ ಮತ್ತು ಪ್ರಯಾಗರಾಜ್ ನಲ್ಲಿ ರೈತರಿಗೆ ವಿತರಿಸಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications