Watch Video: ಪ್ರಧಾನಿ ಮೋದಿ ಮನೆಗೆ ಹೊಸ ಅತಿಥಿ ಆಗಮನ: ಅಪ್ಪಿ ಮುದ್ದಾಡಿದ ವಿಡಿಯೋ ಇಲ್ಲಿದೆ ನೋಡಿ
ದೆಹಲಿ, ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಹೊಸ ಅತಿಥಿ ಆಗಮಿಸಿದ್ದಾರೆ. ಅತಿಥಿ ಬೇರೆ ಯಾರೂ ಅಲ್ಲ. ಅದು ಕರು ಶನಿವಾರ (ಸೆಪ್ಟೆಂಬರ್ 14) ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಮಾಹಿತಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಮೂಲಕ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸಕ್ಕೆ ಹೊಸ ಸದಸ್ಯೆ ಬಂದಿದ್ದಾರೆ. ಈಕೆಯ ಹೆಸರು ದೀಪಜ್ಯೋತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಪ್ರಧಾನಿಯವರ ಮನೆಯ ಆವರಣದಲ್ಲಿರುವ ಹಸು ಕರು ಹಾಕಿದ್ದು, ಆ ಕರುವಿನ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಕರುವಿನ ಹಣೆ ಮೇಲೆ ವಿಶಿಷ್ಟವಾದ ಗುರುತು ಇದು, ಇದು ಬೆಳಕಿನ ಸಂಕೇತವನ್ನು ಹೋಲುತ್ತದೆ. ಈ ವಿಶಿಷ್ಟ ವೈಶಿಷ್ಟ್ಯವನ್ನು ಗುರುತಿಸಿ, ಪ್ರಧಾನಿ ಮೋದಿ ಅವರು ಕರುವಿಗೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದಾರೆ.
हमारे शास्त्रों में कहा गया है - गाव: सर्वसुख प्रदा:'।
— Narendra Modi (@narendramodi) September 14, 2024
लोक कल्याण मार्ग पर प्रधानमंत्री आवास परिवार में एक नए सदस्य का शुभ आगमन हुआ है।
प्रधानमंत्री आवास में प्रिय गौ माता ने एक नव वत्सा को जन्म दिया है, जिसके मस्तक पर ज्योति का चिह्न है।
इसलिए, मैंने इसका नाम 'दीपज्योति'… pic.twitter.com/NhAJ4DDq8K
ಪ್ರಧಾನಿ ಮೋದಿ ಅವರು ಹಂಚಿಕೊಂಡ 42 ಸೆಕೆಂಡುಗಳ ವೀಡಿಯೊದಲ್ಲಿ ತಮ್ಮ ಅಧಿಕೃತ ನಿವಾಸವನ್ನು ತಲುಪಿದ ಹೊಸ ಅತಿಥಿ ಆಟವಾಡುತ್ತಿರುವುದನ್ನು ಕಾಣಬಹುದು. ಪ್ರಧಾನಿ ನಿವಾಸದಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡಿದ್ದು, ಅದನ್ನು ಅಪ್ಪಿ ಪ್ರಧಾನಿ ಮೋದಿ ಮುದ್ದಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದೆ.
A new member at 7, Lok Kalyan Marg!
— Narendra Modi (@narendramodi) September 14, 2024
Deepjyoti is truly adorable. pic.twitter.com/vBqPYCbbw4
ಪ್ರಧಾನಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಪ್ರಧಾನಿ ಮೋದಿ ಅವರು ಕರುವನ್ನು ಪ್ರಾರ್ಥನೆ ಮಾಡಿ ಪ್ರೀತಿಯಿಂದ ಸ್ವಾಗತಿಸುತ್ತಿರುವುದನ್ನು ಕಾಣಬಹುದು. ಪ್ರಧಾನಿ ಮೋದಿ ಅವರು ಕರುವನ್ನು ಮುದ್ದಾಡುವುದು ಮತ್ತು ಆಟವಾಡುವುದು, ಅದರ ಹಣೆಯ ಮೇಲೆ ಮುತ್ತಿಟ್ಟು, ಶಾಲು ಹೊದಿಸಿ, ಹೂ ಮಾಲೆ ಹಾಕಿರುವುದನ್ನ ವಿಡಿಯೊದಲ್ಲಿ ಕಾಣಬಹುದು.
ಇದನ್ನು ನಮ್ಮ ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ ಗಾಂವ್: ಸರ್ವಸುಖ್ ಪ್ರದಾ' ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಿದೆ. ಪ್ರಧಾನ ಮಂತ್ರಿಯವರ ಮನೆಯಲ್ಲಿ, ಪ್ರೀತಿಯ ಗೋಮಾತೆ ಹೊಸ ವತ್ಸಕ್ಕೆ ಜನ್ಮ ನೀಡಿದ್ದಾಳೆ, ಅವಳ ಹಣೆಯ ಮೇಲೆ ಬೆಳಕಿನ ಚಿಹ್ನೆ ಇದೆ. ಆದ್ದರಿಂದ, ನಾನು ಅದಕ್ಕೆ 'ದೀಪಜ್ಯೋತಿ' ಎಂದು ಹೆಸರಿಸಿದೆ ಎಂದು ಪ್ರಧಾನಿ ಮೋದಿ ಟೀಟ್ ಮಾಡಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications