ಯೋಗ ಏಕತೆಯ ಶಕ್ತಿಯಾಗಿ ಹೊರ ಹೊಮ್ಮಿದೆ; ನರೇಂದ್ರ ಮೋದಿ
ನವದೆಹಲಿ, ಜೂನ್ 21 : "ಯೋಗ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಲಿದೆ. ಇದು ಏಕತೆಯ ಶಕ್ತಿಯಾಗಿ ಹೊರ ಹೊಮ್ಮಿದೆ ಮತ್ತು ಮಾನವೀಯ ಬಂಧಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾನುವಾರ 6ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಎಲ್ಲಾ ಜನರಿಗೆ ಯೋಗ ದಿನದ ಶುಭಾಶಯಗಳನ್ನು ಹೇಳಿದರು.
ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಈ ಬಾರಿ ದೇಶದಲ್ಲಿ ಎಲ್ಲಿಯೂ ಯೋಗಾಭ್ಯಾಸ ಮಾಡುವ ಸಾರ್ವಜನಿಕ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಹೆಚ್ಚು ಜನರು ಸೇರುವಂತಹ ಕಾರ್ಯಕ್ರಮ ನಡೆಸುವುದಕ್ಕೆ ನಿಷೇಧವಿದೆ.
"ಕೊರೊನಾ ವೈರಸ್ ಸೋಂಕು ನಮ್ಮ ಉಸಿರಾಟದ ಮೇಲೆ ದಾಳಿ ಮಾಡುತ್ತದೆ. ಪ್ರಾಣಾಯಾಮದಿಂದಾಗಿ ನಾವು ಉತ್ತಮ ಉಸಿರಾಟದ ವ್ಯವಸ್ಥೆಯನ್ನು ನಾವು ಪಡೆಯಬಹುದು" ಎಂದು ನರೇಂದ್ರ ಮೋದಿ ಹೇಳಿದರು.
"ಯೋಗ ದಿನವು ಏಕತೆಯನ್ನು ಆಚರಿಸುವ ದಿನವಾಗಿದೆ. ಇದು ಸಾರ್ವತ್ರಿಕ ಭಾತೃತ್ವ ಸಂದೇಶ ಸಾರುವ ದಿನ. ಯೋಗ ಜನಾಂಗ, ಬಣ್ಣ, ಲಿಂಗ, ನಂಬಿಕೆ ಮತ್ತು ದೇಶಗಳನ್ನು ಮೀರಿದ್ದು, ಇದು ಯಾವುದೇ ತಾರತಮ್ಯ ಮಾಡುವುದಿಲ್ಲ" ಎಂದು ಮೋದಿ ಬಣ್ಣಿಸಿದರು.

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ
"ಯಾರೂ ಬೇಕಾದರೂ ಯೋಗಾಭ್ಯಾಸ ಮಾಡಬಹುದು. ನಿತ್ಯ ಪ್ರಾಣಾಯಾಮ, ಯೋಗ ಮಾಡುವ ಮೂಲಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು" ಎಂದು ನರೇಂದ್ರ ಮೋದಿ ತಿಳಿಸಿದರು.

ದೈಹಿಕ ಶಕ್ತಿ, ಒತ್ತಡವಿಲ್ಲದ ಮನಸ್ಸು
"ಪ್ರಪಂಚದಾದ್ಯಂತ ಹಲವಾರು ಕೊರೊನಾ ವೈರಸ್ ಸೋಂಕಿನ ರೋಗಿಗಳು ಯೋಗದಿಂದ ಪ್ರಯೋಜನ ಪಡೆದುಕೊಂಡಿದ್ದಾರೆ. ಕಷ್ಟದ ಸನ್ನಿವೇಶದಲ್ಲಿ ಹೋರಾಡಲು ಯೋಗ ಭರವಸೆ ನೀಡುತ್ತದೆ. ಯೋಗ ನಮಗೆ ದೈಹಿಕ ಶಕ್ತಿಯನ್ನು ನೀಡುತ್ತದೆ, ಒತ್ತಡವಿಲ್ಲದೇ ಮನಸ್ಸು ಶಾಂತವಾಗಿರಲು ಸಹಾಯ ಮಾಡುತ್ತದೆ" ಎಂದು ಮೋದಿ ಹೇಳಿದರು.

ಯೋಗ ಡಿಜಿಟಲ್ ಆಗಿದೆ
"2015ರ ಜೂನ್ 21ರ ಬಳಿಕ ಮೊದಲ ಬಾರಿಗೆ ಅಂತರರಾಷ್ಟ್ರೀಯ ಯೋಗ ದಿನ ಸಂಪೂರ್ಣ ಡಿಜಿಟಲ್ ಆಗಿದೆ. ಮನೆಯಲ್ಲೇ ಯೋಗ, ಕುಟುಂಬದೊಂದಿಗೆ ಯೋಗ ಎಂಬುದು ಈ ವರ್ಷದ ಘೋಷಣೆಯಾಗಿದೆ" ಎಂದು ನರೇಂದ್ರ ಮೋದಿ ಹೇಳಿದರು.
|
ಮೋದಿ ಭಾಷಣದ ವಿಡಿಯೋ
ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ ವಿಡಿಯೋ ಇಲ್ಲಿದೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications