ಯೋಗ ಏಕತೆಯ ಶಕ್ತಿಯಾಗಿ ಹೊರ ಹೊಮ್ಮಿದೆ; ನರೇಂದ್ರ ಮೋದಿ
ನವದೆಹಲಿ, ಜೂನ್ 21 : "ಯೋಗ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಲಿದೆ. ಇದು ಏಕತೆಯ ಶಕ್ತಿಯಾಗಿ ಹೊರ ಹೊಮ್ಮಿದೆ ಮತ್ತು ಮಾನವೀಯ ಬಂಧಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾನುವಾರ 6ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಎಲ್ಲಾ ಜನರಿಗೆ ಯೋಗ ದಿನದ ಶುಭಾಶಯಗಳನ್ನು ಹೇಳಿದರು.
ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಈ ಬಾರಿ ದೇಶದಲ್ಲಿ ಎಲ್ಲಿಯೂ ಯೋಗಾಭ್ಯಾಸ ಮಾಡುವ ಸಾರ್ವಜನಿಕ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಹೆಚ್ಚು ಜನರು ಸೇರುವಂತಹ ಕಾರ್ಯಕ್ರಮ ನಡೆಸುವುದಕ್ಕೆ ನಿಷೇಧವಿದೆ.
"ಕೊರೊನಾ ವೈರಸ್ ಸೋಂಕು ನಮ್ಮ ಉಸಿರಾಟದ ಮೇಲೆ ದಾಳಿ ಮಾಡುತ್ತದೆ. ಪ್ರಾಣಾಯಾಮದಿಂದಾಗಿ ನಾವು ಉತ್ತಮ ಉಸಿರಾಟದ ವ್ಯವಸ್ಥೆಯನ್ನು ನಾವು ಪಡೆಯಬಹುದು" ಎಂದು ನರೇಂದ್ರ ಮೋದಿ ಹೇಳಿದರು.
"ಯೋಗ ದಿನವು ಏಕತೆಯನ್ನು ಆಚರಿಸುವ ದಿನವಾಗಿದೆ. ಇದು ಸಾರ್ವತ್ರಿಕ ಭಾತೃತ್ವ ಸಂದೇಶ ಸಾರುವ ದಿನ. ಯೋಗ ಜನಾಂಗ, ಬಣ್ಣ, ಲಿಂಗ, ನಂಬಿಕೆ ಮತ್ತು ದೇಶಗಳನ್ನು ಮೀರಿದ್ದು, ಇದು ಯಾವುದೇ ತಾರತಮ್ಯ ಮಾಡುವುದಿಲ್ಲ" ಎಂದು ಮೋದಿ ಬಣ್ಣಿಸಿದರು.

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ
"ಯಾರೂ ಬೇಕಾದರೂ ಯೋಗಾಭ್ಯಾಸ ಮಾಡಬಹುದು. ನಿತ್ಯ ಪ್ರಾಣಾಯಾಮ, ಯೋಗ ಮಾಡುವ ಮೂಲಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು" ಎಂದು ನರೇಂದ್ರ ಮೋದಿ ತಿಳಿಸಿದರು.

ದೈಹಿಕ ಶಕ್ತಿ, ಒತ್ತಡವಿಲ್ಲದ ಮನಸ್ಸು
"ಪ್ರಪಂಚದಾದ್ಯಂತ ಹಲವಾರು ಕೊರೊನಾ ವೈರಸ್ ಸೋಂಕಿನ ರೋಗಿಗಳು ಯೋಗದಿಂದ ಪ್ರಯೋಜನ ಪಡೆದುಕೊಂಡಿದ್ದಾರೆ. ಕಷ್ಟದ ಸನ್ನಿವೇಶದಲ್ಲಿ ಹೋರಾಡಲು ಯೋಗ ಭರವಸೆ ನೀಡುತ್ತದೆ. ಯೋಗ ನಮಗೆ ದೈಹಿಕ ಶಕ್ತಿಯನ್ನು ನೀಡುತ್ತದೆ, ಒತ್ತಡವಿಲ್ಲದೇ ಮನಸ್ಸು ಶಾಂತವಾಗಿರಲು ಸಹಾಯ ಮಾಡುತ್ತದೆ" ಎಂದು ಮೋದಿ ಹೇಳಿದರು.

ಯೋಗ ಡಿಜಿಟಲ್ ಆಗಿದೆ
"2015ರ ಜೂನ್ 21ರ ಬಳಿಕ ಮೊದಲ ಬಾರಿಗೆ ಅಂತರರಾಷ್ಟ್ರೀಯ ಯೋಗ ದಿನ ಸಂಪೂರ್ಣ ಡಿಜಿಟಲ್ ಆಗಿದೆ. ಮನೆಯಲ್ಲೇ ಯೋಗ, ಕುಟುಂಬದೊಂದಿಗೆ ಯೋಗ ಎಂಬುದು ಈ ವರ್ಷದ ಘೋಷಣೆಯಾಗಿದೆ" ಎಂದು ನರೇಂದ್ರ ಮೋದಿ ಹೇಳಿದರು.
|
ಮೋದಿ ಭಾಷಣದ ವಿಡಿಯೋ
ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ ವಿಡಿಯೋ ಇಲ್ಲಿದೆ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications