ಮೋದಿ ಹತ್ಯೆಗೆ ಸಂಚು, ದುಷ್ಟರ ವಿರುದ್ಧ ಸಿಡಿದೆದ್ದ ಟ್ವಿಟ್ಟಿಗರು!
Recommended Video

ಪುಣೆ, ಜೂನ್ 08: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿತ್ತಾ? ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದ ರೀತಿಯಲ್ಲಿಯೇ ಮೋದಿಯವರನ್ನೂ ಹತ್ಯೆಗೈಯಲು ಮಾವೋವಾದಿಗಳು ಸಂಚು ರೂಪಿಸಿದ್ದರು ಎಂಬುದು ಪತ್ರವೊಂದರಿಂದ ತಿಳಿದುಬಂದಿದೆ.
ಪುಣೆ ಪೊಲೀಸರು ವಶಪಡಿಸಿಕೊಂಡ ಪತ್ರವೊಂದರಿಂದ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು, ಮಾವೋ ಮುಖಂಡ ಕಿಶನ್ ಈ ಪತ್ರ ಬರೆದಿದ್ದಾನೆ ಎಂದು ಶಂಕಿಸಲಾಗಿದೆ. ದೇಶದಾದ್ಯಂತ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದು ಮಾವೋವಾದಿಗಳ ಆತಂಕಕ್ಕೆ ಕಾರಣವಾಗಿದ್ದು, ಇದು ಹೀಗೆಯೇ ಮುಂದುವರಿದರೆ ಮಾವೋವಾದಿಗಳು ಅಸ್ತಿತ್ವ ಕಳೆದುಕೊಳ್ಳುವ ಭಯ ಹೊಂದಿರುವುದರಿಂದ ಮೋದಿ ಹತ್ಯೆಗೆ ಸಂಚು ರೂಪಿಸಲು ಹೊರಟಿದ್ದರು ಎನ್ನಲಾಗಿದೆ.
ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಈ ವದಂತಿಯನ್ನು ಗಂಭಿರವಾಗಿ ಪರಿಗಣಿಸುವಂತೆ ಹಲವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಮೋದಿ ಅಲೆಯನ್ನು ನಿಲ್ಲಿಸಲು ಮಾವೋವಾದಿಗಳಿಗೆ ಇದಕ್ಕಿಂತ ಬೇರೆ ದಾರಿ ಇಲ್ಲದಿರುವುದರಿಂದ ಅವರು ಹೀಗೆ ಯೋಚಿಸಿದ್ದರೆ ಅಚ್ಚರಿಯೇನಿಲ್ಲ ಎಂದು ಟ್ವಿಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ!
| Array |
ಮಾವೋವಾದಿಗಳಿಗೆ ಬೇರೆ ದಾರಿ ಇಲ್ಲ!
ಮೋದಿ ಅಲೆಯನ್ನು ನಿಯಂತ್ರಿಸಲು ಅರ್ಬನ್ ನಕ್ಸಲರಿಗೆ ಬೇರೆ ದಾರಿ ಇಲ್ಲ. ಆದ್ದರಿಂದಲೇ ಅವರನ್ನು ಕೊಲ್ಲುವ ಉಪಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಮಾಹಿಕಾ.
| Array |
ಕಾನೂನು ಮೂಲಕ ಬಗೆಹರಿಸಿ!
ಈ ವಿಷಯ ಈಗ ಅಪ್ರಸ್ತುತ ಮತ್ತು ಮೂರ್ಖತನದ್ದು. ಇದು ಸಾರ್ವಜನಿಕ ಚರ್ಚೆಯ ವಿಷಯವಲ್ಲ. ಕಾನೂನಿನ ಮೂಲಕ ತನಿಖೆಯಾಗಿ ಬಗೆಹರಿಯಲಿ. ಇಂಥ ಘಟನೆಗಳು, ಸಂಚು ನಡೆಯದಂತೆ ಎಚ್ಚರಿಕೆ ವಹಿಸಲಿ ಎಂದಿದ್ದಾರೆ ಮಂಗಲ್ ಸೈನ್ ಹಂಡಾ.
|
ಮೋದಿ ಎಂದರೆ ಕೇವಲ ವ್ಯಕ್ತಿಯಲ್ಲ!
ಮೋದಿ ಹತ್ಯೆಗೆ ಸಂಚು ರೂಪಿಸಿದ್ದವರಿಗೆ ತಿಳಿದಿರಲಿ. ಪ್ರಧಾನಿ ನರೇಂದ್ರ ಮೋದಿ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಅವರು ಒಂದು ವಿಚಾರ, ಒಂದು ಚಳವಳಿ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವರೊಬ್ಬ ಧೃವತಾರೆ. ಅವರನ್ನು ಹತ್ಯೆಗೈಯಲು ಪ್ರಯತ್ನಿಸುವುದು ಮೂರ್ಖತನ. ಇಂಥ ಯತ್ನಗಳು ಮಾವೋವಾದಿಗಳಿಗೇ ತಿರುಗುಬಾಣವಾಗುತ್ತದೆ ಎಂದಿದ್ದಾರೆ ರಾಜಶ್ರೀ ಮಹ್ತಿನಿ.
|
ಮೋದಿಯರು ಮಾತ್ರ ಭಾರತಕ್ಕೆ ಆಶಾಕಿರಣ
ಮೋದಿ ಹತ್ಯೆಯ ಸಂಚಿನ ಸುದ್ದಿ ತಿಳಿದು ಆಘಾತವಾಯಿತು. ಅವರಿಗೆ ಅತ್ಯುತ್ಕೃಷ್ಟ ಭದ್ರತೆ ನೀಡಬೇಕು. ಅವರ ಹತ್ಯೆಯಾಗಬಾರದು ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಭಾರತಕ್ಕಿರುವ ಭರವಸೆ ಎಂದರೆ ಪ್ರಧಾನಿ ಮೋದಿಯವರೊಂದೇ ಎಂದಿದ್ದಾರೆ ಆಯುಶ್ ವೋರಾ.
| Array |
ಭಾರತದಲ್ಲಿ ಮಾತ್ರ ಹೀಗೆ!
ಅಧಿಕಾರದಲ್ಲಿರುವ ಒಬ್ಬ ಪ್ರಧಾನ ಮಂತ್ರಿಯ ಹತ್ಯೆಗೆ ಸಂಚು ರೂಪಿಸಲಾಗುತ್ತದೆ. ಆದರೂ ಅದು ದೊಡ್ಡ ಸುದ್ದಿಯಾಗುವುದಿಲ್ಲ ಎಂದರೆ ಅದು ಭಾರತದಲ್ಲಿ ಮಾತ್ರ! ಬಿಜೆಪಿಯ ಮಾಧ್ಯಮ ವಿಭಾಗ ಮತ್ತಷ್ಟು ಬಲಯುತವಾಗಬೇಕು ಎಂಬುದಕ್ಕೆ ಇದು ಒಂದು ಉದಾಹರಣೆ ಎಂದಿದ್ದಾರೆ ಆರ್ ರವಿ.
|
ನಕ್ಸಲರು ಮತ್ತು ಭಯೋತ್ಪಾದಕರಿಗೆ ಮೋದಿ ಅಂದ್ರೆ ಉರಿ!
ನಕ್ಸಲರು ಮತ್ತು ಭಯೋತ್ಪಾದಕರು ಮೋದಿಯವರನ್ನು ಕೊಲ್ಲಲು ಸಂಚು ರೂಪಿಸಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ಮೋದಿ ಸರ್ಕಾರದ ಕ್ರಮಗಳಿಂದ ಅತೀ ಹೆಚ್ಚು ನಷ್ಟವಾಗುತ್ತಿರುವುದು ಅವರಿಬ್ಬರಿಗೇ. ಅವರು ಉಳಿವಿಗಾಗಿ ಈ ಹೋರಾಟ ನಡೆಸುತ್ತಿದ್ದಾರೆ ಎಂದಿದ್ದಾರೆ ಪ್ರಕಾಶ್.
|
ಕಾಂಗ್ರೆಸ್ಸಿಗರಿಗೆ ಅಭಿನಂದನೆ!
ಪ್ರಧಾನಿ ಮೋದಿಯವರನ್ನು ಮುಗಿಸುವ ತಮ್ಮ ಸ್ನೇಹಿತರ ಪ್ರಯತ್ನ ಪ್ರಗತಿಯಲ್ಲಿರುವುದಕ್ಕಾಗಿ ಕಾಂಗ್ರೆಸ್ಸಿಗೆ ಅಭಿನಂದನೆಗಳು! ಎಡಪಕ್ಷಗಳ ಜೊತೆ ಕಾಂಗ್ರೆಸ್ ಏಕೆ ಮೈತ್ರಿ ಮಾಡಿಕೊಳ್ಳಲು ಬಯಸುತ್ತಿದೆ ಎಂಬುದು ನಮಗೆ ಈಗ ಅರ್ಥವಾಯಿತು ಎಂದಿದ್ದಾರೆ ರವಿ.
|
ಇದು ಅಕ್ಷಮ್ಯ ಅಪರಾಧ!
ನಮ್ಮ ಪ್ರಧಾನಿಯನ್ನು ಕೊಲ್ಲಲು ಸಂಚೆ? ಸಂಚಿನ ರೂವಾರಿಗಳೊಬ್ಬರೂ ಶಿಕ್ಷೆಯಿಂದ ಪಾರಾಗಬಾರದು. ಈ ನಡೆ ಅಕ್ಷಮ್ಯ ಎಂದಿದ್ದಾರೆ ಅಭಿನವ್ ಸತುರ್ವೇದಿ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications