ಮೋದಿ ನಾಯಕತ್ವದಲ್ಲಿ ಕಾಶ್ಮೀರಿಗಳ ಮನ ಗೆಲ್ಲಲು ಸಾಧ್ಯ: ಮೆಹಬೂಬಾ ಮುಫ್ತಿ
ಜಮ್ಮು, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಾಶ್ಮೀರಿಗಳ ವಿಶ್ವಾಸ ಗೆಲ್ಲುವುದು ಸಾಧ್ಯ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶವು ಜಮ್ಮು ಮತ್ತು ಕಾಶ್ಮೀರದ ಜನತೆಯ ನಂಬಿಕೆ, ಹೃದಯ ಮತ್ತು ಮನಸ್ಸನ್ನು ಗೆಲ್ಲುವುದು ಸಾಧ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಭಾರತೀಯ ಜನತಾ ಪಕ್ಷದ 38ನೇ ಸಂಸ್ಥಾಪನಾ ದಿನದ ಪ್ರಯುಕ್ತ ಅವರು ಬಿಜೆಪಿಗೆ ಶುಭ ಕೋರಿದ್ದಾರೆ.

ಸಂಸ್ಥಾಪನಾ ದಿನವನ್ನು ಆಚರಿಸುತ್ತಿರುವ ಬಿಜೆಪಿಗೆ ಅಭಿನಂದನೆಗಳು ಎಂದು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿರುವ ಸರ್ಕಾರ ಅಸ್ತಿತ್ವಕ್ಕೆ ಬಂದು ಫೆಬ್ರುವರಿಗೆ 3 ವರ್ಷ ಕಳೆದಿದೆ.
ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಎರಡೂ ಪಕ್ಷಗಳು ಸಂಬಂಧ ಕಡಿದುಕೊಳ್ಳಲಿವೆ. ಇದರಿಂದ ಸರ್ಕಾರ ಪತನವಾಗಲಿದೆ ಎಂಬ ಅಭಿಪ್ರಾಯಗಳು ಕಳೆದ ವರ್ಷ ಕೇಳಿಬಂದಿದ್ದವು. ಆದರೆ, ಬಿಜೆಪಿ ನಾಯಕರು ಮತ್ತು ಪಿಡಿಪಿ ನಾಯಕರು ನಡೆಸಿದ ಸಂಧಾನ ಮಾತುಕತೆ ಯಶಸ್ವಿಯಾಗಿತ್ತು.












Click it and Unblock the Notifications