ಕರ್ನಾಟಕಕ್ಕೆ ಸಂಕ್ರಾಂತಿ ಶುಭ ಕೋರಿದ ಪ್ರಧಾನಿ ಮೋದಿ ಟ್ವೀಟ್
ನವದೆಹಲಿ, ಜ.15: ಪ್ರಧಾನಿ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿ, ಉತ್ತರಾಯಣ, ಪೊಂಗಲ್, ಭೋಗಿ ಹಾಗೂ ಮಾಘ್ ಬಿಹು ಹಬ್ಬ ಆಚರಿಸುವ ಜನತೆಗೆ ಪ್ರತ್ಯೇಕವಾಗಿ ಟ್ವೀಟ್ ಮಾಡಿ ಶುಭ ಕೋರಿದ್ದರು. ಅದರೆ, ಕನ್ನಡ ಭಾಷೆಯಲ್ಲಿ ಟ್ವೀಟ್ ಮಾಡಿಲ್ಲವೆಂಬ ಕೊರಗಿತ್ತು. ಅದರೆ, ಗುರುವಾರ ಪ್ರಧಾನಿ ಅವರು ಕನ್ನಡ ಭಾಷೆಯಲ್ಲೇ ಟ್ವೀಟ್ ಮಾಡಿ ಕನ್ನಡಿಗರ ಹರ್ಷ ಹೆಚ್ಚಿಸಿದ್ದಾರೆ.
ಕರ್ನಾಟಕದ ಸೋದರ, ಸೋದರಿಯರಿಗೆ ಈ ಹಬ್ಬ ಇನ್ನಷ್ಟು ಸಂತಸ ತರಲಿ ಎಂದು ಮೋದಿ ಗುರುವಾರ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಬುಧವಾರ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಜನತೆಗೆ ಅವರವರ ಭಾಷೆಯಲ್ಲೇ ಶುಭಕೋರಿದ್ದರು. ಆದರೆ, ಕನ್ನಡಿಗರಿಗೆ ಮಾತ್ರ ಸಂಕ್ರಾಂತಿ ಶುಭಾಶಯ ಹೇಳದೆ ಅಪಮಾನ ಮಾಡಿದ್ದಾರೆ ಎಂಬ ಕೊಗು ಕೇಳಿಬಂದಿತ್ತು. [ಹಬ್ಬದ ಸಂಭ್ರಮ ಹೆಚ್ಚಿಸಿದ ಪ್ರಧಾನಿ ಮೋದಿ ಟ್ವೀಟ್ಸ್]

ಆದರೆ, ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಸಚಿವಾಲಯ, ಕರ್ನಾಟಕದ ಮೇಲೂ ಅವರಿಗೆ ವಿಶೇಷ ಪ್ರೀತಿ ಇದೆ. ಸಂಪರ್ಕ ಕೊರತೆಯಿಂದ ಇಂತಹ ಅಚಾತುರ್ಯ ಉಂಟಾಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬಾರದು ಎಂದು ಪ್ರಧಾನಿ ಸಚಿವಾಲಯದ ಅಧಿಕಾರಿಗಳು ಮನವಿ ಮಾಡಿದ್ದಾರೆ.
ನನ್ನ ಸಹೋದರ ಸಹೋದರಿಯರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ನಿಮಗೆ, ನಿಮ್ಮ ಪರಿವಾರಕ್ಕೆ ಅಪಾರ ಸಂತೋಷ, ಸಮೃದ್ಧಿ ದೊರೆಯಲೆಂದು ಹಾರೈಸುತ್ತೇನೆ.
— Narendra Modi (@narendramodi) January 15, 2015 ಪ್ರಧಾನಿ ಕಾರ್ಯಾಲಯದ ವೆಬ್ಸೈಟ್ನಲ್ಲಿ ದೇಶದ ಎಲ್ಲಾ ರಾಜ್ಯಗಳ ಭಾಷೆಗಳಲ್ಲಿ ಶುಭಕೋರಿರುವುದು ಪ್ರಕಟವಾಗಿತ್ತು. ಹಿಂದಿ, ಇಂಗ್ಲಿಷ್, ಗುಜರಾತಿ, ಮಲೆಯಾಳಿ, ಕೊಂಕಣಿ, ಮರಾಠಿ, ತೆಲುಗು, ತಮಿಳು, ಅಸ್ಸಾಂ, ಬೆಂಗಾಲಿ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಶುಭ ಹಾರೈಸಿದ್ದರು.
Sankranti greetings to my sisters & brothers of Karnataka. May this auspicious day bring abundant happiness & prosperity in everyone's lives
— Narendra Modi (@narendramodi) January 15, 2015 -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications