ಕರ್ನಾಟಕಕ್ಕೆ ಸಂಕ್ರಾಂತಿ ಶುಭ ಕೋರಿದ ಪ್ರಧಾನಿ ಮೋದಿ ಟ್ವೀಟ್
ನವದೆಹಲಿ, ಜ.15: ಪ್ರಧಾನಿ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿ, ಉತ್ತರಾಯಣ, ಪೊಂಗಲ್, ಭೋಗಿ ಹಾಗೂ ಮಾಘ್ ಬಿಹು ಹಬ್ಬ ಆಚರಿಸುವ ಜನತೆಗೆ ಪ್ರತ್ಯೇಕವಾಗಿ ಟ್ವೀಟ್ ಮಾಡಿ ಶುಭ ಕೋರಿದ್ದರು. ಅದರೆ, ಕನ್ನಡ ಭಾಷೆಯಲ್ಲಿ ಟ್ವೀಟ್ ಮಾಡಿಲ್ಲವೆಂಬ ಕೊರಗಿತ್ತು. ಅದರೆ, ಗುರುವಾರ ಪ್ರಧಾನಿ ಅವರು ಕನ್ನಡ ಭಾಷೆಯಲ್ಲೇ ಟ್ವೀಟ್ ಮಾಡಿ ಕನ್ನಡಿಗರ ಹರ್ಷ ಹೆಚ್ಚಿಸಿದ್ದಾರೆ.
ಕರ್ನಾಟಕದ ಸೋದರ, ಸೋದರಿಯರಿಗೆ ಈ ಹಬ್ಬ ಇನ್ನಷ್ಟು ಸಂತಸ ತರಲಿ ಎಂದು ಮೋದಿ ಗುರುವಾರ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಬುಧವಾರ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಜನತೆಗೆ ಅವರವರ ಭಾಷೆಯಲ್ಲೇ ಶುಭಕೋರಿದ್ದರು. ಆದರೆ, ಕನ್ನಡಿಗರಿಗೆ ಮಾತ್ರ ಸಂಕ್ರಾಂತಿ ಶುಭಾಶಯ ಹೇಳದೆ ಅಪಮಾನ ಮಾಡಿದ್ದಾರೆ ಎಂಬ ಕೊಗು ಕೇಳಿಬಂದಿತ್ತು. [ಹಬ್ಬದ ಸಂಭ್ರಮ ಹೆಚ್ಚಿಸಿದ ಪ್ರಧಾನಿ ಮೋದಿ ಟ್ವೀಟ್ಸ್]

ಆದರೆ, ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಸಚಿವಾಲಯ, ಕರ್ನಾಟಕದ ಮೇಲೂ ಅವರಿಗೆ ವಿಶೇಷ ಪ್ರೀತಿ ಇದೆ. ಸಂಪರ್ಕ ಕೊರತೆಯಿಂದ ಇಂತಹ ಅಚಾತುರ್ಯ ಉಂಟಾಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬಾರದು ಎಂದು ಪ್ರಧಾನಿ ಸಚಿವಾಲಯದ ಅಧಿಕಾರಿಗಳು ಮನವಿ ಮಾಡಿದ್ದಾರೆ.
ನನ್ನ ಸಹೋದರ ಸಹೋದರಿಯರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ನಿಮಗೆ, ನಿಮ್ಮ ಪರಿವಾರಕ್ಕೆ ಅಪಾರ ಸಂತೋಷ, ಸಮೃದ್ಧಿ ದೊರೆಯಲೆಂದು ಹಾರೈಸುತ್ತೇನೆ.
— Narendra Modi (@narendramodi) January 15, 2015 ಪ್ರಧಾನಿ ಕಾರ್ಯಾಲಯದ ವೆಬ್ಸೈಟ್ನಲ್ಲಿ ದೇಶದ ಎಲ್ಲಾ ರಾಜ್ಯಗಳ ಭಾಷೆಗಳಲ್ಲಿ ಶುಭಕೋರಿರುವುದು ಪ್ರಕಟವಾಗಿತ್ತು. ಹಿಂದಿ, ಇಂಗ್ಲಿಷ್, ಗುಜರಾತಿ, ಮಲೆಯಾಳಿ, ಕೊಂಕಣಿ, ಮರಾಠಿ, ತೆಲುಗು, ತಮಿಳು, ಅಸ್ಸಾಂ, ಬೆಂಗಾಲಿ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಶುಭ ಹಾರೈಸಿದ್ದರು.
Sankranti greetings to my sisters & brothers of Karnataka. May this auspicious day bring abundant happiness & prosperity in everyone's lives
— Narendra Modi (@narendramodi) January 15, 2015 -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications