ಕೋರ್ಟ್ಗಳಲ್ಲಿ ಸ್ಥಳೀಯ ಭಾಷೆ ಬಳಕೆಗೆ ಪ್ರಧಾನಿ ಮೋದಿ ಕರೆ
ನವದೆಹಲಿ, ಏ. 30: ಶಾಸಕಾಂಗ ಮತ್ತು ನ್ಯಾಯಾಂಗದ ಧ್ಯೇಯೋದ್ದೇಶಗಳ ಸಮಾಗಮವಾದರೆ ದೇಶದಲ್ಲಿ ನ್ಯಾಯ ನೀಡಿಕೆ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಲು ನೆರವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು ಶನಿವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೋರ್ಟ್ಗಳಲ್ಲಿ ಸ್ಥಳೀಯ ಭಾಷೆ ಬಳಕೆ ಮಾಡುವಂತೆ ನ್ಯಾಯಾಂಗಕ್ಕೆ ಮನವಿ ಮಾಡಿದರು.
"ಕೋರ್ಟ್ಗಳಲ್ಲಿ ಸ್ಥಳೀಯ ಭಾಷೆ ಬಳಕೆಗೆ ಉತ್ತೇಜನ ನೀಡುವುದು ಅಗತ್ಯ ಇದೆ. ಇದರಿಂದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಸಾಮಾನ್ಯ ನಾಗರಿಕರಿಗೆ ವಿಶ್ವಾಸ ಹೆಚ್ಚುತ್ತದೆ" ಎಂದು ಅವರು ಅಭಿಪ್ರಾಯಪಟ್ಟರು.
ಹಾಗೆಯೇ, ನ್ಯಾಯಾಂಗ ಮತ್ತು ಶಾಸಕಾಂಗದ ಪಾತ್ರದ ಬಗ್ಗೆ ಮಾತನಾಡಿದ ಅವರು, ನ್ಯಾಯಾಂಗವು ಸಂವಿಧಾನದ ರಕ್ಷಕವಾದರೆ, ಶಾಸಕಾಂಗವು ಜನರ ಆಶೋತ್ತರಗಳನ್ನ ಪ್ರತಿನಿಧಿಸುವ ಜವಾಬ್ದಾರಿ ಹೊಂದಿದೆ ಎಂದು ಹೇಳಿದರು.

"ನಮ್ಮ ದೇಶದಲ್ಲಿ ನ್ಯಾಯಾಂಗದ ಪಾತ್ರವು ಸಂವಿಧಾನದ ರಕ್ಷಕ ಸ್ಥಾನದ್ದಾಗಿದೆ. ಶಾಸಕಾಂಗವು ಜನರ ಆಶೋತ್ತರಗಳನ್ನ ಪ್ರತಿನಿಧಿಸುತ್ತದೆ. ಈ ಎರಡು ಅಂಗಗಳು ಸಮಾಗಮಗೊಂಡರೆ ನಿಗದಿತ ಸಮಯದೊಳಗೆ ಪರಿಣಾಮಕಾರಿಯಾದ ನ್ಯಾಯ ನೀಡಿಕೆ ವ್ಯವಸ್ಥೆಗೆ ಎಡೆ ಮಾಡಿಕೊಡಲು ಸಹಾಯವಾಗುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.
ಇದೇ ವೇಳೆ ನ್ಯಾಯಾಂಗ ಮತ್ತು ಕಾರ್ಯಾಂಗ ನಡುವಿನ ಸಂಬಂಧದ ಬಗ್ಗೆಯೂ ಮಾತನಾಡಿದ ಪ್ರಧಾನಿ, 75 ವರ್ಷಗಳ ಸ್ವಾತಂತ್ರ್ಯದ ಅನುಭವವು ನ್ಯಾಯಾಂಗ ಮತ್ತು ಕಾರ್ಯಾಂಗದ ಪಾತ್ರ ಮತ್ತು ಜವಾಬ್ದಾರಿಗಳನ್ನ ಸ್ಪಷ್ಟಗೊಳಿಸಿದೆ. ಈ ಎರಡು ಅಂಗಳ ನಡುವಿನ ಸಂಬಂಧವು ದೇಶಕ್ಕೆ ದಿಗ್ದರ್ಶನನ ಕೊಡುವ ಮಟ್ಟಕ್ಕೆ ಬೆಳೆದಿವೆ ಎಂದರು.
ಹಾಗೆಯೇ, ನಾಗರಿಕರ ಅನುಕೂಲದ ದೃಷ್ಟಿಯಿಂದ ನ್ಯಾಯಾಂಗ ವ್ಯವಸ್ಥೆಯಲ್ಲೂ ಡಿಜಿಟಲೀಕರಣದ ಅಗತ್ಯತೆ ಇದೆ ಎಂದರು. "ತಂತ್ರಜ್ಞಾನವು ನಾಗರಿಕರನ್ನ ಬಲಪಡಿಸುವ ಒಂದು ಪ್ರಮುಖ ಸಾಧನವಾಗಿದೆ. ಅದೇ ರೀತಿ ನಮ್ಮ ನ್ಯಾಯಾಂಗ ಸೌಕರ್ಯ ವ್ಯವಸ್ಥೆ ಕೂಡ ಡಿಜಿಟಲ್ ಆಗಬೇಕು. ತಂತ್ರಜ್ಞಾನ ಸ್ನೇಹಿ ಮಾನವ ಸಂಪನ್ಮೂಲವು ಡಿಜಿಟಲ್ ಇಂಡಿಯಾ ಮೂಲಕ ದೇಶದ ಪ್ರಗತಿಗೆ ನೆರವಾಗುತ್ತಿದೆ. ಬ್ಲಾಕ್ಚೈನ್, ಸೈಬರ್ ಸೆಕ್ಯೂರಿಟಿ, ರೋಬೋಟಿಕ್ಸ್, ಕೃತಕ ಬುದ್ಧಮತ್ತೆ (AI - Artificial Intelligence) ಇತ್ಯಾದಿ ತಾಂತ್ರಿಕ ವಿಚಾರಗಳನ್ನ ಕಾಲೇಜುಗಳಲ್ಲಿ ಕಲಿಸಲಾಗುತ್ತಿದೆ" ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಪ್ರಧಾನಿ ಮೋದಿ ಹೇಳಿದರು.
ಭಾರತದಲ್ಲಿ ಶೇ. 40 ಡಿಜಿಟಲ್ ವಹಿವಾಟು:
ಡಿಜಿಟಲೀಕರಣದ ಮಹತ್ವದ ಬಗ್ಗೆ ಮಾತನಾಡಿದ ಅವರು, ದೇಶದ ಸಣ್ಣಪುಟ್ಟ ಪಟ್ಟಣಗಳು ಮತ್ತು ಗ್ರಾಮಗಳಲ್ಲೂ ಈಗ ಆನ್ಲೈನ್ ಮೂಲಕ ಹಣದ ಪಾವತಿ ಕಾರ್ಯವಾಗುತ್ತಿದೆ ಎಂದರು.
"ಇಂದು ಡಿಜಿಟಲ್ ವಹಿವಾಟುಗಳು ಸಣ್ಣ ಪಟ್ಟಣ ಮತ್ತು ಗ್ರಾಮಗಳಲ್ಲೂ ಸಾಮಾನ್ಯವಾಗಿ ಹೋಗಿದೆ. ಕಳೆದ ವರ್ಷ ಇಡೀ ವಿಶ್ವದಲ್ಲಿ ನಡೆದ ಡಿಜಿಟಲ್ ವಹಿವಾಟುಗಳ ಪೈಕಿ ಶೇ. 40ರಷ್ಟು ಭಾಗ ಭಾರತದಲ್ಲೇ ನಡೆದಿವೆ" ಎಂದು ಮೋದಿ ಒತ್ತಿಹೇಳಿದರು.
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಭಾರತೀಯ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಛತ್ತೀಸ್ಗಡ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಅಸ್ಸಾಮ್ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಅರುಣಾಚಲಪ್ರದೇಶ ಮುಖ್ಯಮಂತ್ರಿ ಪ್ರೇಮ ಖಂಡು, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಾಂಗ್ಮ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ಈ ಜಂಟಿ ಸಮಾವೇಶದಲ್ಲಿ ಭಾಗವಹಿಸಿದ್ದರು.
ಈ ಜಂಟಿ ಸಮಾವೇಶವು ದೇಶದ ನ್ಯಾಯಾಂಗ ಮತ್ತು ಕಾರ್ಯಾಂಗ ಒಟ್ಟುಗೂಡಿ ನ್ಯಾಯಾಂಗ ವ್ಯವಸ್ಥೆಯ ಸವಾಲುಗಳನ್ನ ಎದುರಿಸುವ ಮಾರ್ಗೋಪಾಯಗಳನ್ನ ಕಂಡುಕೊಳ್ಳಲು ಸಹಾಯಕವಾಗುತ್ತದೆ ಎಂಬುದು ಪ್ರಧಾನಿ ಕಾರ್ಯಾಲಯದ ಅನಿಸಿಕೆ.
(ಒನ್ಇಂಡಿಯಾ ಸುದ್ದಿ)
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications