ಕೃಷಿ ಉತ್ಪನ್ನ ಆಮದಿಗೆ ಮಾಡುವ ವೆಚ್ಚ ರೈತರಿಗೆ ಸಿಗುವಂತಾಗಬೇಕು: ಮೋದಿ
ನವದೆಹಲಿ, ಫೆಬ್ರವರಿ 20: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿಯ ಆರನೇ ಸಭೆಯನ್ನು ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ, ಭಾರತದಲ್ಲಿ ಉದ್ಯಮ ನಡೆಸಲು ಸುಲಭವಾಗುವಂತೆ ಪುರಾತನ ಕಾನೂನುಗಳನ್ನು ರದ್ದುಗೊಳಿಸುವ ಮಾತನಾಡಿದರು. ಜತೆಗೆ ಆರ್ಥಿಕ ಪ್ರಗತಿಯನ್ನು ವೃದ್ಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜತೆಗೂಡಿ ಕೆಲಸ ಮಾಡಬೇಕೆಂದು ಪ್ರತಿನಿಧಿಸಿದರು.
ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಲು ಖಾಸಗಿ ವಲಯಕ್ಕೆ ಸಂಪೂರ್ಣ ಅವಕಾಶ ನೀಡಬೇಕು. ದೇಶದ ಪ್ರಗತಿಗೆ ಕೇಂದ್ರ ಹಾಗೂ ರಾಜ್ಯಗಳು ಜತೆಗೂಡಿ ಕೆಲಸ ಮಾಡಬೇಕು. ಜತೆಗೆ ನಿರ್ದಿಷ್ಟ ದಿಕ್ಕಿನಲ್ಲಿ ಸಾಗಬೇಕು ಹಾಗೂ ಸಹಕಾರಯುತ ಸಂಯುಕ್ತಕೂಟವನ್ನು ಮತ್ತಷ್ಟು ಅರ್ಥಪೂರ್ಣವಾಗಿಸಬೇಕು. ಇದು ಮಾತ್ರವಲ್ಲದೆ, ನಾವು ಸ್ಪರ್ಧಾತ್ಮಕತೆ ಹಾಗೂ ಸಂಯುಕ್ತ ಸಹಕಾರವನ್ನು ರಾಜ್ಯಗಳ ನಡುವೆ ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ತರಬೇಕಿದೆ. ಆರ್ಥಿಕ ಬೆಳವಣಿಗೆಗೆ ಖಾಸಗಿ ವಲಯದ ಪ್ರತಿನಿಧಿತ್ವವನ್ನು ಹಾಗೂ ಗೌರವವನ್ನು ಸರ್ಕಾರ ನೀಡಬೇಕಿದೆ ಎಂದು ಹೇಳಿದರು. ಮುಂದೆ ಓದಿ.

ಜಗತ್ತಿಗೆ ಮುಂದೆ ಭಾರತ ಪ್ರಜ್ವಲ
'ಕೋವಿಡ್ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಜತೆಗೆ ಕೆಲಸ ಮಾಡಿವೆ ಎಂಬುದನ್ನು ನೋಡಿದ್ದೇವೆ. ಇದರಲ್ಲಿ ದೇಶ ಯಶಸ್ವಿಯಾಗಿದ್ದು, ಇಡೀ ಜಗತ್ತಿನ ಮುಂದೆ ಭಾರತಕ್ಕೆ ಉತ್ತಮ ವರ್ಚಸ್ಸನ್ನು ಸೃಷ್ಟಿಸಿದೆ' ಎಂದರು.

ಅಪ್ರಸ್ತುತ ಕಾನೂನು ತೆಗೆಯಿರಿ
ದೇಶ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಂಪೂರ್ಣವಾಗಿ ಭಾಗವಹಿಸಲು ಸರ್ಕಾರವು ಸೂಕ್ತ ಅವಕಾಶ ಒದಗಿಸಲು ಕ್ರಮಗಳನ್ನು ತೆಗೆದುಕೊಂಡಿದೆ. ಜನರ ಮೇಲಿನ ಹೊರೆಯ ಪ್ರಮಾಣಗಳನ್ನು ತಗ್ಗಿಸುವ ಅಗತ್ಯವಿದೆ. ತಂತ್ರಜ್ಞಾನದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಪ್ರಸ್ತುತವಾಗಿರುವ ನಿಯಂತ್ರಣ ನಿಯಮಗಳನ್ನು ತಗ್ಗಿಸಲು ಸಮಿತಿಗಳನ್ನು ರಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದರು.

ಬಡವರ ಸಬಲೀಕರಣ
ಖಾದ್ಯ ತೈಲದಂತಹ ಕೃಷಿ ಉತ್ಪನ್ನಗಳನ್ನು ಹೆಚ್ಚಿಸಲು ಹಾಗೂ ಅವುಗಳ ಆಮದನ್ನು ತಗ್ಗಿಸಲು ಪ್ರಯತ್ನಗಳನ್ನು ಮಾಡಬೇಕಿದೆ. ರೈತರಿಗೆ ಮಾರ್ಗದರ್ಶನ ಮಾಡುವ ಮೂಲಕ ಇದನ್ನು ಸಾಧಿಸಬಹುದು. ಆಮದಿಗೆ ವ್ಯಯಿಸುವ ಹಣ ರೈತರ ಖಾತೆಗಳಿಗೆ ಹೋಗಬಹುದು. ಕಳೆದ ಕೆಲವು ವರ್ಷಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯುವುದನ್ನು ನೋಡಿದ್ದೇವೆ. ಲಸಿಕೆ ಹಾಗೂ ಆರೋಗ್ಯ ಸೌಲಭ್ಯಗಳಲ್ಲಿ ಏರಿಕೆ ಕಂಡಿದ್ದೇವೆ. ಬಡವರ ಸಬಲೀಕರಣಕ್ಕಾಗಿ ಉಚಿತ ವಿದ್ಯುತ್ ಸಂಪರ್ಕ, ಉಚಿತ ಅನಿಲ ಸಂಪರ್ಕಗಳನ್ನು ನೀಡುವಂತಹ ಕಾರ್ಯಗಳು ಅವರ ಜೀವನದಲ್ಲಿ ಭಾರಿ ಬದಲಾವಣೆಗಳನ್ನು ಪ್ರತಿಫಲಿಸಿವೆ ಎಂದು ಹೇಳಿದರು.

ಮಮತಾ ಗೈರು
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಗೆ ಗೈರಾಗಿದ್ದರು. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಬಿಹಾರ ಸಿಎಂ ನಿತೀಶ್ ಕುಮಾರ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಂತಾದವರು ಭಾಗವಹಿಸಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications