Narendra Modi: ಸರ್ಕಾರ ರಚನೆಗೆ ನರೇಂದ್ರ ಮೋದಿಗೆ ಆಹ್ವಾನ; ಭಾನುವಾರ ಪ್ರಮಾಣ ವಚನ
2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ರಚನೆ ಸುಗಮವಾಗಿದೆ. ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. ಸರ್ಕಾರ ರಚನೆ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.
ಭಾನುವಾರ ಸಂಜೆ 6 ಗಂಟೆಗೆ ತಮ್ಮ ನೂತನ ಸಚಿವ ಸಂಪುಟದ ಸದಸ್ಯರ ಜೊತೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸತತ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಜವಹರಲಾಲ್ ನೆಹರು ಬಳಿಕ ಈ ಸಾಧನೆ ಮಾಡಿದ ಎರಡನೇ ಪ್ರಧಾನಿಯಾಗಲಿದ್ದಾರೆ.

ರಾಷ್ಟ್ರಪತಿ ಭವನದ ಹೇಳಿಕೆಯ ಪ್ರಕಾರ, ದ್ರೌಪದಿ ಮುರ್ಮು ಅವರು "ವಿವಿಧ ಬೆಂಬಲ ಪತ್ರಗಳ ಆಧಾರದ ಮೇಲೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಸರ್ಕಾರ ರಚನೆಗೆ ಬೇಕಾದ ಬೆಂಬಲ ಇರುವುದನ್ನು ಖಚಿತಪಡಿಸಿಕೊಂಡಿದ್ದಾರೆ. 18 ನೇ ಲೋಕಸಭೆ ಮತ್ತು ರಚನೆಗೆ ಬಹುಮತದ ಬೆಂಬಲವಿದ್ದು, ಹಾಗಾಗಿ ನರೇಂದ್ರ ಮೋದಿ ಅವರನ್ನು ಭಾರತದ ಪ್ರಧಾನಿಯನ್ನಾಗಿ ನೇಮಿಸಲಾಗಿದೆ" ಎಂದು ಪ್ರಕಟಣೆ ತಿಳಿಸಿದೆ.
ಸಿಹಿ ಮೊಸರು ತಿನ್ನಿಸಿದ ದ್ರೌಪದಿ ಮುರ್ಮು
ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಷ್ಟ್ರಪತಿಗಳು ತಮ್ಮ ಭೇಟಿಯ ವೇಳೆ ಮೋದಿ ಅವರಿಗೆ ಸಿಹಿ ಮೊಸರು ತಿನ್ನಿಸಿದರು.
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಅವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ ನಂತರ ರಾಷ್ಟ್ರಪತಿಗಳು ಕೇಂದ್ರದಲ್ಲಿ ಸರ್ಕಾರ ರಚಿಸಲು ಮೋದಿ ಅವರನ್ನು ಆಹ್ವಾನಿಸಿದರು.
ಆಹ್ವಾನ ನೀಡಿದ ಪ್ರಧಾನಿ ಮೋದಿ
ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, "ಇಂದು ಬೆಳಿಗ್ಗೆ ಎಲ್ಲಾ ಎನ್ಡಿಎ ಮಿತ್ರಪಕ್ಷಗಳು ನನ್ನನ್ನು ನಾಯಕನನ್ನಾಗಿ ಆಯ್ಕೆ ಮಾಡಿ ರಾಷ್ಟ್ರಪತಿಗಳಿಗೆ ತಿಳಿಸಿದವು. ನಂತರ ರಾಷ್ಟ್ರಪತಿಗಳು ನನ್ನನ್ನು ಕರೆದರು. ಮತ್ತು ನನ್ನನ್ನು ನಿಯೋಜಿತ ಪ್ರಧಾನಿಯಾಗಿ ನೇಮಿಸಿದರು. ನಾನು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ, ಬನ್ನಿ ಎಂದು ಆಹ್ವಾನ ನೀಡಿದರು.
ಮೂರನೇ ಅಧಿಕಾರಕ್ಕೆ ಬರಲು ಮತ ನೀಡಿದ ದೇಶದ ಜನತೆಗೆ ನರೇಂದ್ರ ಮೋದಿ ಧನ್ಯವಾದ ತಿಳಿಸಿದರು. "ಎನ್ಡಿಎಗೆ ಮೂರನೇ ಬಾರಿಗೆ ರಾಷ್ಟ್ರದ ಸೇವೆ ಮಾಡಲು ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಈ ದೇಶದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ದೇಶವನ್ನು ವೇಗವಾಗಿ ಅಭಿವೃದ್ಧಿಪಡಿಸಲು ಬದ್ಧರಾಗಿದ್ದೇವೆ" ಎಂದು ಹೇಳಿದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications