ದೆಹಲಿಯ ಈ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ: ಯೂಟ್ಯೂಬರ್ ಧ್ರುವ್ ರಾಠಿ, ಏನದು ?
ದೆಹಲಿಯ ಹೃದಯಭಾಗದಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ದೆಹಲಿಯ ಬಾಂಬ್ ಸ್ಫೋಟದಲ್ಲಿ 9 ಜನ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ನಡುವೆ ಯೂಟ್ಯೂಬರ್ ಧ್ರುವ್ ರಾಠಿ ಟ್ವೀಟ್ ಅವರು ದೆಹಲಿ ಸಮಸ್ಯೆಯ ಬಗ್ಗೆ ಮಾಡಿರುವ ಟ್ವೀಟ್ವೊಂದು ವೈರಲ್ ಆಗುತ್ತಿದೆ. ಆದರೆ ಈ ಟ್ವೀಟ್ ದೆಹಲಿಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ್ದಾಗಿಲ್ಲ.
ದೆಹಲಿಯಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದ ನಡುವೆ ಕಳೆದ ಒಂದು ವಾರದಿಂದಲೂ ದೆಹಲಿ ಹಾಗೂ ದೇಶದಾದ್ಯಂತ ದೆಹಲಿಯ ವಾಯುಮಾಲಿನ್ಯಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆಗಳು ನಡೆದಿವೆ. ಇದೇ ಮೊದಲ ಬಾರಿ ಎನ್ನುವಂತೆ ದೆಹಲಿಯ ಜನ ವಾಯುಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಡಬೇಕು ಎಂದು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ನಡುವೆ ಧ್ರುವ್ ರಾಠಿ ಅವರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ.

ಯೂಟ್ಯೂಬರ್ ಧ್ರುವ್ ರಾಠಿ ಟ್ವೀಟ್ನಲ್ಲಿ ಏನಿದೆ ?
ವಾಯು ಮಾಲಿನ್ಯ ದೆಹಲಿ ಸಮಸ್ಯೆಯಲ್ಲ ಎಂದು ಯೂಟ್ಯೂಬರ್ ಧ್ರುವ್ ರಾಠಿ ಟ್ವೀಟ್ ಮಾಡಿದ್ದಾರೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ಗೂ ಅದನ್ನು ಪರಿಹರಿಸಲು ಸಾಧ್ಯವಾಗಲಿಲ್ಲ. ರೇಖಾ ಗುಪ್ತಾಗೂ ಸಹ ಇದನ್ನು ಪರಿಹರಿಸಲು ಸಾಧ್ಯವಾಗಲಿಲ್ಲ ಏಕೆಂದರೆ ಪ್ರದೇಶವಾರು ದೆಹಲಿ ಉತ್ತರ ಭಾರತದ 2% ಕ್ಕಿಂತ ಕಡಿಮೆ ಇದೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಕೂಳೆ ಸುಡುವಿಕೆ (ಕೃಷಿ ತ್ಯಾಜ್ಯ) ನಡೆಯುತ್ತಿದೆ. ಕಲ್ಲಿದ್ದಲು ವಿದ್ಯುತ್ ಸ್ಥಾವರಗಳು ಕಾರ್ಯ ನಿರ್ವಹಿಸುತ್ತಿವೆ, ಈ ಎಲ್ಲಾ ರಾಜ್ಯಗಳಲ್ಲಿ ಅಂತರರಾಷ್ಟ್ರೀಯ ಮಾನದಂಡಗಳನ್ನು ಉಲ್ಲಂಘಿಸುತ್ತಿವೆ. ದೆಹಲಿಯಾದ್ಯಂತ ಈ ಎಲ್ಲಾ ರಾಜ್ಯಗಳಲ್ಲಿನ ಕೈಗಾರಿಕೆಗಳು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿವೆ ಏಕೆಂದರೆ ಕೇಂದ್ರ ಸರ್ಕಾರವು ನಿಯಮಗಳನ್ನು ಜಾರಿಗೊಳಿಸಲು ವಿಫಲವಾಗಿದೆ. ನಿರ್ಮಾಣ ಸ್ಥಳಗಳು ಎಲ್ಲೆಡೆ ಮಾನದಂಡಗಳನ್ನು ಉಲ್ಲಂಘಿಸುತ್ತಿವೆ. ಅಲ್ಲದೇ ಇತ್ತೀಚಿನ ಮಾನದಂಡಗಳನ್ನು ಅನುಸರಿಸದ ಕಾರುಗಳು ಮತ್ತು ಹಳೆಯ ಟ್ರಕ್ಗಳಿಂದ ವಾಹನ ಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮುಂದುವರಿದು ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕೇಂದ್ರ ಮಟ್ಟದಲ್ಲಿ ಪರಿಹಾರಗಳನ್ನು ಜಾರಿಗೆ ತರುವುದು ಒಂದೇ ಪರಿಹಾರ. ಪ್ರಧಾನಿ ಮತ್ತು ಪರಿಸರ ಸಚಿವರು ಈ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಎಲ್ಲಾ ಅಂಶಗಳ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ಆದರೆ, ಅವರು ಏನು ಮಾಡುತ್ತಿದ್ದಾರೆ? ಏನೂ ಇಲ್ಲ.
ಅವರು ಸಂಪೂರ್ಣವಾಗಿ ಮೌನವಾಗಿದ್ದಾರೆ. ಜನರ ಕೋಪವನ್ನು ನರೇಂದ್ರ ಮೋದಿಯವರ ಕಡೆಗೆ ತಿರುಗಬೇಕು. ಈ ವಿಚಾರದಲ್ಲಿ ಅವರು ಬಹುದೊಡ್ಡ ಅಪರಾಧಿ ಎಂದು ದೂರಿದ್ದಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications