ದೆಹಲಿಯ ಈ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ: ಯೂಟ್ಯೂಬರ್ ಧ್ರುವ್ ರಾಠಿ, ಏನದು ?
ದೆಹಲಿಯ ಹೃದಯಭಾಗದಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ದೆಹಲಿಯ ಬಾಂಬ್ ಸ್ಫೋಟದಲ್ಲಿ 9 ಜನ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ನಡುವೆ ಯೂಟ್ಯೂಬರ್ ಧ್ರುವ್ ರಾಠಿ ಟ್ವೀಟ್ ಅವರು ದೆಹಲಿ ಸಮಸ್ಯೆಯ ಬಗ್ಗೆ ಮಾಡಿರುವ ಟ್ವೀಟ್ವೊಂದು ವೈರಲ್ ಆಗುತ್ತಿದೆ. ಆದರೆ ಈ ಟ್ವೀಟ್ ದೆಹಲಿಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ್ದಾಗಿಲ್ಲ.
ದೆಹಲಿಯಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದ ನಡುವೆ ಕಳೆದ ಒಂದು ವಾರದಿಂದಲೂ ದೆಹಲಿ ಹಾಗೂ ದೇಶದಾದ್ಯಂತ ದೆಹಲಿಯ ವಾಯುಮಾಲಿನ್ಯಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆಗಳು ನಡೆದಿವೆ. ಇದೇ ಮೊದಲ ಬಾರಿ ಎನ್ನುವಂತೆ ದೆಹಲಿಯ ಜನ ವಾಯುಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಡಬೇಕು ಎಂದು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ನಡುವೆ ಧ್ರುವ್ ರಾಠಿ ಅವರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ.

ಯೂಟ್ಯೂಬರ್ ಧ್ರುವ್ ರಾಠಿ ಟ್ವೀಟ್ನಲ್ಲಿ ಏನಿದೆ ?
ವಾಯು ಮಾಲಿನ್ಯ ದೆಹಲಿ ಸಮಸ್ಯೆಯಲ್ಲ ಎಂದು ಯೂಟ್ಯೂಬರ್ ಧ್ರುವ್ ರಾಠಿ ಟ್ವೀಟ್ ಮಾಡಿದ್ದಾರೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ಗೂ ಅದನ್ನು ಪರಿಹರಿಸಲು ಸಾಧ್ಯವಾಗಲಿಲ್ಲ. ರೇಖಾ ಗುಪ್ತಾಗೂ ಸಹ ಇದನ್ನು ಪರಿಹರಿಸಲು ಸಾಧ್ಯವಾಗಲಿಲ್ಲ ಏಕೆಂದರೆ ಪ್ರದೇಶವಾರು ದೆಹಲಿ ಉತ್ತರ ಭಾರತದ 2% ಕ್ಕಿಂತ ಕಡಿಮೆ ಇದೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಕೂಳೆ ಸುಡುವಿಕೆ (ಕೃಷಿ ತ್ಯಾಜ್ಯ) ನಡೆಯುತ್ತಿದೆ. ಕಲ್ಲಿದ್ದಲು ವಿದ್ಯುತ್ ಸ್ಥಾವರಗಳು ಕಾರ್ಯ ನಿರ್ವಹಿಸುತ್ತಿವೆ, ಈ ಎಲ್ಲಾ ರಾಜ್ಯಗಳಲ್ಲಿ ಅಂತರರಾಷ್ಟ್ರೀಯ ಮಾನದಂಡಗಳನ್ನು ಉಲ್ಲಂಘಿಸುತ್ತಿವೆ. ದೆಹಲಿಯಾದ್ಯಂತ ಈ ಎಲ್ಲಾ ರಾಜ್ಯಗಳಲ್ಲಿನ ಕೈಗಾರಿಕೆಗಳು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿವೆ ಏಕೆಂದರೆ ಕೇಂದ್ರ ಸರ್ಕಾರವು ನಿಯಮಗಳನ್ನು ಜಾರಿಗೊಳಿಸಲು ವಿಫಲವಾಗಿದೆ. ನಿರ್ಮಾಣ ಸ್ಥಳಗಳು ಎಲ್ಲೆಡೆ ಮಾನದಂಡಗಳನ್ನು ಉಲ್ಲಂಘಿಸುತ್ತಿವೆ. ಅಲ್ಲದೇ ಇತ್ತೀಚಿನ ಮಾನದಂಡಗಳನ್ನು ಅನುಸರಿಸದ ಕಾರುಗಳು ಮತ್ತು ಹಳೆಯ ಟ್ರಕ್ಗಳಿಂದ ವಾಹನ ಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮುಂದುವರಿದು ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕೇಂದ್ರ ಮಟ್ಟದಲ್ಲಿ ಪರಿಹಾರಗಳನ್ನು ಜಾರಿಗೆ ತರುವುದು ಒಂದೇ ಪರಿಹಾರ. ಪ್ರಧಾನಿ ಮತ್ತು ಪರಿಸರ ಸಚಿವರು ಈ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಎಲ್ಲಾ ಅಂಶಗಳ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ಆದರೆ, ಅವರು ಏನು ಮಾಡುತ್ತಿದ್ದಾರೆ? ಏನೂ ಇಲ್ಲ.
ಅವರು ಸಂಪೂರ್ಣವಾಗಿ ಮೌನವಾಗಿದ್ದಾರೆ. ಜನರ ಕೋಪವನ್ನು ನರೇಂದ್ರ ಮೋದಿಯವರ ಕಡೆಗೆ ತಿರುಗಬೇಕು. ಈ ವಿಚಾರದಲ್ಲಿ ಅವರು ಬಹುದೊಡ್ಡ ಅಪರಾಧಿ ಎಂದು ದೂರಿದ್ದಾರೆ.
-
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications