ಕಪ್ಪು ಹಣ ವಾಪಸ್ ತರುವಲ್ಲಿ ಮೋದಿ ಪ್ರಾಮಾಣಿಕ ಯತ್ನವಿಲ್ಲ: ಜೇಠ್ಮಲಾನಿ
"ವಿದೇಶದಲ್ಲಿರುವ ಭಾರತೀಯರ ಕಪ್ಪು ಹಣವನ್ನು ಮರಳಿ ತರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ" ಎಂದು ಹೆಸರಾಂತ ವಕೀಲ ಹಾಗೂ ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಆರೋಪಿಸಿದ್ದಾರೆ.
ಇತ್ತೀಚೆಗೆ ಮೋದಿಗೆ ಬರೆದ ಪತ್ರದಲ್ಲಿ, ಕಳೆದ ಬಾರಿಯ ಲೋಕಸಭೆ ಚುನಾವಣೆಯನ್ನು ಅಂಥ ಬಹುಮತದಿಂದ ಗೆಲ್ಲಲು ಕಾರಣವಾಗಿದ್ದು 90 ಲಕ್ಷ ಕೋಟಿ ರುಪಾಯಿ ಕಪ್ಪು ಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಜನರಿಗೆ ನೀಡಿದ ಭರವಸೆಯಿಂದ ಎಂದು ಅವರು ಹೇಳಿದ್ದಾರೆ.

ಕಳೆದ ವಾರವಷ್ಟೇ ಜೇಠ್ಮಲಾನಿ ತಮ್ಮ ವಕೀಲಿಕೆ ವೃತ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಕಪ್ಪು ಹಣದ ವಿರುದ್ಧ ಹೋರಾಡಲು ಪ್ರಧಾನಿ ಯಾವುದೇ ರೀತಿ ನೆರವು ನೀಡುತ್ತಿಲ್ಲ ಎಂದು ಕೂಡ ಹೇಳಿದ್ದಾರೆ.
ಎರಡು ವರ್ಷದ ಹಿಂದೆಯೇ ಅಮಿತ್ ಶಾ ಈ ವಿಚಾರ ಬಯಲು ಮಾಡಿದ್ದಾರೆ. ಕಪ್ಪು ಹಣದ ವಾಪಸಾತಿಯ ಮಾತು ಕೇವಲ ಗಿಮಿಕ್ ಅಥವಾ ಜೋಕ್ ಎಂಬುದು ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.
2012ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮೋದಿಗೆ ಬೆಂಬಲ ವ್ಯಕ್ತಪಡಿಸಿದ್ದರು ಜೇಠ್ಮಲಾನಿ. ಆಗಿನಿಂದ ಜೇಠ್ಮಲಾನಿ ಅವರನ್ನು ಬಿಜೆಪಿಯಿಂದ ಹೊರ ಹಾಕಲು ಯತ್ನ ನಡೆದಿತ್ತಂತೆ. ಆದರೆ ಅಡ್ವಾಣಿ ಹಾಗೂ ಗಡ್ಕರಿ ಮಧ್ಯಪ್ರವೇಶದಿಂದ ಪ್ರಸ್ತಾವಿತ ಉಚ್ಚಾಟನೆ ಹಿಂಪಡೆಯಲಾಗಿತ್ತು. ಅದು ಮಾಧ್ಯಮಗಳಲ್ಲೂ ಬಂದಿತ್ತು. ಅದಕ್ಕೆ ಯಾರೂ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ ಎಂದಿದ್ದಾರೆ ಜೇಠ್ಮಲಾನಿ.
ಆದರೆ, ರಜಾ ದಿನ ಕಳೆಯಲು ಜೇಠ್ಮಲಾನಿ ವಿದೇಶಕ್ಕೆ ತೆರಳಿದ ವೇಳೆ ಬಿಜೆಪಿಯಿಂದ ಅವರನ್ನು ಉಚ್ಚಾಟಿಸಲಾಯಿತು. ಇದು ಕಾನೂನುಬಾಹಿರ. ಇದಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳುವ ಉದ್ದೇಶದಿಂದ ಬಿಜೆಪಿ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications