ಬಸವೇಶ್ವರ ಜಯಂತಿಯಂದು ಕರ್ನಾಟಕ ರಾಜಕಾರಣ, ಮೋದಿಯ ಮಾತುಗಳು
ಇಂದು ಬಸವೇಶ್ವರ ಜಯಂತಿ. ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದು, ಲಂಡನ್ ನ ಸಂಸತ್ ಆವರಣದಲ್ಲಿರುವ ಬಸವೇಶ್ವರ ಪುತ್ಥಳಿಗೆ ಗೌರವ ಸಲ್ಲಿಸುವ ಮೂಲಕ ಜಯಂತಿ ಆಚರಿಸಿದ್ದಾರೆ. ಅಂದಹಾಗೆ, ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಮುಂಚೂಣಿಯಲ್ಲಿರುವ ನರೇಂದ್ರ ಮೋದಿ ಅವರ ಈ ನಡೆ ಬಗ್ಗೆಯೂ ರಾಜಕೀಯ ವಿಶ್ಲೇಷಣೆ ನಡೆಯುತ್ತಿದೆ.
"ಬಸವೇಶ್ವರ ಜಯಂತಿಯಂದು ಅವರಿಗೆ ತಲೆ ಬಾಗಿದ್ದೇನೆ. ಇತಿಹಾಸ ಹಾಗೂ ಸಂಸ್ಕೃತಿಯಲ್ಲಿ ಅವರಿಗೆ ವಿಶೇಷ ಸ್ಥಾನವಿದೆ. ಸಾಮಾಜಿಕ ಸೌಹಾರ್ದತೆ, ಭ್ರಾತೃತ್ವ, ಒಗ್ಗಟ್ಟು ಇವೆಲ್ಲಕ್ಕೂ ಒತ್ತು ನೀಡಿದವರು. ಯಾವಾಗಲೂ ನಮಗೆ ಸ್ಫೂರ್ತಿ. ಭಗವಾನ್ ಬಸವೇಶ್ವರರು ನಮ್ಮ ಸಮಾಜವನ್ನು ಒಗ್ಗೂಡಿಸಿದವರು ಮತ್ತು ಜ್ಞಾನಕ್ಕೆ ಪ್ರಾಮುಖ್ಯ ನೀಡಿದವರು" ಎಂದು ಬಸವೇಶ್ವರ ಜಯಂತಿ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಲಿಂಗಾಯತ- ವೀರಶೈವ ಎಂದು ಜಾತಿ ಒಡೆಯಲು ಹೊರಟಿರುವ ಕರ್ನಾಟಕದ ಮುಖ್ಯಮಂತ್ರಿಗೆ ಬಸವೇಶ್ವರರ ವಿಗ್ರಹಕ್ಕೆ ಮಾಲೆ ಹಾಕಲು ಬಿಡಬಾರದು ಎಂಬ ಹೇಳಿಕೆ ನೀಡಿ, ಕೆಂಡದಂಥ ವಿವಾದಕ್ಕೆ ಒಂದಿಷ್ಟು ಗಾಳಿ ತೂರಿದ್ದರು.

ಇದನ್ನೇ ಚುನಾವಣೆ ಸೂಕ್ಷ್ಮ ಎಂಬಂತೆ, ಬಿಜೆಪಿ ಜತೆಗೆ ಗಟ್ಟಿಯಾಗಿ ನಿಂತಿದ್ದ ಲಿಂಗಾಯತ ಸಮುದಾಯವನ್ನು ಒಡೆದು ಹಾಕುವ ತಂತ್ರ ಸಿದ್ದರಾಮಯ್ಯ ಅವರದು. ಶತಾಯಗತಾಯ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತಪ್ಪಿಸಿಬೇಕು, ಬಿಜೆಪಿಯನ್ನು ಸೋಲಿಸಬೇಕು ಎಂಬುದು ಲೆಕ್ಕಾಚಾರ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ












Click it and Unblock the Notifications