Get Updates
Get notified of breaking news, exclusive insights, and must-see stories!

PM Modi's Independence Day Speech Highlights: ಹೆಲ್ತ್‌ಕಾರ್ಡ್, ಶೀಘ್ರದಲ್ಲೇ ಕೊರೊನಾಗೆ ತ್ರಿವಳಿ ಲಸಿಕೆ

ನವದೆಹಲಿ, ಆಗಸ್ಟ್ 15: 74ನೇ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿ ಮಾತನಾಡಿದರು.
ಮೋದಿ ಭಾಷಣದ ಪ್ರಮುಖಾಂಶಗಳು

-ಎಷ್ಟು ದಿನಗಳವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧವಸ್ತುಗಳನ್ನು ಆಮದು ಮಾಡಿಕೊಳ್ಳಬೇಕು, ಇದಕ್ಕೊಂದು ಅಂತ್ಯ ಬೇಕಿದೆ, ಆತ್ಮ ನಿರ್ಭರ ಭಾರತದಡಿ ದೇಶವನ್ನು ಸ್ವಾವಲಂಬಿಯಾಗಿಸಲು ಪಣ ತೊಡಬೇಕಿದೆ.

PM Narendra Modis Independence Day Speech Highlights In Kannada

-ಆತ್ಮ ನಿರ್ಭರ ಭಾರತ ಎನ್ನುವುದು 130 ಕೋಟಿ ಜನರ ಮಂತ್ರವಾಗಿದೆ
-ಇಡೀ ವಿಶ್ವವೇ ಒಂದು ಕುಟುಂಬ ಎಂದು ಭಾರತ ನಂಬಿದೆ. ನಾವು ಆರ್ಥಿಕತೆ ಮತ್ತು ಅಭಿವೃದ್ಧಿ ಕಡೆಗೆ ಗಮನಹರಿಸುವಾಗ ಮಾನವೀಯತೆಯನ್ನು ಬಿಡಬಾರದು
-ಕೆಲವು ತಿಂಗಳ ಹಿಂದೆ ಎನ್ 95 ಮಾಸ್ಕ್ ಆಮದು ಮಾಡಿಕೊಳ್ಳಲಾಗುತ್ತಿತ್ತು, ಉದ್ಯಮಿಗಳ ಸಹಕಾರದಿಂದ ಈಗ ನಮ್ಮಲ್ಲೇ ತಯಾರಿಸಿ ಬೇರೆ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ.
-ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಶೇ.18ರಷ್ಟು ಹೆಚ್ಚಳವಾಗಿದೆ-ಕೊರೊನಾದಿಂದ ವಿಶ್ವದ ಆರ್ಥಿಕತೆ ಸ್ಥಬ್ಧವಾಗಿದೆ,ಆದರೆ ಭಾರತ ಆತ್ಮ ನಿರ್ಭರ ಭಾರತ ಇದೊಂದು ಅವಕಾಶವೆಂದು ತಿಳಿದಿವೆ, ಸಮಗ್ರ ವಿಶ್ವಕ್ಕೂ ಭಾರತ ತನ್ನ ಕೊಡುಗೆ ನೀಡುವ ಸಂದರ್ಭ ಬಂದಿದೆ.
-ವಿಶ್ವಕ್ಕೆ ಭಾರತವು ರಫ್ತು ಮಾಡುವ ಸಾಮರ್ಥ್ಯವನ್ನು ಹೊಂದಿದೆ ಆದರೆ ನಮ್ಮಲ್ಲಿರುವ ಕಚ್ಚಾ ವಸ್ತುಗಳಿಗೆ ಪಕ್ಕಾ ರೂಪ ನೀಡಿ ರಫ್ತು ಮಾಡುವ ಕೌಶಲ್ಯ ತೋರಬೇಕಿದೆ.
-ಭಾರತದ ಗಡಿಯಲ್ಲಿ 1 ಲಕ್ಷ ಎನ್‌ಸಿಸಿ ಕೆಡೆಟ್ಸ್‌ಗಳನ್ನು ನಿಯೋಜನೆ ಮಾಡಲಾಗುತ್ತದೆ, ಹೆಣ್ಣುಮಕ್ಕಳಿಗೆ ಆಧ್ಯತೆ.
-ಶತಕಗಳ ಕಾಲ ವಿವಾದದ ಸುಳಿಯಲ್ಲಿದ್ದ ರಾಮ ಮಂದಿರ ವಿಚಾರವು ಶಾಂತಿಪೂರ್ವಕವಾಗಿ ಬಗೆಹರಿದಿದೆ ದೇಶದ ಜನ ನಡೆದುಕೊಂಡ ರೀತಿಯು ಭವಿಷ್ಯದಲ್ಲಿ ಮಾದರಿಯಾಗಿ ದಾಖಲಾಗಿರಲಿದೆ.
-ಜಮ್ಮು ಕಾಶ್ಮೀರದಲ್ಲಿ ಶೀಘ್ರವೇ ಕ್ಷೇತ್ರ ಮರುವಿಂಗಡಣೆ ಪೂರ್ಣಗೊಳ್ಳಲಿದ್ದು, ಜನರಿಂದ ಆಯ್ಕೆಯಾದ ಸರ್ಕಾರ ಕಾರ್ಯ ನಿರ್ವಹಿಸಲಿವೆ.
-ಭಾರತದಲ್ಲಿ ಸುಮಾರು 1300 ದ್ವೀಪಗಳನ್ನು ಗುರುತಿಸಲಾಗಿದ್ದು, ಅದರ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಲಾಗುತ್ತಿದೆ.
-ಎಲ್‌ಎಸಿಯಿಂದ ಎಲ್‌ಒಸಿವರೆಗೂ ನಮ್ಮೆಡೆಗೆ ದೃಷ್ಟಿ ಹಾಯಿಸಿಲು ಯತ್ನಿಸಿದವರಿಗೆ ಸೈನಿಕರು ತಕ್ಕ ಉತ್ತರ ನೀಡಿದ್ದಾರೆ.
-ಇವತ್ತಿನಿಂದ ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಆರಂಭಿಸುತ್ತಿದ್ದೇವೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಲಿದೆ

-ಭಾರತದಲ್ಲಿ ಮೂರು ಕೊರೊನಾ ಲಸಿಕೆಗಳ ಪ್ರಯೋಗ ನಡೆಯುತ್ತಿದ್ದು, ವಿಜ್ಞಾನಿಗಳ ಹಸಿರು ನಿಶಾನೆ ಸಿಕ್ಕ ಕೂಡಲೇ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಗೆ ತಯಾರಿ ನಡೆಸಿಕೊಳ್ಳಲಾಗುತ್ತಿದೆ

-ವಿಕಾಸದ ಈ ಯಾತ್ರೆಯಲ್ಲಿ ಸಮಾಜದಲ್ಲಿ ಜನರು ಹಿಂದೆ ಉಳಿದುಬಿಡುತ್ತಿದ್ದಾರೆ, ಬಡತನದಿಂದಾಗಿ ಮುಂದೆ ಬರಲು ಸಾಧ್ಯವಾಗುತ್ತಿಲ್ಲ. ಆತ್ಮ ನಿರ್ಭರ ಭಾರತವನ್ನಾಗಿಸಬೇಕು, ಹಿಂದುಳಿದ 110 ಜಿಲ್ಲೆಗಳನ್ನು ಗುರುತಿಸಿದ್ದು, ಅವುಗಳನ್ನು ಮುನ್ನಡೆಸುವ ಕುರಿತು ಆಲೋಚಿಸಲಾಗಿದೆ
-ಮೇಕ್ ಇನ್ ಇಂಡಿಯಾ ಜೊತೆಗೆ ಮೇಕ್‌ ಫಾರ್ ವರ್ಲ್ಡ್ ಘೋಷವಾಖ್ಯದೊಂದಿಗೆ ಮುನ್ನುಗ್ಗಬೇಕಿದೆ
-ರಾಷ್ಟ್ರೀಯ ಶಿಕ್ಷಣ ನೀತಿ, ಒಂದು ದೇಶ ಒಂದು ರೇಷನ್ ಕಾರ್ಡ್ ಯಾವುದೇ ಇರಲಿ ಪರಿವರ್ತನೆಯ ಕಾಲಘಟ್ಟವನ್ನು ವಿಶ್ವ ನೋಡುತ್ತಿದೆ
-ಆಧುನಿಕ ಭಾರತ ನಿರ್ಮಾಣದಲ್ಲಿ ದೇಶದ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ, ರಾಷ್ಟ್ರೀಯ ಶಿಕ್ಷಣ ನೀತಿ ಎಲ್ಲಾ ವಿದ್ಯಾರ್ಥಿಗಳನ್ನು ಒಂದುಗೂಡಿಸುತ್ತದೆ ಒಂದೇ ರೀತಿಯ ಶಿಕ್ಷಣ ಪಡೆಯುತ್ತಾರೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+