PM Modi's Independence Day Speech Highlights: ಹೆಲ್ತ್ಕಾರ್ಡ್, ಶೀಘ್ರದಲ್ಲೇ ಕೊರೊನಾಗೆ ತ್ರಿವಳಿ ಲಸಿಕೆ
ನವದೆಹಲಿ, ಆಗಸ್ಟ್ 15: 74ನೇ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿ ಮಾತನಾಡಿದರು.
ಮೋದಿ ಭಾಷಣದ ಪ್ರಮುಖಾಂಶಗಳು
-ಎಷ್ಟು ದಿನಗಳವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧವಸ್ತುಗಳನ್ನು ಆಮದು ಮಾಡಿಕೊಳ್ಳಬೇಕು, ಇದಕ್ಕೊಂದು ಅಂತ್ಯ ಬೇಕಿದೆ, ಆತ್ಮ ನಿರ್ಭರ ಭಾರತದಡಿ ದೇಶವನ್ನು ಸ್ವಾವಲಂಬಿಯಾಗಿಸಲು ಪಣ ತೊಡಬೇಕಿದೆ.

-ಆತ್ಮ ನಿರ್ಭರ ಭಾರತ ಎನ್ನುವುದು 130 ಕೋಟಿ ಜನರ ಮಂತ್ರವಾಗಿದೆ
-ಇಡೀ ವಿಶ್ವವೇ ಒಂದು ಕುಟುಂಬ ಎಂದು ಭಾರತ ನಂಬಿದೆ. ನಾವು ಆರ್ಥಿಕತೆ ಮತ್ತು ಅಭಿವೃದ್ಧಿ ಕಡೆಗೆ ಗಮನಹರಿಸುವಾಗ ಮಾನವೀಯತೆಯನ್ನು ಬಿಡಬಾರದು
-ಕೆಲವು ತಿಂಗಳ ಹಿಂದೆ ಎನ್ 95 ಮಾಸ್ಕ್ ಆಮದು ಮಾಡಿಕೊಳ್ಳಲಾಗುತ್ತಿತ್ತು, ಉದ್ಯಮಿಗಳ ಸಹಕಾರದಿಂದ ಈಗ ನಮ್ಮಲ್ಲೇ ತಯಾರಿಸಿ ಬೇರೆ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ.
-ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಶೇ.18ರಷ್ಟು ಹೆಚ್ಚಳವಾಗಿದೆ-ಕೊರೊನಾದಿಂದ ವಿಶ್ವದ ಆರ್ಥಿಕತೆ ಸ್ಥಬ್ಧವಾಗಿದೆ,ಆದರೆ ಭಾರತ ಆತ್ಮ ನಿರ್ಭರ ಭಾರತ ಇದೊಂದು ಅವಕಾಶವೆಂದು ತಿಳಿದಿವೆ, ಸಮಗ್ರ ವಿಶ್ವಕ್ಕೂ ಭಾರತ ತನ್ನ ಕೊಡುಗೆ ನೀಡುವ ಸಂದರ್ಭ ಬಂದಿದೆ.
-ವಿಶ್ವಕ್ಕೆ ಭಾರತವು ರಫ್ತು ಮಾಡುವ ಸಾಮರ್ಥ್ಯವನ್ನು ಹೊಂದಿದೆ ಆದರೆ ನಮ್ಮಲ್ಲಿರುವ ಕಚ್ಚಾ ವಸ್ತುಗಳಿಗೆ ಪಕ್ಕಾ ರೂಪ ನೀಡಿ ರಫ್ತು ಮಾಡುವ ಕೌಶಲ್ಯ ತೋರಬೇಕಿದೆ.
-ಭಾರತದ ಗಡಿಯಲ್ಲಿ 1 ಲಕ್ಷ ಎನ್ಸಿಸಿ ಕೆಡೆಟ್ಸ್ಗಳನ್ನು ನಿಯೋಜನೆ ಮಾಡಲಾಗುತ್ತದೆ, ಹೆಣ್ಣುಮಕ್ಕಳಿಗೆ ಆಧ್ಯತೆ.
-ಶತಕಗಳ ಕಾಲ ವಿವಾದದ ಸುಳಿಯಲ್ಲಿದ್ದ ರಾಮ ಮಂದಿರ ವಿಚಾರವು ಶಾಂತಿಪೂರ್ವಕವಾಗಿ ಬಗೆಹರಿದಿದೆ ದೇಶದ ಜನ ನಡೆದುಕೊಂಡ ರೀತಿಯು ಭವಿಷ್ಯದಲ್ಲಿ ಮಾದರಿಯಾಗಿ ದಾಖಲಾಗಿರಲಿದೆ.
-ಜಮ್ಮು ಕಾಶ್ಮೀರದಲ್ಲಿ ಶೀಘ್ರವೇ ಕ್ಷೇತ್ರ ಮರುವಿಂಗಡಣೆ ಪೂರ್ಣಗೊಳ್ಳಲಿದ್ದು, ಜನರಿಂದ ಆಯ್ಕೆಯಾದ ಸರ್ಕಾರ ಕಾರ್ಯ ನಿರ್ವಹಿಸಲಿವೆ.
-ಭಾರತದಲ್ಲಿ ಸುಮಾರು 1300 ದ್ವೀಪಗಳನ್ನು ಗುರುತಿಸಲಾಗಿದ್ದು, ಅದರ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಲಾಗುತ್ತಿದೆ.
-ಎಲ್ಎಸಿಯಿಂದ ಎಲ್ಒಸಿವರೆಗೂ ನಮ್ಮೆಡೆಗೆ ದೃಷ್ಟಿ ಹಾಯಿಸಿಲು ಯತ್ನಿಸಿದವರಿಗೆ ಸೈನಿಕರು ತಕ್ಕ ಉತ್ತರ ನೀಡಿದ್ದಾರೆ.
-ಇವತ್ತಿನಿಂದ ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಆರಂಭಿಸುತ್ತಿದ್ದೇವೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಲಿದೆ
-ಭಾರತದಲ್ಲಿ ಮೂರು ಕೊರೊನಾ ಲಸಿಕೆಗಳ ಪ್ರಯೋಗ ನಡೆಯುತ್ತಿದ್ದು, ವಿಜ್ಞಾನಿಗಳ ಹಸಿರು ನಿಶಾನೆ ಸಿಕ್ಕ ಕೂಡಲೇ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಗೆ ತಯಾರಿ ನಡೆಸಿಕೊಳ್ಳಲಾಗುತ್ತಿದೆ
-ವಿಕಾಸದ ಈ ಯಾತ್ರೆಯಲ್ಲಿ ಸಮಾಜದಲ್ಲಿ ಜನರು ಹಿಂದೆ ಉಳಿದುಬಿಡುತ್ತಿದ್ದಾರೆ, ಬಡತನದಿಂದಾಗಿ ಮುಂದೆ ಬರಲು ಸಾಧ್ಯವಾಗುತ್ತಿಲ್ಲ. ಆತ್ಮ ನಿರ್ಭರ ಭಾರತವನ್ನಾಗಿಸಬೇಕು, ಹಿಂದುಳಿದ 110 ಜಿಲ್ಲೆಗಳನ್ನು ಗುರುತಿಸಿದ್ದು, ಅವುಗಳನ್ನು ಮುನ್ನಡೆಸುವ ಕುರಿತು ಆಲೋಚಿಸಲಾಗಿದೆ
-ಮೇಕ್ ಇನ್ ಇಂಡಿಯಾ ಜೊತೆಗೆ ಮೇಕ್ ಫಾರ್ ವರ್ಲ್ಡ್ ಘೋಷವಾಖ್ಯದೊಂದಿಗೆ ಮುನ್ನುಗ್ಗಬೇಕಿದೆ
-ರಾಷ್ಟ್ರೀಯ ಶಿಕ್ಷಣ ನೀತಿ, ಒಂದು ದೇಶ ಒಂದು ರೇಷನ್ ಕಾರ್ಡ್ ಯಾವುದೇ ಇರಲಿ ಪರಿವರ್ತನೆಯ ಕಾಲಘಟ್ಟವನ್ನು ವಿಶ್ವ ನೋಡುತ್ತಿದೆ
-ಆಧುನಿಕ ಭಾರತ ನಿರ್ಮಾಣದಲ್ಲಿ ದೇಶದ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ, ರಾಷ್ಟ್ರೀಯ ಶಿಕ್ಷಣ ನೀತಿ ಎಲ್ಲಾ ವಿದ್ಯಾರ್ಥಿಗಳನ್ನು ಒಂದುಗೂಡಿಸುತ್ತದೆ ಒಂದೇ ರೀತಿಯ ಶಿಕ್ಷಣ ಪಡೆಯುತ್ತಾರೆ
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications