ಪ್ಲಾಸ್ಟಿಕ್ ಬಳಕೆ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿ ಮನ್ ಕೀ ಬಾತ್
ನವದೆಹಲಿ, ಅಗಸ್ಟ್ 25: ಈ ವರ್ಷದ ಮೇ ತಿಂಗಳಲ್ಲಿ ಎರಡನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದ ಮೇಲೆ ಮೂರನೇ 'ಮನ್ ಕೀ ಬಾತ್' ರೇಡಿಯೋ ಕಾರ್ಯಕ್ರಮದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಕಾರ್ಯಕ್ರಮವು ಆಲ್ ಇಂಡಿಯಾ ರೇಡಿಯೋ, ದೂರದರ್ಶನ ಹಾಗೂ ನರೇಂದ್ರ ಮೋದಿ ಮೊಬೈಲ್ ಆಪ್ ನಲ್ಲಿ ಪ್ರಸಾರ ಆಯಿತು.
ಗಾಂಧೀ ಜಯಂತಿ ದಿನವಾದ ಅಕ್ಟೋಬರ್ ಎರಡರಿಂದ ಒಂದು ಬಾರಿಗೆ ಬಳಸುವ ಪ್ಲಾಸ್ಟಿಕ್ ವಿರುದ್ಧ 'ಹೊಸ ಸಾಮೂಹಿಕ ಚಳವಳಿ' ಆರಂಭಿಸುವ ಬಗ್ಗೆ ಹೇಳಿದ್ದ ನರೇಂದ್ರ ಮೋದಿ, ತಮ್ಮ ತಿಂಗಳ 'ಮನ್ ಕೀ ಬಾತ್' ಮತ್ತೊಮ್ಮೆ ಈ ವಿಚಾರವನ್ನು ಪ್ರಸ್ತಾಪಿಸಿದರು.
Recommended Video
ಬಹರೇನ್ ನಲ್ಲಿ ಶ್ರೀಕೃಷ್ಣ ದೇಗುಲದ ಪುನರ್ ಅಭಿವೃದ್ಧಿಗೆ ಮೋದಿ ಚಾಲನೆ
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ನೂರೈವತ್ತನೇ ಜನ್ಮ ವರ್ಷಾಚರಣೆ ಪ್ರಯುಕ್ತ ಪ್ಲಾಸ್ಟಿಕ್ ಬಳಕೆ ಪ್ರಯುಕ್ತ ಸಾಮೂಹಿಕ ಚಳವಳಿ ಆರಂಭಿಸಲಿದ್ದೇವೆ ಎಂದು ನರೇಂದ್ರ ಮೋದಿ ಹೇಳಿದರು. ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಅನ್ನು ಸರಿಯಾದ ವಿಧಾನದಲ್ಲಿ ಸಂಗ್ರಹ ಮಾಡಬೇಕು ಎಂದು ಸಲಹೆ ಮಾಡಿದರು.
ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಬಾರಿ ಬಳಕೆ ಮಾಡುವ ಪ್ಲಾಸ್ಟಿಕ್ ನಿರ್ಮೂಲನೆಗೆ ಕರೆ ನೀಡಿದ್ದರು. ಪರಿಸರಸ್ನೇಹಿ ಕ್ಯಾರಿ ಬ್ಯಾಗ್ ಬಳಕೆ ಮಾಡುವಂತೆ ವರ್ತಕರಿಗೆ ಸಲಹೆ ನೀಡಿದ್ದರು.