Vande Bharat Express: ಬೆಂಗಳೂರು-ಎರ್ನಾಕುಲಂ ರೈಲು ಉದ್ಘಾಟನೆಗೆ ದಿನಾಂಕ ಫಿಕ್ಸ್: ಪ್ರಧಾನಿ ಚಾಲನೆ
ಬೆಂಗಳೂರು/ದೆಹಲಿ, ನವೆಂಬರ್ 07: ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಸಂಪರ್ಕಿಸುವ ಮೊದಲ ವಂದೇ ಭಾರತ್ ರೈಲು ಸೇವೆಗೆ ಉದ್ಘಾಟನೆಗೆ ದಿನಾಂಕ ಫಿಕ್ಸ್ ಆಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 8ರಂದು ಬೆಂಗಳೂರು-ಕೊಚ್ಚಿ ನಡುವಿನ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಗುರುವಾರ ಅಧಿಕೃತ ಮಾಹಿತಿ ಹೊರ ಬಿದ್ದಿದೆ.
ಪ್ರಾರಂಭಿಕ ವಿಶೇಷ ರೈಲು (06652) ಬೆಳಗ್ಗೆ 8 ಗಂಟೆಗೆ ಎರ್ನಾಕುಲಂ ಜಂಕ್ಷನ್ನಿಂದ ಹೊರಟು ಸಂಜೆ 5.50ಕ್ಕೆ ಬೆಂಗಳೂರು ಕೆಎಸ್ಆರ್ ನಿಲ್ದಾಣ ತಲುಪಲಿದೆ. ರೈಲಿನಲ್ಲಿ ಎಂಟು ಬೋಗಿಗಳು ಇರಲಿವೆ. ಈ ರೈಲು ಸೇವೆಯ ಬಗ್ಗೆ ಭಾರತೀಯ ರೈಲ್ವೆ ಇಲಾಖೆಯು ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಪ್ರಧಾನಿ ಮೋದಿಯವರು ಇದೇ ಶನಿವಾರ ನವೆಂಬರ್ 08ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ ಪಿಎಂ ಕಚೇರಿ ಮಾಹಿತಿ ನೀಡಿದೆ.

ಪ್ರಯಾಣಿಕರಿಗೆ ದೈನಂದಿನ ರೈಲು ಸೇವೆ ಸಿಗುವ ಸಾಧ್ಯತೆ ಇದೆ. ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (26651/26652) ನವೆಂಬರ್ 11ರಿಂದ ಪ್ರಾರಂಭವಾಗಲಿದೆ. ಪ್ರಸ್ತುತ ಬೆಂಗಳೂರಿನ ಕೆಲವು ಕಾರ್ಯಾಚರಣೆ ಅಡಚಣೆಗಳನ್ನು ಪರಿಹರಿಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ಪ್ರಕಟಿಸಿದ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ, ರೈಲು ಬೆಳಿಗ್ಗೆ 5.10ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 1.50ಕ್ಕೆ ಎರ್ನಾಕುಳಂ ತಲುಪಲಿದೆ. ಹಿಂತಿರುಗುವ ರೈಲು ಮಧ್ಯಾಹ್ನ 2.20ಕ್ಕೆ ಎರ್ನಾಕುಳಂನಿಂದ ಹೊರಟು ರಾತ್ರಿ 11ಕ್ಕೆ ಬೆಂಗಳೂರಿಗೆ ತಲುಪಲಿದೆ. ಪ್ರಮುಖ ನಿಲ್ದಾಣಗಳು ಕೆಆರ್ ಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಳಕ್ಕಾಡ್ ಮತ್ತು ತ್ರಿಶೂರ್ ಗಳಲ್ಲಿ ನಿಲುಗಡೆ ನೀಡಲಿದ್ದಾರೆ.
ರಾಜ್ಯಕ್ಕೆ 12ನೇ, ಬೆಂಗಳೂರಿಗೆ 8 ವಂದೇ ಭಾರತ್ ರೈಲು
ಈ ಮಾರ್ಗದ ಅಂತಿಮ ವೇಳಾಪಟ್ಟಿಯನ್ನು ರೈಲ್ವೆ ಬೋರ್ಡ್ ನಂತರ ಪ್ರಕಟಿಸಲಿದೆ. ಈ ರೈಲು ಕರ್ನಾಟಕದ 12ನೇ ವಂದೇ ಭಾರತ್ ಇದಾಗಿದೆ. ಬೆಂಗಳೂರಿನ ಪಾಲಿಕೆಗೆ ಇದು 8ನೇ ವಂದೇ ಭಾರತ್ ರೈಲು ದಿಆಗಿದೆ. ಇದು ಕೇರಳದ 3ನೇ ವಂದೇ ಭಾರತ್ ಹಾಗೂ ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಮೊದಲ ರೈಲು.
ಐಟಿ ವೃತ್ತಿಪರರು, ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಈ ರೈಲು ಸೇವೆ ಪ್ರಯೋಜನಕಾರಿ ಆಗಲಿದೆ. ಜೊತೆಗೆ, ಕೇರಳ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಆರ್ಥಿಕತೆ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೂ ಸಹಕಾರಿ ಆಗಲಿದೆ. ಮೂರು ರಾಜ್ಯಗಳ ನಡುವೆ ಉತ್ತಮ ಸಾರಿಗೆ ಸೇತುವೆಯಾಗಲಿದೆ ಎಂದು ರೈಲ್ವೆ ಇಲಾಖೆ ಅಭಿಪ್ರಾಯಪಟ್ಟಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications